ಬ್ರೇಕಿಂಗ್ ನ್ಯೂಸ್
09-05-26 11:14 am HK News Staffer ದೇಶ - ವಿದೇಶ
ನವದೆಹಲಿ, ಮೇ 9: ಪೆಹಲ್ಗಾಮ್ ಉಗ್ರ ದಾಳಿಗೆ ಪ್ರತೀಕಾರ ತೀರಿಸಿಕೊಳ್ಳಲು ಪಾಕಿಸ್ತಾನ ವಿರುದ್ಧ ಭಾರತ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ನಡೆಸಿತ್ತು. ಈ ವೇಳೆ, ಶತ್ರು ರಾಷ್ಟ್ರ ಪಾಕಿಸ್ತಾನಕ್ಕೆ ನೆರೆ ರಾಷ್ಟ್ರ ಚೀನಾ ಸಹಾಯ ಮಾಡಿರುವುದು ಈಗ ಸ್ಪಷ್ಟವಾಗಿದೆ. ಸ್ವತಃ ಚೀನಾ ಈ ಅಂಶವನ್ನು ಒಪ್ಪಿಕೊಂಡಿದೆ.
ಭಾರತದೊಂದಿಗಿನ ಯುದ್ಧ ಸಮಯದಲ್ಲಿ ಪಾಕಿಸ್ತಾನಕ್ಕೆ ಆನ್-ಸೈಟ್ ತಾಂತ್ರಿಕ ಬೆಂಬಲವನ್ನು ನೀಡಿರುವುದಾಗಿ ಚೀನಾ ಮೊದಲ ಬಾರಿಗೆ ದೃಢಪಡಿಸಿದೆ ಎಂದು ಸೌತ್ ಚೀನಾ ಮಾರ್ನಿಂಗ್ ಪೋಸ್ಟ್ ವರದಿ ಮಾಡಿದೆ. ಕಳೆದ ವರ್ಷ ಏಪ್ರಿಲ್ 22 ರಂದು ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದ ಭಯೋತ್ಪಾದಕ ದಾಳಿಯ ನಂತರ ಭಾರತ ಮತ್ತು ಪಾಕಿಸ್ತಾನದ ನಡುವೆ ಉದ್ವಿಗ್ನತೆ ಹೆಚ್ಚಾಗಿತ್ತು, ಪೆಹಲ್ಗಾಮ್ ಉಗ್ರ ದಾಳಿಯಲ್ಲಿ 26 ಮಂದಿ ಪ್ರವಾಸಿಗರನ್ನು ಭಯೋತ್ಪಾದಕರು ಕೊಂದಿದ್ದರು.
ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಕಾಶ್ಮೀರ (ಪಿಒಕೆ) ದಲ್ಲಿನ 9 ಭಯೋತ್ಪಾದನಾ ಶಿಬಿರಗಳನ್ನು ಗುರಿಯಾಗಿಸಿ ಭಾರತ ದಾಳಿ ನಡೆಸಿತ್ತು. ಜೈಶ್-ಎ-ಮೊಹಮ್ಮದ್, ಲಷ್ಕರ್-ಎ-ತೈಬಾ ಮತ್ತು ಹಿಜ್ಬುಲ್ ಮುಜಾಹಿದ್ದೀನ್ ಸೇರಿದಂತೆ ಉಗ್ರವಾದಿ ಗುಂಪುಗಳಿಗೆ ಸೇರಿದ 100 ಕ್ಕೂ ಹೆಚ್ಚು ಭಯೋತ್ಪಾದಕರು ಸಾವನ್ನಪ್ಪಿದರು. ಚೀನಾದ ಟಿವಿ ಮಾಧ್ಯಮವೊಂದು ವಾಯುಯಾನ ಉದ್ಯಮ ನಿಗಮದ ಎಂಜಿನಿಯರ್ಗಳು ಪಾಕಿಸ್ತಾನಿ ಕಾರ್ಯಾಚರಣೆಗಳನ್ನು ಬೆಂಬಲಿಸಿದ್ದಾಗಿ ತಿಳಿಸಿದ್ದಾರೆ. ಆಮೂಲಕ ಭಾರತ- ಪಾಕಿಸ್ತಾನ ಘರ್ಷಣೆಯಲ್ಲಿ ಚೀನಾದ ಸಿಬ್ಬಂದಿ ಪಾತ್ರ ವಹಿಸಿದ್ದಾರೆ ಎಂಬುದನ್ನು ಈ ಮೂಲಕ ಬೀಜಿಂಗ್ ಮೊದಲ ಬಾರಿಗೆ ಒಪ್ಪಿಕೊಂಡಿದೆ.
ಚೆಂಗ್ಡು ವಿಮಾನ ವಿನ್ಯಾಸ ಮತ್ತು ಸಂಶೋಧನಾ ಸಂಸ್ಥೆಯ ಎಂಜಿನಿಯರ್ ಜಾಂಗ್ ಹೆಂಗ್, ಸಂಘರ್ಷದ ಸಮಯದಲ್ಲಿ ಪಾಕಿಸ್ತಾನಕ್ಕೆ ತಾಂತ್ರಿಕ ಬೆಂಬಲ ನೀಡಿದವರಲ್ಲಿ ಒಬ್ಬರು ಎಂದು ವರದಿ ತಿಳಿಸಿದೆ. ಈ ಸಂಸ್ಥೆ ಚೀನಾದ ಮುಂದುವರಿದ ಯುದ್ಧ ವಿಮಾನಗಳು ಮತ್ತು ಮಾನವರಹಿತ ವೈಮಾನಿಕ ವಾಹನಗಳ ಪ್ರಮುಖ ಅಭಿವೃದ್ಧಿ ಸಂಸ್ಥೆಯಾಗಿದೆ. ಪಾಕಿಸ್ತಾನದ ವಾಯುಪಡೆಯು ಚೀನಾದ AVIC ಅಂಗಸಂಸ್ಥೆಯಿಂದ ತಯಾರಾದ ಚೀನಾ ನಿರ್ಮಿತ J-10CE ಜೆಟ್ಗಳನ್ನು ಯುದ್ಧಕ್ಕೆ ಬಳಸಿತ್ತು.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
27-07-26 01:09 pm
HK News Staffer
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm