ಬ್ರೇಕಿಂಗ್ ನ್ಯೂಸ್
12-05-26 08:15 pm HK News Desk ದೇಶ - ವಿದೇಶ
ಚೆನ್ನೈ, ಮೇ 12: ಇತ್ತ ಸಿಎಂ ವಿಜಯ್ ಜೋಸೆಫ್ ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಲು ಸಿದ್ಧತೆ ನಡೆಸುತ್ತಿರುವಾಗಲೇ ತಮಿಳುನಾಡು ರಾಜಕೀಯ ರೋಚಕ ತಿರುವು ಪಡೆದಿದ್ದು, ಎಸ್ಪಿ ವೇಲುಮಣಿ ಮತ್ತು ಸಿವಿ ಷಣ್ಮುಗಂ ನೇತೃತ್ವದ ಎಐಎಡಿಎಂಕೆಯ ಒಂದು ಬಣ ಟಿವಿಕೆ ನೇತೃತ್ವದ ಸರ್ಕಾರಕ್ಕೆ ಬೆಂಬಲ ಘೋಷಿಸಿದೆ.
ಎಡಪ್ಪಾಡಿ ಪಳನಿಸ್ವಾಮಿ ನೇತೃತ್ವದಲ್ಲಿ ಎಐಎಡಿಎಂಕೆ ಪಕ್ಷವು ಡಿಎಂಕೆ ಜೊತೆಗೆ ಮೈತ್ರಿಗೆ ತೆರೆಮರೆಯ ಹುನ್ನಾರ ನಡೆಸುತ್ತಿರುವಾಗಲೇ ಈ ನಿರ್ಧಾರದಿಂದ ಸಿಡಿದು ನಿಂತ ಒಂದು ಬಣದ ನಾಯಕರು ಪಕ್ಷವನ್ನೇ ಹೋಳು ಮಾಡಿದ್ದಾರೆ.
ಎಸ್ಪಿ ವೇಲುಮಣಿ ಮತ್ತು ಸಿವಿ ಷಣ್ಮುಗಂ ಬಣದ ನಾಯಕರು ಇಂದು ಮುಖ್ಯಮಂತ್ರಿ ವಿಜಯ್ ಅವರನ್ನು ಭೇಟಿ ಮಾಡಿ, ಅವರ ನೇತೃತ್ವದ ಸರ್ಕಾರಕ್ಕೆ ತಮ್ಮ ಬೆಂಬಲ ಘೋಷಿಸಿದ್ದಾರೆ. ಷಣ್ಮುಗಂ ಬಣದಲ್ಲಿ 30 ಶಾಸಕರಿದ್ದಾರೆ ಎನ್ನಲಾಗಿದೆ.

ಪಕ್ಷವನ್ನು ಉಳಿಸಲು ಈ ನಿರ್ಧಾರ
ಪಕ್ಷದ ಭವಿಷ್ಯದ ದೃಷ್ಟಿಯಿಂದ ನಾವು ಎಐಎಡಿಎಂಕೆ ಮುಖ್ಯಸ್ಥ ಎಡಪ್ಪಾಡಿ ಕೆ ಪಳನಿಸ್ವಾಮಿ ಅವರಿಗೆ ಕೌನ್ಸಿಲ್ ಸಭೆ ಕರೆಯುವಂತೆ ಒತ್ತಾಯಿಸುತ್ತೇವೆ ಎಂದು ಹೇಳಿದ್ದಾರೆ. ಪಕ್ಷದ ಉಳಿವಿನ ದೃಷ್ಟಿಯಿಂದ ಈ ನಡೆ ಅನಿವಾರ್ಯ. ನಾವು ಡಿಎಂಕೆಗೆ ವಿರುದ್ಧವಾಗಿ ಜಯಲಲಿತಾ ನೇತೃತ್ವದಲ್ಲಿ ಪಕ್ಷವನ್ನು ಸ್ಥಾಪಿಸಿದ್ದೇವೆ. 53 ವರ್ಷಗಳ ಕಾಲ ನಮ್ಮ ರಾಜಕೀಯ ಅದಕ್ಕೆ ವಿರುದ್ಧವಾಗಿತ್ತು. ನಾವು ಡಿಎಂಕೆ ಜೊತೆಗೆ ಮೈತ್ರಿ ಮಾಡಿಕೊಂಡರೆ ಎಐಎಡಿಎಂಕೆ ಅಸ್ತಿತ್ವದಲ್ಲೇ ಇರಲ್ಲ ಎಂದಿದ್ದಾರೆ.
ಚುನಾವಣೆಯ ನಂತರ ನಾವು ಯಾವುದೇ ಮೈತ್ರಿ ಇಲ್ಲದೆ ನಿಲ್ಲುತ್ತೇವೆ. ನಮ್ಮ ಪಕ್ಷವನ್ನು ಬಲಪಡಿಸುವತ್ತ ನಮ್ಮ ಗಮನ ಇರಬೇಕು. ಎಐಎಡಿಎಂಕೆ ಶಾಸಕರಾಗಿ ಆಯ್ಕೆಯಾದವರು ಪಕ್ಷದ ಬೆಳವಣಿಗೆ ದೃಷ್ಟಿಯಿಂದ ಟಿವಿಕೆಗೆ ತಮ್ಮ ಬೆಂಬಲ ನೀಡಲು ನಿರ್ಧರಿಸಿದ್ದಾರೆ ಎಂದು ವೇಲು ಮಣಿ ಮತ್ತು ಷಣ್ಮುಗಂ ತಿಳಿಸಿದ್ದಾರೆ. ಪಳನಿಸ್ವಾಮಿ ಪರವಾಗಿ 17 ಶಾಸಕರಿದ್ದರೆ, ವೇಲು ಮಣಿ ಪರವಾಗಿ 30 ಶಾಸಕರಿದ್ದಾರೆ ಎನ್ನಲಾಗುತ್ತಿದೆ. ವಿಜಯ್ ಸರ್ಕಾರ ವಿಶ್ವಾಸ ಮತ ಯಾಚನೆ ಸಂದರ್ಭದಲ್ಲಿ ವೇಲು ಮಣಿ ನೇತೃತ್ವದಲ್ಲಿ ಶಾಸಕರು ವಿಜಯ್ ಪರ ನಿಲ್ಲುವ ಸಾಧ್ಯತೆಯಿದೆ. ರಾಜ್ಯಪಾಲರ ಸೂಚನೆಯಂತೆ ಸಿಎಂ ವಿಜಯ್ ಮೇ 13ರಂದು ಸದನದಲ್ಲಿ ವಿಶ್ವಾಸಮತ ಸಾಬೀತು ಮಾಡಬೇಕಿದೆ.
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
24-06-26 01:51 pm
HK News Staffer
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
24-06-26 09:28 pm
HK News Desk
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm
Mangalore Minor student Suicide: ಅಪ್ರಾಪ್ತೆಗೆ...
24-06-26 02:25 pm