ಬ್ರೇಕಿಂಗ್ ನ್ಯೂಸ್
19-05-26 01:06 pm HK News Staffer ದೇಶ - ವಿದೇಶ
ಬೆಂಗಳೂರು, ಮೇ 19: ದೇಶಾದ್ಯಂತ ವಾಹನ ಸವಾರರಿಗೆ ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳು ಮತ್ತೊಮ್ಮೆ ಬೆಲೆ ಏರಿಕೆಯ ಶಾಕ್ ನೀಡಿವೆ. ಕಳೆದ ಮೇ 15ರಂದು ಪೆಟ್ರೋಲ್ ಮತ್ತು ಡೀಸೆಲ್ ದರದಲ್ಲಿ ಸುಮಾರು 3 ರೂ. ಹೆಚ್ಚಳವಾಗಿದ್ದ ಬೆನ್ನಲ್ಲೇ, ಇಂದು ಮತ್ತೆ ಪ್ರತಿ ಲೀಟರ್ಗೆ ಸರಾಸರಿ 90 ಪೈಸೆಯಿಂದ 96 ಪೈಸೆಯವರೆಗೆ ದರ ಏರಿಕೆಯಾಗಿದೆ. ಕೇವಲ ಐದು ದಿನಗಳ ಅಂತರದಲ್ಲಿ ಎರಡನೇ ಬಾರಿ ಇಂಧನ ದರ ಹೆಚ್ಚಳವಾಗಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.
ಬೆಂಗಳೂರಿನಲ್ಲಿ ಹೊಸ ದರ ಎಷ್ಟು?
ಬೆಂಗಳೂರಿನಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ದರದಲ್ಲಿ ಪ್ರತಿ ಲೀಟರ್ಗೆ 94 ಪೈಸೆ ಏರಿಕೆಯಾಗಿದೆ. ಇದರೊಂದಿಗೆ ಪೆಟ್ರೋಲ್ ದರ 106.17 ರೂ.ನಿಂದ 107.16 ರೂ.ಗೆ ಏರಿಕೆಯಾದರೆ, ಡೀಸೆಲ್ ದರ 94.10 ರೂ.ನಿಂದ 95.03 ರೂ.ಗೆ ತಲುಪಿದೆ.
ಸತತ ದರ ಏರಿಕೆಯಿಂದ ವಾಹನ ಸವಾರರು ಹಾಗೂ ಮಧ್ಯಮ ವರ್ಗದ ಜನರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, ಜಾಗತಿಕ ಪರಿಸ್ಥಿತಿಯ ನೆಪದಲ್ಲಿ ಸರ್ಕಾರ ಜನರ ಮೇಲೆ ಹೆಚ್ಚುವರಿ ಹೊರೆ ಹಾಕಬಾರದು ಎಂದು ಆಗ್ರಹಿಸಿದ್ದಾರೆ.
ಪ್ರಮುಖ ನಗರಗಳಲ್ಲಿ ಪೆಟ್ರೋಲ್-ಡೀಸೆಲ್ ದರ
ದೆಹಲಿ : ಪೆಟ್ರೋಲ್ 98.64 ರೂ., ಡೀಸೆಲ್ 91.58 ರೂ.
ಮುಂಬೈ : ಪೆಟ್ರೋಲ್ 107.59 ರೂ., ಡೀಸೆಲ್ 94.08 ರೂ.
ಕೋಲ್ಕತ್ತಾ : ಪೆಟ್ರೋಲ್ 109.70 ರೂ., ಡೀಸೆಲ್ 96.07 ರೂ.
ಚೆನ್ನೈ : ಪೆಟ್ರೋಲ್ 104.49 ರೂ., ಡೀಸೆಲ್ 96.11 ರೂ.
ಜನಜೀವನದ ಮೇಲೆ ನೇರ ಪರಿಣಾಮ
ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಕೇವಲ ವಾಹನ ಸವಾರರನ್ನಷ್ಟೇ ಅಲ್ಲ, ಸಾಮಾನ್ಯ ಜನರ ದೈನಂದಿನ ಬದುಕಿನ ಮೇಲೂ ನೇರ ಪರಿಣಾಮ ಬೀರುತ್ತದೆ. ಸರಕು ಸಾಗಣೆ ವೆಚ್ಚ ಹೆಚ್ಚಾದಂತೆ ತರಕಾರಿ, ಆಹಾರ ಪದಾರ್ಥಗಳು ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗುವ ಸಾಧ್ಯತೆ ಇದೆ.
ಬಸ್, ಟ್ಯಾಕ್ಸಿ, ಆಟೋ ದರ ಹೆಚ್ಚಳದ ಆತಂಕವೂ ಎದುರಾಗಿದ್ದು, ಸಣ್ಣ ವ್ಯಾಪಾರಿಗಳು ಮತ್ತು ಸಾರಿಗೆ ಕ್ಷೇತ್ರದವರ ಮೇಲೆ ಹೆಚ್ಚುವರಿ ಒತ್ತಡ ಸೃಷ್ಟಿಯಾಗಿದೆ. ನಿರಂತರ ಇಂಧನ ದರ ಏರಿಕೆಯಿಂದ ಹಣದುಬ್ಬರ ಮತ್ತಷ್ಟು ಹೆಚ್ಚುವ ಭೀತಿ ವ್ಯಕ್ತವಾಗಿದೆ.
ಜಾಗತಿಕ ತೈಲ ಬಿಕ್ಕಟ್ಟು ಕಾರಣವೇ?
ಪಶ್ಚಿಮ ಏಷ್ಯಾದ ಯುದ್ಧ ಪರಿಸ್ಥಿತಿ ಹಾಗೂ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಏರಿಕೆಯನ್ನು ಪ್ರಮುಖ ಕಾರಣವೆಂದು ಹೇಳಲಾಗುತ್ತಿದೆ. ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚಾದಂತೆ ತೈಲ ಪೂರೈಕೆ ಮೇಲೆ ಪರಿಣಾಮ ಬೀಳುವ ಸಾಧ್ಯತೆ ಇರುವುದರಿಂದ ಜಾಗತಿಕ ಮಾರುಕಟ್ಟೆಯಲ್ಲಿ ಬೆಲೆ ಅಸ್ಥಿರತೆ ಮುಂದುವರಿದಿದೆ.
17-05-26 08:55 pm
HK News Staffer
ವಿಜಯಪುರದಲ್ಲಿ ಗಾಳಿ-ಮಳೆಯ ಅಬ್ಬರಕ್ಕೆ ಮನೆಯೇ ಸಮಾಧಿ...
15-05-26 10:30 pm
ಮದ್ಯ ಪ್ರಿಯರಿಗೆ ಗುಡ್ನ್ಯೂಸ್ ; ಪ್ರೀಮಿಯಂ ಬಿಯರ್,...
15-05-26 09:56 pm
ಹಿಜಾಬ್ಗೆ ಗ್ರೀನ್ ಸಿಗ್ನಲ್; ಮತ್ತೆ ಭುಗಿಲೆದ್ದ ವಿವ...
14-05-26 10:19 am
ಬಿಜೆಪಿ ಸರ್ಕಾರ ನಿಷೇಧಿಸಿದ್ದ ಹಿಜಾಬ್ ನಿಷೇಧ ಹಿಂಪಡೆ...
13-05-26 10:18 pm
19-05-26 01:06 pm
HK News Staffer
ಕಾಂಗೋ, ಉಗಾಂಡದಲ್ಲಿ ಎಬೋಲಾ ಸೋಂಕು ತೀವ್ರ ; ಮಾರಣಾಂತ...
18-05-26 02:18 pm
ಭೋಜಶಾಲಾ ವಿವಾದಿತ ಮಸೀದಿ ಕಟ್ಟಡವಲ್ಲ, ವಾಗ್ದೇವಿ ಸರಸ...
16-05-26 10:13 pm
ಗುಡುಗು - ಮಿಂಚಿನ ಬಿರುಗಾಳಿಗೆ ಉತ್ತರ ಪ್ರದೇಶದಲ್ಲಿ...
16-05-26 02:01 pm
ಮುಂದಿನ ವರ್ಷದಿಂದ ಕಂಪ್ಯೂಟರ್ ಆಧಾರಿತ NEET ಪರೀಕ್ಷೆ...
15-05-26 04:16 pm
19-05-26 10:44 am
HK News Staffer
ಬೈಕಂಪಾಡಿ, ಕೂಳೂರು ಜಂಕ್ಷನ್ ಬಳಿ ಅಂಡರ್ ಪಾಸ್ ; ಕೇಂ...
18-05-26 10:47 pm
ಸರ್ಕಾರಿ ಶಾಲೆಗಳಿಗೆ ಸುಣ್ಣ-ಬಣ್ಣ ಇಲ್ಲ , ಶಿಕ್ಷಕರ ನ...
16-05-26 09:19 pm
ವಿಕಲಚೇತನ ಮಕ್ಕಳಿಗಾಗಿ ಉಡುಪಿಯಲ್ಲಿ ದೇಶದಲ್ಲೇ ಮೊದಲ...
16-05-26 09:16 pm
ಬಡ ಹಿಂದು ಮಹಿಳೆಯ ಪರ ನೆರವು ಕೇಳಿಕೊಂಡು ಬಂದ ಮುಸ್ಲಿ...
16-05-26 07:22 pm
18-05-26 06:49 pm
HK News Staffer
ಇನ್ಸ್ಟಾಮಾರ್ಟ್ ಉದ್ಯೋಗಿ ಲಿಫ್ಟ್ ದುರಂತದಲ್ಲಿ ಸಾವು...
18-05-26 06:47 pm
ದುಬಾರೆ ಶಿಬಿರದಲ್ಲಿ ಆನೆಗಳ ಕಾದಾಟ; ಚೆನ್ನೈ ಮೂಲದ ಪ್...
18-05-26 06:21 pm
ಶಿವಂ ಅಸೋಸಿಯೇಟ್ಸ್ ಹೆಸರಲ್ಲಿ ಬಹುಕೋಟಿ ವಂಚನೆ; ಸಿಐ...
18-05-26 04:19 pm
ತಾಯಿಗೆ ಅವಾಚ್ಯವಾಗಿ ನಿಂದಿಸಿದ್ದಕ್ಕೆ ಹೆಣವಾದ ಅಣ್ಣ,...
18-05-26 12:37 pm