ಬ್ರೇಕಿಂಗ್ ನ್ಯೂಸ್
19-05-26 01:06 pm HK News Staffer ದೇಶ - ವಿದೇಶ
ಬೆಂಗಳೂರು, ಮೇ 19: ದೇಶಾದ್ಯಂತ ವಾಹನ ಸವಾರರಿಗೆ ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳು ಮತ್ತೊಮ್ಮೆ ಬೆಲೆ ಏರಿಕೆಯ ಶಾಕ್ ನೀಡಿವೆ. ಕಳೆದ ಮೇ 15ರಂದು ಪೆಟ್ರೋಲ್ ಮತ್ತು ಡೀಸೆಲ್ ದರದಲ್ಲಿ ಸುಮಾರು 3 ರೂ. ಹೆಚ್ಚಳವಾಗಿದ್ದ ಬೆನ್ನಲ್ಲೇ, ಇಂದು ಮತ್ತೆ ಪ್ರತಿ ಲೀಟರ್ಗೆ ಸರಾಸರಿ 90 ಪೈಸೆಯಿಂದ 96 ಪೈಸೆಯವರೆಗೆ ದರ ಏರಿಕೆಯಾಗಿದೆ. ಕೇವಲ ಐದು ದಿನಗಳ ಅಂತರದಲ್ಲಿ ಎರಡನೇ ಬಾರಿ ಇಂಧನ ದರ ಹೆಚ್ಚಳವಾಗಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.
ಬೆಂಗಳೂರಿನಲ್ಲಿ ಹೊಸ ದರ ಎಷ್ಟು?
ಬೆಂಗಳೂರಿನಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ದರದಲ್ಲಿ ಪ್ರತಿ ಲೀಟರ್ಗೆ 94 ಪೈಸೆ ಏರಿಕೆಯಾಗಿದೆ. ಇದರೊಂದಿಗೆ ಪೆಟ್ರೋಲ್ ದರ 106.17 ರೂ.ನಿಂದ 107.16 ರೂ.ಗೆ ಏರಿಕೆಯಾದರೆ, ಡೀಸೆಲ್ ದರ 94.10 ರೂ.ನಿಂದ 95.03 ರೂ.ಗೆ ತಲುಪಿದೆ.
ಸತತ ದರ ಏರಿಕೆಯಿಂದ ವಾಹನ ಸವಾರರು ಹಾಗೂ ಮಧ್ಯಮ ವರ್ಗದ ಜನರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, ಜಾಗತಿಕ ಪರಿಸ್ಥಿತಿಯ ನೆಪದಲ್ಲಿ ಸರ್ಕಾರ ಜನರ ಮೇಲೆ ಹೆಚ್ಚುವರಿ ಹೊರೆ ಹಾಕಬಾರದು ಎಂದು ಆಗ್ರಹಿಸಿದ್ದಾರೆ.
ಪ್ರಮುಖ ನಗರಗಳಲ್ಲಿ ಪೆಟ್ರೋಲ್-ಡೀಸೆಲ್ ದರ
ದೆಹಲಿ : ಪೆಟ್ರೋಲ್ 98.64 ರೂ., ಡೀಸೆಲ್ 91.58 ರೂ.
ಮುಂಬೈ : ಪೆಟ್ರೋಲ್ 107.59 ರೂ., ಡೀಸೆಲ್ 94.08 ರೂ.
ಕೋಲ್ಕತ್ತಾ : ಪೆಟ್ರೋಲ್ 109.70 ರೂ., ಡೀಸೆಲ್ 96.07 ರೂ.
ಚೆನ್ನೈ : ಪೆಟ್ರೋಲ್ 104.49 ರೂ., ಡೀಸೆಲ್ 96.11 ರೂ.
ಜನಜೀವನದ ಮೇಲೆ ನೇರ ಪರಿಣಾಮ
ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಕೇವಲ ವಾಹನ ಸವಾರರನ್ನಷ್ಟೇ ಅಲ್ಲ, ಸಾಮಾನ್ಯ ಜನರ ದೈನಂದಿನ ಬದುಕಿನ ಮೇಲೂ ನೇರ ಪರಿಣಾಮ ಬೀರುತ್ತದೆ. ಸರಕು ಸಾಗಣೆ ವೆಚ್ಚ ಹೆಚ್ಚಾದಂತೆ ತರಕಾರಿ, ಆಹಾರ ಪದಾರ್ಥಗಳು ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗುವ ಸಾಧ್ಯತೆ ಇದೆ.
ಬಸ್, ಟ್ಯಾಕ್ಸಿ, ಆಟೋ ದರ ಹೆಚ್ಚಳದ ಆತಂಕವೂ ಎದುರಾಗಿದ್ದು, ಸಣ್ಣ ವ್ಯಾಪಾರಿಗಳು ಮತ್ತು ಸಾರಿಗೆ ಕ್ಷೇತ್ರದವರ ಮೇಲೆ ಹೆಚ್ಚುವರಿ ಒತ್ತಡ ಸೃಷ್ಟಿಯಾಗಿದೆ. ನಿರಂತರ ಇಂಧನ ದರ ಏರಿಕೆಯಿಂದ ಹಣದುಬ್ಬರ ಮತ್ತಷ್ಟು ಹೆಚ್ಚುವ ಭೀತಿ ವ್ಯಕ್ತವಾಗಿದೆ.
ಜಾಗತಿಕ ತೈಲ ಬಿಕ್ಕಟ್ಟು ಕಾರಣವೇ?
ಪಶ್ಚಿಮ ಏಷ್ಯಾದ ಯುದ್ಧ ಪರಿಸ್ಥಿತಿ ಹಾಗೂ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಏರಿಕೆಯನ್ನು ಪ್ರಮುಖ ಕಾರಣವೆಂದು ಹೇಳಲಾಗುತ್ತಿದೆ. ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚಾದಂತೆ ತೈಲ ಪೂರೈಕೆ ಮೇಲೆ ಪರಿಣಾಮ ಬೀಳುವ ಸಾಧ್ಯತೆ ಇರುವುದರಿಂದ ಜಾಗತಿಕ ಮಾರುಕಟ್ಟೆಯಲ್ಲಿ ಬೆಲೆ ಅಸ್ಥಿರತೆ ಮುಂದುವರಿದಿದೆ.
08-06-26 12:37 pm
HK News Staffer
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
ಎಂಬಿಬಿಎಸ್ ಪದವಿ ಮುಗಿಸಿದ ಬೆನ್ನಲ್ಲೇ ಸರ್ಕಾರಿ ಆಸ್ಪ...
05-06-26 07:14 pm
ಬೆಂಗಳೂರು ಖಾತೆಗಾಗಿ ರಾಮಲಿಂಗಾರೆಡ್ಡಿ ಬಂಡಾಯ: ಮನವೊಲ...
05-06-26 06:19 pm
ರಾಮಲಿಂಗಾ ರೆಡ್ಡಿ ಕಚೇರಿ ಎದುರಲ್ಲಿ ಪ್ರತಿಭಟನೆ ; ಕಾ...
05-06-26 05:23 pm
06-06-26 10:42 pm
HK News Desk
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
ಯೋಗಿಜೀ ನಮ್ಮನ್ನು ಕ್ಷಮಿಸಿ..! ಇನ್ನೆಂದೂ ಅಪರಾಧ ಕೃತ...
04-06-26 04:19 pm
20 ವರ್ಷಗಳ ಹಿಂದೆ ಬರೆದಿದ್ದ ಪರೀಕ್ಷೆಗೆ ಈಗ ಬಂತು ಸರ...
03-06-26 09:17 pm
08-06-26 04:55 pm
HK News Staffer
UT Khader, Mangalore: ಎಂಬಿಬಿಎಸ್ ಆದವರಿಗೆ ಕಲಿತ...
07-06-26 03:38 pm
Apex Capital Fraud Investment, Mangalore: ಬಿಜ...
07-06-26 01:57 pm
ಮುರಿನಕಟ್ಟೆ ಧ್ವಂಸ ಪ್ರಕರಣಕ್ಕೆ ಮತ್ತೆ ಕಾವು ; ಭಟ್ಕ...
05-06-26 01:25 pm
ಪಿನಾಕಿನಿ ಹೊಳೆಯಲ್ಲಿ ಹೆಚ್ಚಾದ ಹೂಳು, ಬದಲಾದ ಹರಿವಿನ...
04-06-26 12:51 pm
08-06-26 04:42 pm
HK News Staffer
ರಾಜ್ಯ- ಕೇಂದ್ರ ಸರ್ಕಾರದ ಇಲಾಖೆಗಳಲ್ಲಿ ಉದ್ಯೋಗ ಕೊಡಿ...
08-06-26 03:14 pm
ಪಬ್ಜಿ ಚಟಕ್ಕೆ ಬಿದ್ದು ಅಪ್ಪ - ಅಕ್ಕನನ್ನ ಚಟ್ಟಕ್ಕೆ...
08-06-26 02:20 pm
ಹಾಸನದ ಜಿಲ್ಲಾ ನ್ಯಾಯಾಲಯದ ಎದುರೇ ರೌಡಿಶೀಟರ್ ಬರ್ಬರ...
08-06-26 12:33 pm
ಕೋಟೆಕಾರು ದರೋಡೆ ಪ್ರಕರಣದಲ್ಲಿ ಮತ್ತೊಬ್ಬ ಆರೋಪಿ ಬಂಧ...
07-06-26 03:08 pm