ಬ್ರೇಕಿಂಗ್ ನ್ಯೂಸ್
12-05-26 08:15 pm HK News Desk ದೇಶ - ವಿದೇಶ
ಚೆನ್ನೈ, ಮೇ 12: ಇತ್ತ ಸಿಎಂ ವಿಜಯ್ ಜೋಸೆಫ್ ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಲು ಸಿದ್ಧತೆ ನಡೆಸುತ್ತಿರುವಾಗಲೇ ತಮಿಳುನಾಡು ರಾಜಕೀಯ ರೋಚಕ ತಿರುವು ಪಡೆದಿದ್ದು, ಎಸ್ಪಿ ವೇಲುಮಣಿ ಮತ್ತು ಸಿವಿ ಷಣ್ಮುಗಂ ನೇತೃತ್ವದ ಎಐಎಡಿಎಂಕೆಯ ಒಂದು ಬಣ ಟಿವಿಕೆ ನೇತೃತ್ವದ ಸರ್ಕಾರಕ್ಕೆ ಬೆಂಬಲ ಘೋಷಿಸಿದೆ.
ಎಡಪ್ಪಾಡಿ ಪಳನಿಸ್ವಾಮಿ ನೇತೃತ್ವದಲ್ಲಿ ಎಐಎಡಿಎಂಕೆ ಪಕ್ಷವು ಡಿಎಂಕೆ ಜೊತೆಗೆ ಮೈತ್ರಿಗೆ ತೆರೆಮರೆಯ ಹುನ್ನಾರ ನಡೆಸುತ್ತಿರುವಾಗಲೇ ಈ ನಿರ್ಧಾರದಿಂದ ಸಿಡಿದು ನಿಂತ ಒಂದು ಬಣದ ನಾಯಕರು ಪಕ್ಷವನ್ನೇ ಹೋಳು ಮಾಡಿದ್ದಾರೆ.
ಎಸ್ಪಿ ವೇಲುಮಣಿ ಮತ್ತು ಸಿವಿ ಷಣ್ಮುಗಂ ಬಣದ ನಾಯಕರು ಇಂದು ಮುಖ್ಯಮಂತ್ರಿ ವಿಜಯ್ ಅವರನ್ನು ಭೇಟಿ ಮಾಡಿ, ಅವರ ನೇತೃತ್ವದ ಸರ್ಕಾರಕ್ಕೆ ತಮ್ಮ ಬೆಂಬಲ ಘೋಷಿಸಿದ್ದಾರೆ. ಷಣ್ಮುಗಂ ಬಣದಲ್ಲಿ 30 ಶಾಸಕರಿದ್ದಾರೆ ಎನ್ನಲಾಗಿದೆ.

ಪಕ್ಷವನ್ನು ಉಳಿಸಲು ಈ ನಿರ್ಧಾರ
ಪಕ್ಷದ ಭವಿಷ್ಯದ ದೃಷ್ಟಿಯಿಂದ ನಾವು ಎಐಎಡಿಎಂಕೆ ಮುಖ್ಯಸ್ಥ ಎಡಪ್ಪಾಡಿ ಕೆ ಪಳನಿಸ್ವಾಮಿ ಅವರಿಗೆ ಕೌನ್ಸಿಲ್ ಸಭೆ ಕರೆಯುವಂತೆ ಒತ್ತಾಯಿಸುತ್ತೇವೆ ಎಂದು ಹೇಳಿದ್ದಾರೆ. ಪಕ್ಷದ ಉಳಿವಿನ ದೃಷ್ಟಿಯಿಂದ ಈ ನಡೆ ಅನಿವಾರ್ಯ. ನಾವು ಡಿಎಂಕೆಗೆ ವಿರುದ್ಧವಾಗಿ ಜಯಲಲಿತಾ ನೇತೃತ್ವದಲ್ಲಿ ಪಕ್ಷವನ್ನು ಸ್ಥಾಪಿಸಿದ್ದೇವೆ. 53 ವರ್ಷಗಳ ಕಾಲ ನಮ್ಮ ರಾಜಕೀಯ ಅದಕ್ಕೆ ವಿರುದ್ಧವಾಗಿತ್ತು. ನಾವು ಡಿಎಂಕೆ ಜೊತೆಗೆ ಮೈತ್ರಿ ಮಾಡಿಕೊಂಡರೆ ಎಐಎಡಿಎಂಕೆ ಅಸ್ತಿತ್ವದಲ್ಲೇ ಇರಲ್ಲ ಎಂದಿದ್ದಾರೆ.
ಚುನಾವಣೆಯ ನಂತರ ನಾವು ಯಾವುದೇ ಮೈತ್ರಿ ಇಲ್ಲದೆ ನಿಲ್ಲುತ್ತೇವೆ. ನಮ್ಮ ಪಕ್ಷವನ್ನು ಬಲಪಡಿಸುವತ್ತ ನಮ್ಮ ಗಮನ ಇರಬೇಕು. ಎಐಎಡಿಎಂಕೆ ಶಾಸಕರಾಗಿ ಆಯ್ಕೆಯಾದವರು ಪಕ್ಷದ ಬೆಳವಣಿಗೆ ದೃಷ್ಟಿಯಿಂದ ಟಿವಿಕೆಗೆ ತಮ್ಮ ಬೆಂಬಲ ನೀಡಲು ನಿರ್ಧರಿಸಿದ್ದಾರೆ ಎಂದು ವೇಲು ಮಣಿ ಮತ್ತು ಷಣ್ಮುಗಂ ತಿಳಿಸಿದ್ದಾರೆ. ಪಳನಿಸ್ವಾಮಿ ಪರವಾಗಿ 17 ಶಾಸಕರಿದ್ದರೆ, ವೇಲು ಮಣಿ ಪರವಾಗಿ 30 ಶಾಸಕರಿದ್ದಾರೆ ಎನ್ನಲಾಗುತ್ತಿದೆ. ವಿಜಯ್ ಸರ್ಕಾರ ವಿಶ್ವಾಸ ಮತ ಯಾಚನೆ ಸಂದರ್ಭದಲ್ಲಿ ವೇಲು ಮಣಿ ನೇತೃತ್ವದಲ್ಲಿ ಶಾಸಕರು ವಿಜಯ್ ಪರ ನಿಲ್ಲುವ ಸಾಧ್ಯತೆಯಿದೆ. ರಾಜ್ಯಪಾಲರ ಸೂಚನೆಯಂತೆ ಸಿಎಂ ವಿಜಯ್ ಮೇ 13ರಂದು ಸದನದಲ್ಲಿ ವಿಶ್ವಾಸಮತ ಸಾಬೀತು ಮಾಡಬೇಕಿದೆ.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am