ಬ್ರೇಕಿಂಗ್ ನ್ಯೂಸ್
19-05-26 01:06 pm HK News Staffer ದೇಶ - ವಿದೇಶ
ಬೆಂಗಳೂರು, ಮೇ 19: ದೇಶಾದ್ಯಂತ ವಾಹನ ಸವಾರರಿಗೆ ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳು ಮತ್ತೊಮ್ಮೆ ಬೆಲೆ ಏರಿಕೆಯ ಶಾಕ್ ನೀಡಿವೆ. ಕಳೆದ ಮೇ 15ರಂದು ಪೆಟ್ರೋಲ್ ಮತ್ತು ಡೀಸೆಲ್ ದರದಲ್ಲಿ ಸುಮಾರು 3 ರೂ. ಹೆಚ್ಚಳವಾಗಿದ್ದ ಬೆನ್ನಲ್ಲೇ, ಇಂದು ಮತ್ತೆ ಪ್ರತಿ ಲೀಟರ್ಗೆ ಸರಾಸರಿ 90 ಪೈಸೆಯಿಂದ 96 ಪೈಸೆಯವರೆಗೆ ದರ ಏರಿಕೆಯಾಗಿದೆ. ಕೇವಲ ಐದು ದಿನಗಳ ಅಂತರದಲ್ಲಿ ಎರಡನೇ ಬಾರಿ ಇಂಧನ ದರ ಹೆಚ್ಚಳವಾಗಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.
ಬೆಂಗಳೂರಿನಲ್ಲಿ ಹೊಸ ದರ ಎಷ್ಟು?
ಬೆಂಗಳೂರಿನಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ದರದಲ್ಲಿ ಪ್ರತಿ ಲೀಟರ್ಗೆ 94 ಪೈಸೆ ಏರಿಕೆಯಾಗಿದೆ. ಇದರೊಂದಿಗೆ ಪೆಟ್ರೋಲ್ ದರ 106.17 ರೂ.ನಿಂದ 107.16 ರೂ.ಗೆ ಏರಿಕೆಯಾದರೆ, ಡೀಸೆಲ್ ದರ 94.10 ರೂ.ನಿಂದ 95.03 ರೂ.ಗೆ ತಲುಪಿದೆ.
ಸತತ ದರ ಏರಿಕೆಯಿಂದ ವಾಹನ ಸವಾರರು ಹಾಗೂ ಮಧ್ಯಮ ವರ್ಗದ ಜನರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, ಜಾಗತಿಕ ಪರಿಸ್ಥಿತಿಯ ನೆಪದಲ್ಲಿ ಸರ್ಕಾರ ಜನರ ಮೇಲೆ ಹೆಚ್ಚುವರಿ ಹೊರೆ ಹಾಕಬಾರದು ಎಂದು ಆಗ್ರಹಿಸಿದ್ದಾರೆ.
ಪ್ರಮುಖ ನಗರಗಳಲ್ಲಿ ಪೆಟ್ರೋಲ್-ಡೀಸೆಲ್ ದರ
ದೆಹಲಿ : ಪೆಟ್ರೋಲ್ 98.64 ರೂ., ಡೀಸೆಲ್ 91.58 ರೂ.
ಮುಂಬೈ : ಪೆಟ್ರೋಲ್ 107.59 ರೂ., ಡೀಸೆಲ್ 94.08 ರೂ.
ಕೋಲ್ಕತ್ತಾ : ಪೆಟ್ರೋಲ್ 109.70 ರೂ., ಡೀಸೆಲ್ 96.07 ರೂ.
ಚೆನ್ನೈ : ಪೆಟ್ರೋಲ್ 104.49 ರೂ., ಡೀಸೆಲ್ 96.11 ರೂ.
ಜನಜೀವನದ ಮೇಲೆ ನೇರ ಪರಿಣಾಮ
ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಕೇವಲ ವಾಹನ ಸವಾರರನ್ನಷ್ಟೇ ಅಲ್ಲ, ಸಾಮಾನ್ಯ ಜನರ ದೈನಂದಿನ ಬದುಕಿನ ಮೇಲೂ ನೇರ ಪರಿಣಾಮ ಬೀರುತ್ತದೆ. ಸರಕು ಸಾಗಣೆ ವೆಚ್ಚ ಹೆಚ್ಚಾದಂತೆ ತರಕಾರಿ, ಆಹಾರ ಪದಾರ್ಥಗಳು ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗುವ ಸಾಧ್ಯತೆ ಇದೆ.
ಬಸ್, ಟ್ಯಾಕ್ಸಿ, ಆಟೋ ದರ ಹೆಚ್ಚಳದ ಆತಂಕವೂ ಎದುರಾಗಿದ್ದು, ಸಣ್ಣ ವ್ಯಾಪಾರಿಗಳು ಮತ್ತು ಸಾರಿಗೆ ಕ್ಷೇತ್ರದವರ ಮೇಲೆ ಹೆಚ್ಚುವರಿ ಒತ್ತಡ ಸೃಷ್ಟಿಯಾಗಿದೆ. ನಿರಂತರ ಇಂಧನ ದರ ಏರಿಕೆಯಿಂದ ಹಣದುಬ್ಬರ ಮತ್ತಷ್ಟು ಹೆಚ್ಚುವ ಭೀತಿ ವ್ಯಕ್ತವಾಗಿದೆ.
ಜಾಗತಿಕ ತೈಲ ಬಿಕ್ಕಟ್ಟು ಕಾರಣವೇ?
ಪಶ್ಚಿಮ ಏಷ್ಯಾದ ಯುದ್ಧ ಪರಿಸ್ಥಿತಿ ಹಾಗೂ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಏರಿಕೆಯನ್ನು ಪ್ರಮುಖ ಕಾರಣವೆಂದು ಹೇಳಲಾಗುತ್ತಿದೆ. ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚಾದಂತೆ ತೈಲ ಪೂರೈಕೆ ಮೇಲೆ ಪರಿಣಾಮ ಬೀಳುವ ಸಾಧ್ಯತೆ ಇರುವುದರಿಂದ ಜಾಗತಿಕ ಮಾರುಕಟ್ಟೆಯಲ್ಲಿ ಬೆಲೆ ಅಸ್ಥಿರತೆ ಮುಂದುವರಿದಿದೆ.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am