ಬ್ರೇಕಿಂಗ್ ನ್ಯೂಸ್
12-05-26 08:15 pm HK News Desk ದೇಶ - ವಿದೇಶ
ಚೆನ್ನೈ, ಮೇ 12: ಇತ್ತ ಸಿಎಂ ವಿಜಯ್ ಜೋಸೆಫ್ ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಲು ಸಿದ್ಧತೆ ನಡೆಸುತ್ತಿರುವಾಗಲೇ ತಮಿಳುನಾಡು ರಾಜಕೀಯ ರೋಚಕ ತಿರುವು ಪಡೆದಿದ್ದು, ಎಸ್ಪಿ ವೇಲುಮಣಿ ಮತ್ತು ಸಿವಿ ಷಣ್ಮುಗಂ ನೇತೃತ್ವದ ಎಐಎಡಿಎಂಕೆಯ ಒಂದು ಬಣ ಟಿವಿಕೆ ನೇತೃತ್ವದ ಸರ್ಕಾರಕ್ಕೆ ಬೆಂಬಲ ಘೋಷಿಸಿದೆ.
ಎಡಪ್ಪಾಡಿ ಪಳನಿಸ್ವಾಮಿ ನೇತೃತ್ವದಲ್ಲಿ ಎಐಎಡಿಎಂಕೆ ಪಕ್ಷವು ಡಿಎಂಕೆ ಜೊತೆಗೆ ಮೈತ್ರಿಗೆ ತೆರೆಮರೆಯ ಹುನ್ನಾರ ನಡೆಸುತ್ತಿರುವಾಗಲೇ ಈ ನಿರ್ಧಾರದಿಂದ ಸಿಡಿದು ನಿಂತ ಒಂದು ಬಣದ ನಾಯಕರು ಪಕ್ಷವನ್ನೇ ಹೋಳು ಮಾಡಿದ್ದಾರೆ.
ಎಸ್ಪಿ ವೇಲುಮಣಿ ಮತ್ತು ಸಿವಿ ಷಣ್ಮುಗಂ ಬಣದ ನಾಯಕರು ಇಂದು ಮುಖ್ಯಮಂತ್ರಿ ವಿಜಯ್ ಅವರನ್ನು ಭೇಟಿ ಮಾಡಿ, ಅವರ ನೇತೃತ್ವದ ಸರ್ಕಾರಕ್ಕೆ ತಮ್ಮ ಬೆಂಬಲ ಘೋಷಿಸಿದ್ದಾರೆ. ಷಣ್ಮುಗಂ ಬಣದಲ್ಲಿ 30 ಶಾಸಕರಿದ್ದಾರೆ ಎನ್ನಲಾಗಿದೆ.

ಪಕ್ಷವನ್ನು ಉಳಿಸಲು ಈ ನಿರ್ಧಾರ
ಪಕ್ಷದ ಭವಿಷ್ಯದ ದೃಷ್ಟಿಯಿಂದ ನಾವು ಎಐಎಡಿಎಂಕೆ ಮುಖ್ಯಸ್ಥ ಎಡಪ್ಪಾಡಿ ಕೆ ಪಳನಿಸ್ವಾಮಿ ಅವರಿಗೆ ಕೌನ್ಸಿಲ್ ಸಭೆ ಕರೆಯುವಂತೆ ಒತ್ತಾಯಿಸುತ್ತೇವೆ ಎಂದು ಹೇಳಿದ್ದಾರೆ. ಪಕ್ಷದ ಉಳಿವಿನ ದೃಷ್ಟಿಯಿಂದ ಈ ನಡೆ ಅನಿವಾರ್ಯ. ನಾವು ಡಿಎಂಕೆಗೆ ವಿರುದ್ಧವಾಗಿ ಜಯಲಲಿತಾ ನೇತೃತ್ವದಲ್ಲಿ ಪಕ್ಷವನ್ನು ಸ್ಥಾಪಿಸಿದ್ದೇವೆ. 53 ವರ್ಷಗಳ ಕಾಲ ನಮ್ಮ ರಾಜಕೀಯ ಅದಕ್ಕೆ ವಿರುದ್ಧವಾಗಿತ್ತು. ನಾವು ಡಿಎಂಕೆ ಜೊತೆಗೆ ಮೈತ್ರಿ ಮಾಡಿಕೊಂಡರೆ ಎಐಎಡಿಎಂಕೆ ಅಸ್ತಿತ್ವದಲ್ಲೇ ಇರಲ್ಲ ಎಂದಿದ್ದಾರೆ.
ಚುನಾವಣೆಯ ನಂತರ ನಾವು ಯಾವುದೇ ಮೈತ್ರಿ ಇಲ್ಲದೆ ನಿಲ್ಲುತ್ತೇವೆ. ನಮ್ಮ ಪಕ್ಷವನ್ನು ಬಲಪಡಿಸುವತ್ತ ನಮ್ಮ ಗಮನ ಇರಬೇಕು. ಎಐಎಡಿಎಂಕೆ ಶಾಸಕರಾಗಿ ಆಯ್ಕೆಯಾದವರು ಪಕ್ಷದ ಬೆಳವಣಿಗೆ ದೃಷ್ಟಿಯಿಂದ ಟಿವಿಕೆಗೆ ತಮ್ಮ ಬೆಂಬಲ ನೀಡಲು ನಿರ್ಧರಿಸಿದ್ದಾರೆ ಎಂದು ವೇಲು ಮಣಿ ಮತ್ತು ಷಣ್ಮುಗಂ ತಿಳಿಸಿದ್ದಾರೆ. ಪಳನಿಸ್ವಾಮಿ ಪರವಾಗಿ 17 ಶಾಸಕರಿದ್ದರೆ, ವೇಲು ಮಣಿ ಪರವಾಗಿ 30 ಶಾಸಕರಿದ್ದಾರೆ ಎನ್ನಲಾಗುತ್ತಿದೆ. ವಿಜಯ್ ಸರ್ಕಾರ ವಿಶ್ವಾಸ ಮತ ಯಾಚನೆ ಸಂದರ್ಭದಲ್ಲಿ ವೇಲು ಮಣಿ ನೇತೃತ್ವದಲ್ಲಿ ಶಾಸಕರು ವಿಜಯ್ ಪರ ನಿಲ್ಲುವ ಸಾಧ್ಯತೆಯಿದೆ. ರಾಜ್ಯಪಾಲರ ಸೂಚನೆಯಂತೆ ಸಿಎಂ ವಿಜಯ್ ಮೇ 13ರಂದು ಸದನದಲ್ಲಿ ವಿಶ್ವಾಸಮತ ಸಾಬೀತು ಮಾಡಬೇಕಿದೆ.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
27-07-26 01:09 pm
HK News Staffer
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm