ಬ್ರೇಕಿಂಗ್ ನ್ಯೂಸ್
08-05-26 06:38 pm HK News Staffer ದೇಶ - ವಿದೇಶ
ಚೆನ್ನೈ, ಮೇ 8: ತಮಿಳುನಾಡಿನಲ್ಲಿ ತಮಿಳಗ ವೆಟ್ರಿ ಕಳಗಂ(ಟಿವಿಕೆ) ಮುಖ್ಯಸ್ಥ ವಿಜಯ್ ಅವರಿಗೆ ಕೊನೆಗೂ ಬಹುಮತದ ಮ್ಯಾಜಿಕ್ ನಂಬರ್ ಸಿಕ್ಕಿದ್ದು, ಕಾಂಗ್ರೆಸ್ ನಂತರ ಎಡರಂಗ ಮತ್ತು ವಿಸಿಕೆ ಪಾರ್ಟಿಯೂ ಬೆಂಬಲ ಘೋಷಿಸಿವೆ. ಹೀಗಾಗಿ ದಳಪತಿ ವಿಜಯ್ ಅವರು ಶೀಘ್ರದಲ್ಲೇ ತಮಿಳುನಾಡಿನ ನೂತನ ಮುಖ್ಯಮಂತ್ರಿಯಾಗಲಿದ್ದಾರೆ.
ಸರ್ಕಾರ ರಚನೆಗೆ ನಟ-ರಾಜಕಾರಣಿ ವಿಜಯ್ ನೇತೃತ್ವದ ಟಿವಿಕೆಗೆ ಸಿಪಿಐ ಮತ್ತು ಸಿಪಿಎಂ ಶುಕ್ರವಾರ ಬೇಷರತ್ ಬೆಂಬಲ ಘೋಷಿಸಿದೆ. ಇದರ ಬೆನ್ನಲ್ಲೇ ವಿಸಿಕೆ ಸಹ ಟಿವಿಕೆಗೆ ಬೆಂಬಲ ಘೋಷಿಸಿ ರಾಜ್ಯಪಾಲರಿಗೆ ಪತ್ರ ಬರೆದಿದೆ. ಶುಕ್ರವಾರ ಸುದೀರ್ಘ ಚರ್ಚೆಯ ನಂತರ, ಎಡಪಕ್ಷಗಳು ವಿಜಯ್ ಅವರ ಟಿವಿಕೆಗೆ ಬೆಂಬಲ ನೀಡಲು ನಿರ್ಧರಿಸಿತು. ಆನಂತರ, ಈ ಕುರಿತ ಪತ್ರವನ್ನು ತಮಿಳುನಾಡು ರಾಜ್ಯಪಾಲ ಆರ್.ವಿ. ಅರ್ಲೇಕರ್ ಅವರಿಗೆ ಕಳುಹಿಸಲಾಗಿದೆ.
ಇದೇ ರೀತಿಯ ಜಂಜಾಟ ಮುಂದುವರಿದರೆ ಮೇ 10ರ ಬಳಿಕ ರಾಷ್ಟ್ರಪತಿ ಆಡಳಿತ ಹೇರಲು ಬಿಜೆಪಿ ಮುಂದಾಗಿದೆ. ಆಮೂಲಕ ಹಿಂಬಾಗಿಲಿನಿಂದ ಬಿಜೆಪಿ ರಾಜ್ಯದ ಆಡಳಿತ ನಡೆಸಲಿದೆ. ಇದನ್ನು ತಪ್ಪಿಸಲು ನಾವು ಟಿವಿಕೆಗೆ ಬೇಷರತ್ ಬೆಂಬಲ ನೀಡಿದ್ದೇವೆ, ನಾವು ಯಾವುದೇ ಕ್ಯಾಬಿನೆಟ್ ಸ್ಥಾನ ಬಯಸುವುದಿಲ್ಲ ಎಂದು ಸಿಪಿಐಎಂ ರಾಜ್ಯ ಸೆಕ್ರೆಟರಿ ಟಿ.ಟಿ ಷಣ್ಮುಗಂ ತಿಳಿಸಿದ್ದಾರೆ. 234 ಸದಸ್ಯ ಬಲದ ತಮಿಳುನಾಡು ವಿಧಾನಸಭೆಯಲ್ಲಿ ಸಿಪಿಐ ಮತ್ತು ಸಿಪಿಎಂ ತಲಾ ಇಬ್ಬರು ಶಾಸಕರನ್ನು ಹೊಂದಿದೆ. ಇದರ ಬೆನ್ನಲ್ಲೇ ವಿಸಿಕೆ(2) ಮತ್ತು ಒಂದೊಂದು ಸ್ಥಾನ ಇರುವ ಮುಸ್ಲಿಂ ಲೀಗ್ ಮತ್ತು ಎಕೆಎಂಎಂ ಕೂಡ ವಿಜಯ್ ಸರ್ಕಾರಕ್ಕೆ ಬೆಂಬಲ ನೀಡಿವೆ. ಇದರೊಂದಿಗೆ ವಿಜಯ್ ಸರ್ಕಾರದ ಬಲಾಬಲ 121 ಸ್ಥಾನಗಳಿಗೆ ಏರಿದೆ.
ಎಡಪಕ್ಷಗಳು ಮತ್ತು ಐಯುಎಂಎಲ್ ಡಿಎಂಕೆ ಮೈತ್ರಿಯಲ್ಲಿತ್ತಾದರೂ, ವಿಜಯ್ ಬೆಂಬಲ ಕೋರಿಕೆಯ ನಂತರ ಮಿತ್ರ ಪಕ್ಷಗಳಿಗೆ ನೀವು ಸರ್ಕಾರ ಸೇರುವ ಬಗ್ಗೆ ನಿರ್ಧಾರ ಮಾಡಿಕೊಳ್ಳಬಹುದು. ತನ್ನದೇನೂ ಅಭ್ಯಂತರ ಇಲ್ಲವೆಂದು ಡಿಎಂಕೆ ಮುಖ್ಯಸ್ಥ ಎಂಕೆ ಸ್ಟಾಲಿನ್ ಹೇಳಿದ್ದರು. ಇದರ ಬೆನ್ನಲ್ಲೇ ಈ ಪಕ್ಷಗಳು ದಳಪತಿ ವಿಜಯ್ ಸರ್ಕಾರಕ್ಕೆ ಬೆಂಬಲ ನೀಡಿವೆ.
22-06-26 03:44 pm
HK News Staffer
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
Cross Voting Row, Vijayendra: ಅಡ್ಡ ಮತದಾನ ; ಧರ...
21-06-26 02:18 pm
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
ಬಿಡದಿ ಟೌನ್ ಶಿಪ್ ನೆಪದಲ್ಲಿ 750 ರೈತ ಕುಟುಂಬಗಳು ಬೀ...
20-06-26 01:33 pm
22-06-26 12:55 pm
HK News Staffer
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
21-06-26 08:59 pm
HK News Staffer
Yekkur, Mangalore Accident:ಎಕ್ಕೂರು ಹೆದ್ದಾರಿಯಲ...
21-06-26 01:13 pm
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
22-06-26 12:53 pm
HK News Staffer
ಕಡಬ ; ಪತ್ನಿಯನ್ನು ಕಡಿದು ಕೊಂದು ನೇಣು ಬಿಗಿದು ಸಾವಿ...
20-06-26 09:13 pm
ಸೂಲಿಬೆಲೆಯಲ್ಲಿ ಭೀಕರ ಅಪಘಾತ ; ಬಿಎಂಟಿಸಿ ಬಸ್ ಡ್ರೈ...
20-06-26 04:43 pm
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm