ಬ್ರೇಕಿಂಗ್ ನ್ಯೂಸ್
10-05-26 09:15 pm HK News Desk ದೇಶ - ವಿದೇಶ
ಚೆನ್ನೈ, ಮೇ 10: ತಮಿಳಿನ ಸೂಪರ್ ಸ್ಟಾರ್ ನಟರಾಗಿದ್ದ ವಿಜಯ್ ಈಗ ತಮಿಳುನಾಡು ಮುಖ್ಯಮಂತ್ರಿ ಪದವಿಗೇರಿದ್ದಾರೆ. ಸಾಮಾನ್ಯ ಚಿತ್ರ ನಟನಾಗಿದ್ದ ಮನುಷ್ಯ ಇಷ್ಟು ಬೇಗ ಸಿಎಂ ಪದವಿಗೇರುತ್ತಾನೆಂದು ಯಾವೊಬ್ಬ ರಾಜಕಾರಣಿಯೂ ಅಂದುಕೊಂಡಿರಲಿಲ್ಲ. ಅಂಥದ್ದರಲ್ಲಿ ಇದೀಗ ಪ್ರಮಾಣ ವಚನ ಸಮಾರಂಭದಲ್ಲೂ ವಿಶೇಷ ಎನ್ನಿಸುವಷ್ಟರ ಮಟ್ಟಿಗೆ ವಿಜಯ್ ಗಮನ ಸೆಳೆದಿದ್ದಾರೆ.
ಕಾಂಗ್ರೆಸ್, ಮುಸ್ಲಿಂ ಲೀಗ್ ಇನ್ನಿತರ ಸೆಕ್ಯುಲರ್ ಪಕ್ಷಗಳೊಂದಿಗೆ ಸೇರಿ ವಿಜಯ್ ಮೈತ್ರಿ ಸರ್ಕಾರ ರಚಿಸಿದರೂ ಪ್ರಮಾಣ ವಚನ ಸಮಾರಂಭದಲ್ಲೇ ವಂದೇ ಮಾತರಂ ಗೀತೆಯನ್ನು ಸಂಪೂರ್ಣ ಹಾಡಿಸುವ ಮೂಲಕ ಇಡೀ ದೇಶಕ್ಕೆ ಹೊಸ ಸಂದೇಶ ನೀಡಿದ್ದಾರೆ. ಇತ್ತೀಚೆಗಷ್ಟೇ ಕೇಂದ್ರ ಬಿಜೆಪಿ ಸರ್ಕಾರ ಸ್ವಾತಂತ್ರ್ಯ ಕಾಲದಲ್ಲಿ ಜನರನ್ನು ಒಂದುಗೂಡಿಸಿದ್ದ ವಂದೇ ಮಾತರಂ ಗೀತೆಗೆ ರಾಷ್ಟ್ರಗೀತೆ ಜನಗಣ ಮನ ಗೀತೆಯಷ್ಟೇ ಪ್ರಾಮುಖ್ಯತೆ ಕೊಡಬೇಕೆಂದು ಕಾನೂನು ಆದೇಶ ಮಾಡಿತ್ತು. ಆದರೆ ಸೆಕ್ಯುಲರ್, ತುಷ್ಟೀಕರಣದ ರಾಜಕೀಯದ ಕಾರಣಕ್ಕೆ ಬಿಜೆಪಿ ಸರ್ಕಾರದ ನಡೆಗೆ ಕಾಂಗ್ರೆಸ್ ಟೀಕೆ ಮಾಡಿತ್ತು.


ಆದರೆ ಗೀತೆಯನ್ನು ವಿರೋಧಿಸಿದ್ದ ರಾಹುಲ್ ಗಾಂಧಿ ಎದುರಲ್ಲೇ ಇದೀಗ ವಂದೇ ಮಾತರಂ ಗೀತೆಯನ್ನು ವಿಜಯ್ ತನ್ನ ಪ್ರಮಾಣವಚನ ಸಮಾರಂಭದಲ್ಲಿ ಹಾಡಿಸಿ ಗಮನ ಸೆಳೆದಿದ್ದಾರೆ. ಪೂರ್ಣ ಗೀತೆ ಹಾಡಿಸಿದ್ದಲ್ಲದೆ, ರಾಹುಲ್ ಸೇರಿದಂತೆ ಎಲ್ಲ ಸೆಕ್ಯುಲರ್ ನಾಯಕರೂ ಗೀತೆಗೆ ಎದ್ದು ನಿಂತು ಗೌರವ ಸೂಚಿಸುವಂತೆ ಮಾಡಿಸಿದ್ದಾರೆ. ವಿಶೇಷ ಅಂದರೆ, ನಿನ್ನೆ ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಸರ್ಕಾರ ಪ್ರಮಾಣ ವಚನ ಸ್ವೀಕರಿಸಿದರೂ ವಂದೇ ಮಾತರಂ ಪೂರ್ಣ ಗೀತೆಗೆ ಆದ್ಯತೆ ಕೊಟ್ಟಿರಲಿಲ್ಲ. ಬಂಗಾಳದ್ದೇ ಆದ ಬಂಕಿಮಚಂದ್ರ ಚಟರ್ಜಿ ವಂದೇ ಮಾತರಂ ಗೀತೆಯನ್ನು ರಚಿಸಿದ್ದರೂ, ರಾಷ್ಟ್ರಗೀತೆಯ ಮಾನ್ಯತೆ ಕೊಟ್ಟಿದ್ದ ಬಿಜೆಪಿ ಅವರದೇ ನಾಡಿನಲ್ಲಿ ಹೆಚ್ಚು ಮಹತ್ವ ಕೊಟ್ಟಿರಲಿಲ್ಲ.
ಸೆಕ್ಯುಲರ್ ಕಾರಣಕ್ಕೆ ಬಿಜೆಪಿ ಮತ್ತು ಅದರ ಸಿದ್ಧಾಂತವನ್ನು ವಿರೋಧಿಸುತ್ತ ಇದೀಗ ಸೆಕ್ಯುಲರ್ ಪಕ್ಷಗಳ ಜೊತೆಗೇ ಸೇರಿಕೊಂಡು ಸರ್ಕಾರ ರಚಿಸಿದ ಜೋಸೆಫ್ ವಿಜಯ್ ಅಧಿಕಾರ ಸ್ವೀಕರಿಸಿದ ಮೊದಲ ದಿನವೇ ಬಿಜೆಪಿಗೆ ಠಕ್ಕರ್ ನೀಡಿ ರಾಜ್ಯಕ್ಕೆ ಹೊಸ ಸಂದೇಶ ನೀಡಿರುವುದು ವಿಶೇಷ. ತನ್ನ ಭಾಷಣದಲ್ಲಿಯೂ ಸೆಕ್ಯುಲರ್ ಆಡಳಿತದ ಹೊಸ ಅನುಭವ ಜನರಿಗೆ ನೀಡಲಿದ್ದೇನೆ ಎನ್ನುವ ವಾಗ್ದಾನವನ್ನೂ ವಿಜಯ್ ಮಾಡಿದ್ದಾರೆ.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
27-07-26 01:09 pm
HK News Staffer
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm