ಬ್ರೇಕಿಂಗ್ ನ್ಯೂಸ್
11-05-26 06:20 pm HK News Staffer ದೇಶ - ವಿದೇಶ
ಕಾರವಾರ, ಮೇ 11: ಅರಬ್ಬಿ ಸಮುದ್ರದಲ್ಲಿ ಆಳಸಮುದ್ರ ಮೀನುಗಾರಿಕೆಗೆ ತೆರಳಿದ್ದ ಕಾರವಾರದ ಪರ್ಷಿಯನ್ ಮಾದರಿಯ ಮೀನುಗಾರಿಕಾ ಬೋಟ್ ಗೋವಾ ಸಮುದ್ರ ಪ್ರದೇಶದಲ್ಲಿ ಮುಳುಗಡೆಯಾಗಿದೆ. ಬೋಟ್ನಲ್ಲಿದ್ದ 22 ಮೀನುಗಾರರನ್ನು ಇತರ ಬೋಟ್ಗಳ ಮೀನುಗಾರರು ರಕ್ಷಿಸುವ ಮೂಲಕ ಭೀಕರ ದುರಂತವೊಂದು ತಪ್ಪಿದಂತಾಗಿದೆ.
ಕಾರವಾರ ತಾಲೂಕಿನ ಮುದಗಾ ಬಂದರಿನಿಂದ ಸುಮಾರು ಒಂದು ವಾರದ ಹಿಂದೆ ದಿನೇಶ್ ಕಾಂಚನ್ ಅವರಿಗೆ ಸೇರಿದ ‘ಶ್ರೀ ಅಮ್ಮ’ ಹೆಸರಿನ ಬೋಟ್ ಮೀನುಗಾರಿಕೆಗೆ ತೆರಳಿತ್ತು. ಗೋವಾದ ಬೇತುಲ್ ಸಮುದ್ರ ಪ್ರದೇಶದಲ್ಲಿ ಕಾರ್ಯಾಚರಣೆ ನಡೆಸುತ್ತಿದ್ದ ವೇಳೆ ತಾಂತ್ರಿಕ ದೋಷ ಉಂಟಾಗಿ ಬೋಟ್ಗೆ ನೀರು ನುಗ್ಗಿದೆ ಎನ್ನಲಾಗಿದೆ.
ಕ್ಷಣಾರ್ಧದಲ್ಲೇ ಬೋಟ್ ಸಮುದ್ರದ ಆಳಕ್ಕೆ ಮುಳುಗಿದರೂ, ಸಮೀಪದಲ್ಲಿದ್ದ ಇತರ ಮೀನುಗಾರಿಕಾ ಬೋಟ್ಗಳ ಸಿಬ್ಬಂದಿ ತಕ್ಷಣ ಕಾರ್ಯಪ್ರವೃತ್ತರಾಗಿ 22 ಮಂದಿಯನ್ನು ಸುರಕ್ಷಿತವಾಗಿ ರಕ್ಷಿಸಿದ್ದಾರೆ. ರಕ್ಷಿಸಲ್ಪಟ್ಟ ಎಲ್ಲರೂ ಕಾರವಾರ ಹಾಗೂ ಉತ್ತರ ಕನ್ನಡ ಜಿಲ್ಲೆಯವರು ಎಂದು ತಿಳಿದುಬಂದಿದೆ.
ಈ ಘಟನೆಯಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ಮೀನುಗಾರಿಕಾ ಬಲೆಗಳು, ಇಂಧನ ಹಾಗೂ ಸಂಗ್ರಹಿಸಿದ್ದ ಮೀನು ಸೇರಿ ಸುಮಾರು 1.5 ರಿಂದ 2 ಕೋಟಿ ರೂಪಾಯಿ ನಷ್ಟ ಸಂಭವಿಸಿದೆ ಎಂದು ಅಂದಾಜಿಸಲಾಗಿದೆ.
ಸದ್ಯ ಎಲ್ಲ ಮೀನುಗಾರರು ಸುರಕ್ಷಿತವಾಗಿ ದಡ ಸೇರಿದ್ದು, ಸ್ಥಳೀಯ ಮೀನುಗಾರ ಸಮುದಾಯದಲ್ಲಿ ಆತಂಕದ ಕ್ಷಣಗಳು ದೂರವಾದಂತಾಗಿದೆ.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
27-07-26 01:09 pm
HK News Staffer
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm