ಬ್ರೇಕಿಂಗ್ ನ್ಯೂಸ್
08-05-26 12:06 pm HK News Staffer ದೇಶ - ವಿದೇಶ
ಮುಂಬೈ, ಮೇ 8: ನವಿ ಮುಂಬೈನಿಂದ ಮಂಗಳೂರಿಗೆ ತೆರಳಬೇಕಿದ್ದ ವಿಮಾನದಲ್ಲಿ ಓರ್ವ ಪ್ರಯಾಣಿಕನ ಗಲಾಟೆ ಇಡೀ ಪ್ರಯಾಣವನ್ನು ಗೊಂದಲದ ಗೂಡನ್ನಾಗಿಸಿದ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು ಭಾರೀ ಚರ್ಚೆಗೆ ಕಾರಣವಾಗಿದೆ. ಸಾಮಾನ್ಯವಾಗಿ ಉದ್ದ ಸಾಲುಗಳು, ಭದ್ರತಾ ತಪಾಸಣೆ, ಗೇಟ್ ಬದಲಾವಣೆ ಮತ್ತು ವಿಳಂಬಗಳಿಂದಲೇ ವಿಮಾನ ಪ್ರಯಾಣಿಕರು ಬೇಸತ್ತಿರುತ್ತಾರೆ. ಆದರೆ ಈ ಬಾರಿ ಪರಿಸ್ಥಿತಿ ಮತ್ತಷ್ಟು ಕಿರಿಕಿರಿಯಾಗಿದ್ದು, ವಿಮಾನದೊಳಗೇ ವಾಗ್ವಾದ ಮತ್ತು ಉದ್ವಿಗ್ನತೆ ಸೃಷ್ಟಿಯಾಗಿದೆ.
ಮಾಹಿತಿ ಪ್ರಕಾರ, ಮುಂಬೈಯಿಂದ ಗುರುವಾರ ಬೆಳಗ್ಗೆ 11 ಗಂಟೆಗೆ ಟೇಕ್ ಆಫ್ ಆಗಬೇಕಿದ್ದ ವಿಮಾನ, ಓರ್ವ ಪ್ರಯಾಣಿಕ ತನ್ನ ಪತ್ನಿಯೊಂದಿಗೆ ತಡವಾಗಿ ಆಗಮಿಸಿದ ಕಾರಣ ಮಧ್ಯಾಹ್ನ 12.23ಕ್ಕೆ ಹೊರಟಿದೆ. ಆ ವೇಳೆ ಉಳಿದ ಎಲ್ಲಾ ಪ್ರಯಾಣಿಕರು ಅದಾಗಲೇ ವಿಮಾನದಲ್ಲಿ ಕುಳಿತು ಕಾಯುತ್ತಿದ್ದರು. ಸಾಮಾಜಿಕ ಜಾಲತಾಣ X ನಲ್ಲಿ ವೈರಲ್ ಆದ ವಿಡಿಯೋದಲ್ಲಿ, ತಡವಾಗಿ ಬಂದ ಪ್ರಯಾಣಿಕ ಹಾಗೂ ಬಳಿಕ ವಿಮಾನಕ್ಕೇರಿದ ಅವರ ಪತ್ನಿಯನ್ನು ನೋಡಿ ಕೆಲವರು ವ್ಯಂಗ್ಯವಾಗಿ ಚಪ್ಪಾಳೆ ತಟ್ಟಿ ಅಸಮಾಧಾನ ಹೊರಹಾಕಿರುವುದು ಕಂಡುಬಂದಿದೆ.
ಆದರೆ ಘಟನೆ ಅಲ್ಲಿಗೇ ನಿಲ್ಲಲಿಲ್ಲ. ಬಳಿಕ ವಿಮಾನದೊಳಗೆ ಕೆಲ ಪ್ರಯಾಣಿಕರು ತೀವ್ರ ವಾಗ್ವಾದ ನಡೆಸಿದ್ದಾರೆ. ಆತ ಸಹ ಪ್ರಯಾಣಿಕರೊಂದಿಗೆ ಆಕ್ರೋಶದಿಂದ ಮಾತನಾಡಿ, ಅಸಭ್ಯ ಪದ ಬಳಕೆ ಮಾಡಿದ್ದಲ್ಲದೆ, “ನೀಚೇ ಉತರ್ ದಿಖಾತಾ ಹೂಂ ಕೌನ್ ಹೂಂ ಮೈ…” (ಕೆಳಗಿಳಿದ ಬಳಿಕ ನಾನ್ಯಾರೆಂದು ತೋರಿಸುತ್ತೇನೆ) ಎಂದು ಬೆದರಿಕೆ ಹಾಕಿದ್ದಾನೆ.
ತನ್ನ ವಿಳಂಬವನ್ನು ಸಮರ್ಥಿಸಿಕೊಳ್ಳಲು “ವಿಮಾನಗಳು ಯಾವಾಗಲೂ ತಡವಾಗುತ್ತವೆ” ಎಂದು ಆತ ಹೇಳಿದ ಮಾತು ಉಳಿದ ಪ್ರಯಾಣಿಕರ ಕೋಪವನ್ನು ಇನ್ನಷ್ಟು ಹೆಚ್ಚಿಸಿದೆ. ಕೊನೆಗೆ ಪ್ರಯಾಣಿಕರ ಒತ್ತಾಯದ ಮೇರೆಗೆ ಆತ ಕ್ಷಮೆ ಕೇಳಿದ್ದಾನೆ. ಬಳಿಕ ವಿಮಾನ ಮಂಗಳೂರು ಕಡೆ ಪ್ರಯಾಣ ಮುಂದುವರಿಸಿತು.
ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸಾರ್ವಜನಿಕ ಶಿಸ್ತು ಮತ್ತು ಪರಸ್ಪರ ಗೌರವದ ಬಗ್ಗೆ ದೊಡ್ಡ ಚರ್ಚೆ ಆರಂಭವಾಗಿದೆ. ಸಮಯಕ್ಕೆ ಸರಿಯಾಗಿ ಬಂದು ಎಲ್ಲಾ ನಿಯಮಗಳನ್ನು ಪಾಲಿಸುವ ಪ್ರಯಾಣಿಕರಿಗೆ, ಕೆಲವರು ಮಾತ್ರ ತಮ್ಮ ಅನುಕೂಲಕ್ಕೆ ತಕ್ಕಂತೆ ವರ್ತಿಸುವುದು ಅಸಮಾಧಾನ ಮೂಡಿಸಿದೆ.
@Ministry_CA @mohol_murlidhar @Dev_Fadnavis @NidhiKamdarMH
— Punita Toraskar (@impuni) May 7, 2026
I am on board Mangaluru flight from Navi Mumbai . Our flight which was supposed to take off at 11.00 is taking off now at 12.23 bcoz of one passenger who arrived at 1100 for a flight supposed to take off at 1100 .
And… pic.twitter.com/LsMTz9I6yW
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
27-07-26 01:09 pm
HK News Staffer
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm