ಬ್ರೇಕಿಂಗ್ ನ್ಯೂಸ್
08-05-26 06:38 pm HK News Staffer ದೇಶ - ವಿದೇಶ
ಚೆನ್ನೈ, ಮೇ 8: ತಮಿಳುನಾಡಿನಲ್ಲಿ ತಮಿಳಗ ವೆಟ್ರಿ ಕಳಗಂ(ಟಿವಿಕೆ) ಮುಖ್ಯಸ್ಥ ವಿಜಯ್ ಅವರಿಗೆ ಕೊನೆಗೂ ಬಹುಮತದ ಮ್ಯಾಜಿಕ್ ನಂಬರ್ ಸಿಕ್ಕಿದ್ದು, ಕಾಂಗ್ರೆಸ್ ನಂತರ ಎಡರಂಗ ಮತ್ತು ವಿಸಿಕೆ ಪಾರ್ಟಿಯೂ ಬೆಂಬಲ ಘೋಷಿಸಿವೆ. ಹೀಗಾಗಿ ದಳಪತಿ ವಿಜಯ್ ಅವರು ಶೀಘ್ರದಲ್ಲೇ ತಮಿಳುನಾಡಿನ ನೂತನ ಮುಖ್ಯಮಂತ್ರಿಯಾಗಲಿದ್ದಾರೆ.
ಸರ್ಕಾರ ರಚನೆಗೆ ನಟ-ರಾಜಕಾರಣಿ ವಿಜಯ್ ನೇತೃತ್ವದ ಟಿವಿಕೆಗೆ ಸಿಪಿಐ ಮತ್ತು ಸಿಪಿಎಂ ಶುಕ್ರವಾರ ಬೇಷರತ್ ಬೆಂಬಲ ಘೋಷಿಸಿದೆ. ಇದರ ಬೆನ್ನಲ್ಲೇ ವಿಸಿಕೆ ಸಹ ಟಿವಿಕೆಗೆ ಬೆಂಬಲ ಘೋಷಿಸಿ ರಾಜ್ಯಪಾಲರಿಗೆ ಪತ್ರ ಬರೆದಿದೆ. ಶುಕ್ರವಾರ ಸುದೀರ್ಘ ಚರ್ಚೆಯ ನಂತರ, ಎಡಪಕ್ಷಗಳು ವಿಜಯ್ ಅವರ ಟಿವಿಕೆಗೆ ಬೆಂಬಲ ನೀಡಲು ನಿರ್ಧರಿಸಿತು. ಆನಂತರ, ಈ ಕುರಿತ ಪತ್ರವನ್ನು ತಮಿಳುನಾಡು ರಾಜ್ಯಪಾಲ ಆರ್.ವಿ. ಅರ್ಲೇಕರ್ ಅವರಿಗೆ ಕಳುಹಿಸಲಾಗಿದೆ.
ಇದೇ ರೀತಿಯ ಜಂಜಾಟ ಮುಂದುವರಿದರೆ ಮೇ 10ರ ಬಳಿಕ ರಾಷ್ಟ್ರಪತಿ ಆಡಳಿತ ಹೇರಲು ಬಿಜೆಪಿ ಮುಂದಾಗಿದೆ. ಆಮೂಲಕ ಹಿಂಬಾಗಿಲಿನಿಂದ ಬಿಜೆಪಿ ರಾಜ್ಯದ ಆಡಳಿತ ನಡೆಸಲಿದೆ. ಇದನ್ನು ತಪ್ಪಿಸಲು ನಾವು ಟಿವಿಕೆಗೆ ಬೇಷರತ್ ಬೆಂಬಲ ನೀಡಿದ್ದೇವೆ, ನಾವು ಯಾವುದೇ ಕ್ಯಾಬಿನೆಟ್ ಸ್ಥಾನ ಬಯಸುವುದಿಲ್ಲ ಎಂದು ಸಿಪಿಐಎಂ ರಾಜ್ಯ ಸೆಕ್ರೆಟರಿ ಟಿ.ಟಿ ಷಣ್ಮುಗಂ ತಿಳಿಸಿದ್ದಾರೆ. 234 ಸದಸ್ಯ ಬಲದ ತಮಿಳುನಾಡು ವಿಧಾನಸಭೆಯಲ್ಲಿ ಸಿಪಿಐ ಮತ್ತು ಸಿಪಿಎಂ ತಲಾ ಇಬ್ಬರು ಶಾಸಕರನ್ನು ಹೊಂದಿದೆ. ಇದರ ಬೆನ್ನಲ್ಲೇ ವಿಸಿಕೆ(2) ಮತ್ತು ಒಂದೊಂದು ಸ್ಥಾನ ಇರುವ ಮುಸ್ಲಿಂ ಲೀಗ್ ಮತ್ತು ಎಕೆಎಂಎಂ ಕೂಡ ವಿಜಯ್ ಸರ್ಕಾರಕ್ಕೆ ಬೆಂಬಲ ನೀಡಿವೆ. ಇದರೊಂದಿಗೆ ವಿಜಯ್ ಸರ್ಕಾರದ ಬಲಾಬಲ 121 ಸ್ಥಾನಗಳಿಗೆ ಏರಿದೆ.
ಎಡಪಕ್ಷಗಳು ಮತ್ತು ಐಯುಎಂಎಲ್ ಡಿಎಂಕೆ ಮೈತ್ರಿಯಲ್ಲಿತ್ತಾದರೂ, ವಿಜಯ್ ಬೆಂಬಲ ಕೋರಿಕೆಯ ನಂತರ ಮಿತ್ರ ಪಕ್ಷಗಳಿಗೆ ನೀವು ಸರ್ಕಾರ ಸೇರುವ ಬಗ್ಗೆ ನಿರ್ಧಾರ ಮಾಡಿಕೊಳ್ಳಬಹುದು. ತನ್ನದೇನೂ ಅಭ್ಯಂತರ ಇಲ್ಲವೆಂದು ಡಿಎಂಕೆ ಮುಖ್ಯಸ್ಥ ಎಂಕೆ ಸ್ಟಾಲಿನ್ ಹೇಳಿದ್ದರು. ಇದರ ಬೆನ್ನಲ್ಲೇ ಈ ಪಕ್ಷಗಳು ದಳಪತಿ ವಿಜಯ್ ಸರ್ಕಾರಕ್ಕೆ ಬೆಂಬಲ ನೀಡಿವೆ.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
27-07-26 01:09 pm
HK News Staffer
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm