ಬ್ರೇಕಿಂಗ್ ನ್ಯೂಸ್
10-05-26 09:38 pm HK News Desk ದೇಶ - ವಿದೇಶ
ಕೊಲ್ಕತ್ತಾ, ಮೇ 10: ಮಮತಾ ಬ್ಯಾನರ್ಜಿ ಸರ್ಕಾರದಲ್ಲಿ ತಮ್ಮ ಪಕ್ಷದ ಬೆಂಬಲಿತ ನಾಯಕರ ಪತ್ರಿಕೆ, ತಮ್ಮ ಪರವಾಗಿರುವ ಪತ್ರಿಕೆಗಳು ಅಥವಾ ಇನ್ನಿತರ ಮಾಧ್ಯಮಗಳಿಗೆ ಮಾತ್ರ ಸರ್ಕಾರಿ ಜಾಹೀರಾತು ನೀಡುವ ಪದ್ಧತಿ ಜಾರಿಗೆ ತರಲಾಗಿತ್ತು. ಇದೀಗ ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಸರ್ಕಾರ ಬಂದ ಬೆನ್ನಲ್ಲೇ ಸಿಪಿಎಂ ಪಕ್ಷದ ಪತ್ರಿಕೆಗೆ ಬಹುಕಾಲದ ಬಳಿಕ ಜಾಹೀರಾತು ಸಿಕ್ಕಿದೆ.
ಪಶ್ಚಿಮ ಬಂಗಾಳದಲ್ಲಿ ಬರೋಬ್ಬರಿ 35 ವರ್ಷಗಳ ಕಾಲ ಅಧಿಕಾರದಲ್ಲಿದ್ದ ಸಿಪಿಎಂ, ಅಧಿಕಾರ ಕಳೆದುಕೊಂಡ ನಂತರ ಮಮತಾ ಬ್ಯಾನರ್ಜಿ ಅವರ ದ್ವೇಷದ ರಾಜಕಾರಣದಿಂದಾಗಿ ಸಾಕಷ್ಟು ಸಂಕಷ್ಟಗಳನ್ನು ಎದುರಿಸಿತ್ತು. ಮಮತಾ ಬ್ಯಾನರ್ಜಿ ಮುಖ್ಯಮಂತ್ರಿಯಾದ ಮೇಲೆ, ಕಳೆದ 15 ವರ್ಷಗಳಲ್ಲಿ ಸಿಪಿಎಂ ಪಕ್ಷದ ಪರವಾಗಿದ್ದ ಯಾವುದೇ ಪತ್ರಿಕೆಗೆ ಸರ್ಕಾರಿ ಜಾಹೀರಾತುಗಳೇ ಸಿಕ್ಕಿರಲಿಲ್ಲ. ಆದರೆ ಈಗ, ಬಿಜೆಪಿ ಅಧಿಕಾರಕ್ಕೆ ಬಂದು, ಪ್ರಮಾಣ ವಚನ ಸ್ವೀಕರಿಸಿದ ದಿನವೇ ಎಲ್ಲ ಪತ್ರಿಕೆಗಳಿಗೆ ನೀಡಿದಂತೆ ಸಿಪಿಎಂ ಪತ್ರಿಕೆಗೂ ಸರ್ಕಾರಿ ಜಾಹೀರಾತು ನೀಡಲಾಗಿದೆ.
ಮಮತಾ ಬ್ಯಾನರ್ಜಿ ಸರ್ಕಾರದಲ್ಲಿ ತನ್ನ ಪರವಾಗಿಲ್ಲದ ಹಲವು ಪತ್ರಿಕೆಗಳಿಗೆ ಜಾಹೀರಾತು ನಿಷೇಧಿಸಲಾಗಿತ್ತು. ಆದರೆ ಬಂಗಾಳದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ಬೆನ್ನಲ್ಲೇ ಸಿಪಿಎಂ ಮುಖವಾಣಿ 'ಗಣಶಕ್ತಿ' ಪತ್ರಿಕೆಯ ಮೊದಲ ಪುಟದಲ್ಲೇ ಸರ್ಕಾರದ ಅಧಿಕೃತ ಜಾಹೀರಾತು ಪ್ರಕಟವಾಗಿದೆ. ಜಾಹೀರಾತಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಹೊಸ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದ ಸುವೇಂದು ಅಧಿಕಾರಿ ಅವರ ಫೋಟೋಗಳನ್ನು ಕೊಡಲಾಗಿದ್ದು ಮತದಾರರಿಗೆ ಅಭಿನಂದನೆ ಸಲ್ಲಿಸಿದ ಸಂದೇಶಗಳಿವೆ.
ಬ್ಯಾನರ್ಜಿ ಸರ್ಕಾರದ ಸರ್ವಾಧಿಕಾರಿ ಧೋರಣೆಯ ಬಳಿಕ ರಾಜ್ಯದಲ್ಲಿ ಬದಲಾವಣೆ ಗಾಳಿ ಬೀಸುತ್ತಿರುವುದು ಒಳ್ಳೆಯ ಬೆಳವಣಿಗೆ ಎಂದು ತಮ್ಮ ಪಕ್ಷದ ಪತ್ರಿಕೆಗೆ ಜಾಹೀರಾತು ಸಿಕ್ಕ ವಿಷಯದ ಬಗ್ಗೆ ಸಿಪಿಎಂ ಪಾಲಿಟ್ ಬ್ಯೂರೋ ಸದಸ್ಯ ಹಾಗೂ ಪಶ್ಚಿಮ ಬಂಗಾಳ ರಾಜ್ಯ ಕಾರ್ಯದರ್ಶಿ ಮೊಹಮ್ಮದ್ ಸಲೀಂ ಪ್ರತಿಕ್ರಿಯಿಸಿದ್ದಾರೆ. 'ಗಣಶಕ್ತಿ'ಗೆ ಜಾಹೀರಾತು ನಿಷೇಧಿಸಿದ್ದ ಮಮತಾ ಸರ್ಕಾರದ ನಿಲುವಿನ ವಿರುದ್ಧ ಸಿಪಿಎಂ ಕಾನೂನು ಹೋರಾಟವನ್ನೂ ನಡೆಸಿತ್ತು, ಆದರೆ ಅದರಿಂದ ಪ್ರಯೋಜನ ಏನೂ ಆಗಿರಲಿಲ್ಲ. ಈ ಸಮಯದಲ್ಲಿ ಪತ್ರಿಕೆ ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿತ್ತು. ಈಗ ಬಿಜೆಪಿ ಅಧಿಕಾರಕ್ಕೆ ಬಂದಿದ್ದರಿಂದ ಸಂಕಷ್ಟ ದೂರವಾಗುವ ಲಕ್ಷಣ ಇದೆ ಎಂದು ಸಿಪಿಎಂ ರಾಜ್ಯ ನಾಯಕರು ಹೇಳುತ್ತಿದ್ದಾರೆ.
ಪ್ರಮಾಣ ವಚನ ಸಮಾರಂಭದಲ್ಲೂ ಬಿಜೆಪಿ ನಾಯಕರು ಬಂಗಾಳವನ್ನು ಹಿಂದೆ ಆಳಿದ್ದ ಸಿಪಿಎಂ ನಾಯಕರನ್ನು ಹಾಡಿ ಹೊಗಳಿದ್ದು ವಿಶೇಷ. ಮಾಜಿ ಮುಖ್ಯಮಂತ್ರಿ, ದಿವಂಗತ ಬುದ್ಧದೇವ್ ಭಟ್ಟಾಚಾರ್ಯ ಮತ್ತು ಪಶ್ಚಿಮ ಬಂಗಾಳ ಎಡರಂಗದ ಅಧ್ಯಕ್ಷ ಬಿಮನ್ ಬೋಸ್ ಅವರನ್ನು ಬಿಜೆಪಿ ನಾಯಕರು ಪ್ರಶಂಸಿದ್ದಾರೆ.
12-05-26 02:26 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
13-05-26 02:26 pm
HK News Staffer
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
ವಿಜಯ್ ಗೆಲುವು ಭವಿಷ್ಯ ನುಡಿದಿದ್ದ ಜ್ಯೋತಿಷಿಗೆ ಸಿಎಂ...
12-05-26 05:15 pm
ಅಧಿಕಾರಕ್ಕೆ ಬರುತ್ತಿದ್ದಂತೆ ‘ಎಣ್ಣೆ ಸಾಮ್ರಾಜ್ಯ’ ಕ್...
12-05-26 11:34 am
13-05-26 04:04 pm
HK News Staffer
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
13-05-26 03:39 pm
HK News Staffer
ಕುತ್ತಾರು ಜಂಕ್ಷನ್ನಲ್ಲಿ ಕೊರಗಜ್ಜನ ವೃತ್ತ ನಿರ್ಮಾಣಕ...
13-05-26 12:39 pm
ಚಂದನವನಕ್ಕೆ ಆಘಾತ; ಮಿಲನ, ಹಿಟ್ಲರ್ ಕಲ್ಯಾಣ ಖ್ಯಾತಿಯ...
13-05-26 11:44 am
35 ಲಕ್ಷ ಮೌಲ್ಯದ ಹೈಡ್ರೊವೀಡ್ ಗಾಂಜಾ ಮಾರಾಟಕ್ಕೆ ಯತ್...
13-05-26 11:41 am
ಮೂರು ತಿಂಗಳ ಹಿಂದಷ್ಟೇ ಪೊಲೀಸ್ ಪೇದೆಯೊಂದಿಗೆ ನಿಶ್ಚಿ...
12-05-26 01:54 pm