ಬ್ರೇಕಿಂಗ್ ನ್ಯೂಸ್
10-05-26 09:38 pm HK News Desk ದೇಶ - ವಿದೇಶ
ಕೊಲ್ಕತ್ತಾ, ಮೇ 10: ಮಮತಾ ಬ್ಯಾನರ್ಜಿ ಸರ್ಕಾರದಲ್ಲಿ ತಮ್ಮ ಪಕ್ಷದ ಬೆಂಬಲಿತ ನಾಯಕರ ಪತ್ರಿಕೆ, ತಮ್ಮ ಪರವಾಗಿರುವ ಪತ್ರಿಕೆಗಳು ಅಥವಾ ಇನ್ನಿತರ ಮಾಧ್ಯಮಗಳಿಗೆ ಮಾತ್ರ ಸರ್ಕಾರಿ ಜಾಹೀರಾತು ನೀಡುವ ಪದ್ಧತಿ ಜಾರಿಗೆ ತರಲಾಗಿತ್ತು. ಇದೀಗ ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಸರ್ಕಾರ ಬಂದ ಬೆನ್ನಲ್ಲೇ ಸಿಪಿಎಂ ಪಕ್ಷದ ಪತ್ರಿಕೆಗೆ ಬಹುಕಾಲದ ಬಳಿಕ ಜಾಹೀರಾತು ಸಿಕ್ಕಿದೆ.
ಪಶ್ಚಿಮ ಬಂಗಾಳದಲ್ಲಿ ಬರೋಬ್ಬರಿ 35 ವರ್ಷಗಳ ಕಾಲ ಅಧಿಕಾರದಲ್ಲಿದ್ದ ಸಿಪಿಎಂ, ಅಧಿಕಾರ ಕಳೆದುಕೊಂಡ ನಂತರ ಮಮತಾ ಬ್ಯಾನರ್ಜಿ ಅವರ ದ್ವೇಷದ ರಾಜಕಾರಣದಿಂದಾಗಿ ಸಾಕಷ್ಟು ಸಂಕಷ್ಟಗಳನ್ನು ಎದುರಿಸಿತ್ತು. ಮಮತಾ ಬ್ಯಾನರ್ಜಿ ಮುಖ್ಯಮಂತ್ರಿಯಾದ ಮೇಲೆ, ಕಳೆದ 15 ವರ್ಷಗಳಲ್ಲಿ ಸಿಪಿಎಂ ಪಕ್ಷದ ಪರವಾಗಿದ್ದ ಯಾವುದೇ ಪತ್ರಿಕೆಗೆ ಸರ್ಕಾರಿ ಜಾಹೀರಾತುಗಳೇ ಸಿಕ್ಕಿರಲಿಲ್ಲ. ಆದರೆ ಈಗ, ಬಿಜೆಪಿ ಅಧಿಕಾರಕ್ಕೆ ಬಂದು, ಪ್ರಮಾಣ ವಚನ ಸ್ವೀಕರಿಸಿದ ದಿನವೇ ಎಲ್ಲ ಪತ್ರಿಕೆಗಳಿಗೆ ನೀಡಿದಂತೆ ಸಿಪಿಎಂ ಪತ್ರಿಕೆಗೂ ಸರ್ಕಾರಿ ಜಾಹೀರಾತು ನೀಡಲಾಗಿದೆ.
ಮಮತಾ ಬ್ಯಾನರ್ಜಿ ಸರ್ಕಾರದಲ್ಲಿ ತನ್ನ ಪರವಾಗಿಲ್ಲದ ಹಲವು ಪತ್ರಿಕೆಗಳಿಗೆ ಜಾಹೀರಾತು ನಿಷೇಧಿಸಲಾಗಿತ್ತು. ಆದರೆ ಬಂಗಾಳದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ಬೆನ್ನಲ್ಲೇ ಸಿಪಿಎಂ ಮುಖವಾಣಿ 'ಗಣಶಕ್ತಿ' ಪತ್ರಿಕೆಯ ಮೊದಲ ಪುಟದಲ್ಲೇ ಸರ್ಕಾರದ ಅಧಿಕೃತ ಜಾಹೀರಾತು ಪ್ರಕಟವಾಗಿದೆ. ಜಾಹೀರಾತಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಹೊಸ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದ ಸುವೇಂದು ಅಧಿಕಾರಿ ಅವರ ಫೋಟೋಗಳನ್ನು ಕೊಡಲಾಗಿದ್ದು ಮತದಾರರಿಗೆ ಅಭಿನಂದನೆ ಸಲ್ಲಿಸಿದ ಸಂದೇಶಗಳಿವೆ.
ಬ್ಯಾನರ್ಜಿ ಸರ್ಕಾರದ ಸರ್ವಾಧಿಕಾರಿ ಧೋರಣೆಯ ಬಳಿಕ ರಾಜ್ಯದಲ್ಲಿ ಬದಲಾವಣೆ ಗಾಳಿ ಬೀಸುತ್ತಿರುವುದು ಒಳ್ಳೆಯ ಬೆಳವಣಿಗೆ ಎಂದು ತಮ್ಮ ಪಕ್ಷದ ಪತ್ರಿಕೆಗೆ ಜಾಹೀರಾತು ಸಿಕ್ಕ ವಿಷಯದ ಬಗ್ಗೆ ಸಿಪಿಎಂ ಪಾಲಿಟ್ ಬ್ಯೂರೋ ಸದಸ್ಯ ಹಾಗೂ ಪಶ್ಚಿಮ ಬಂಗಾಳ ರಾಜ್ಯ ಕಾರ್ಯದರ್ಶಿ ಮೊಹಮ್ಮದ್ ಸಲೀಂ ಪ್ರತಿಕ್ರಿಯಿಸಿದ್ದಾರೆ. 'ಗಣಶಕ್ತಿ'ಗೆ ಜಾಹೀರಾತು ನಿಷೇಧಿಸಿದ್ದ ಮಮತಾ ಸರ್ಕಾರದ ನಿಲುವಿನ ವಿರುದ್ಧ ಸಿಪಿಎಂ ಕಾನೂನು ಹೋರಾಟವನ್ನೂ ನಡೆಸಿತ್ತು, ಆದರೆ ಅದರಿಂದ ಪ್ರಯೋಜನ ಏನೂ ಆಗಿರಲಿಲ್ಲ. ಈ ಸಮಯದಲ್ಲಿ ಪತ್ರಿಕೆ ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿತ್ತು. ಈಗ ಬಿಜೆಪಿ ಅಧಿಕಾರಕ್ಕೆ ಬಂದಿದ್ದರಿಂದ ಸಂಕಷ್ಟ ದೂರವಾಗುವ ಲಕ್ಷಣ ಇದೆ ಎಂದು ಸಿಪಿಎಂ ರಾಜ್ಯ ನಾಯಕರು ಹೇಳುತ್ತಿದ್ದಾರೆ.
ಪ್ರಮಾಣ ವಚನ ಸಮಾರಂಭದಲ್ಲೂ ಬಿಜೆಪಿ ನಾಯಕರು ಬಂಗಾಳವನ್ನು ಹಿಂದೆ ಆಳಿದ್ದ ಸಿಪಿಎಂ ನಾಯಕರನ್ನು ಹಾಡಿ ಹೊಗಳಿದ್ದು ವಿಶೇಷ. ಮಾಜಿ ಮುಖ್ಯಮಂತ್ರಿ, ದಿವಂಗತ ಬುದ್ಧದೇವ್ ಭಟ್ಟಾಚಾರ್ಯ ಮತ್ತು ಪಶ್ಚಿಮ ಬಂಗಾಳ ಎಡರಂಗದ ಅಧ್ಯಕ್ಷ ಬಿಮನ್ ಬೋಸ್ ಅವರನ್ನು ಬಿಜೆಪಿ ನಾಯಕರು ಪ್ರಶಂಸಿದ್ದಾರೆ.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
27-07-26 01:09 pm
HK News Staffer
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm