ಬ್ರೇಕಿಂಗ್ ನ್ಯೂಸ್
05-01-21 05:38 pm Satish. N ದೇಶ - ವಿದೇಶ
ತಿರುವನಂತಪುರಂ, ಜ.5: ಕೇರಳದ ಕೊಟ್ಟಾಯಂ ಮತ್ತು ಆಲಪ್ಪುಳ ಜಿಲ್ಲೆಯಲ್ಲಿ ಹಕ್ಕಿಜ್ವರ ಕಂಡುಬಂದಿದ್ದು ಪಿಣರಾಯಿ ವಿಜಯನ್ ಸರಕಾರ ರಾಜ್ಯದಾದ್ಯಂತ ಹೈ ಅಲರ್ಟ್ ಘೋಷಿಸಿದೆ.
ಆಲಪ್ಪುಳ ಜಿಲ್ಲೆಯ ನೆಡುಮುಡಿ, ತೇಕ್ಕಡಿ, ಪಲ್ಲಿಪಾಡ್, ಕರುವಟ್ಟ ಪಂಚಾಯತ್ ಏರಿಯಾಗಳಲ್ಲಿ ಹಕ್ಕಿಜ್ವರದ ಲಕ್ಷಣ ಕಂಡುಬಂದಿದ್ದರೆ, ಕೊಟ್ಟಾಯಂ ಜಿಲ್ಲೆಯ ನೀಂದೂರ್ ಪಂಚಾಯತಿನ ಬಾತುಕೋಳಿ ಫಾರ್ಮ್ ನಲ್ಲಿ ಹಕ್ಕಿ ಜ್ವರ ಇರುವುದು ಪತ್ತೆಯಾಗಿದೆ. ಈ ಹಿನ್ನೆಲೆಯಲ್ಲಿ ಕೇರಳ ಸರಕಾರ ರಾಜ್ಯ ವಿಪತ್ತು ಎಂದು ಘೋಷಣೆ ಮಾಡಿದ್ದು ರಾಜ್ಯ ವ್ಯಾಪಿ ಕಟ್ಟೆಚ್ಚರಕ್ಕೆ ಸೂಚನೆ ನೀಡಿದೆ.
ಕೊಟ್ಟಾಯಂ ನೀಂದೂರಿನ ಫಾರ್ಮ್ ನಲ್ಲಿ ಸೋಮವಾರ ಒಂದೇ ದಿನ 1700 ಬಾತುಕೋಳಿಗಳು ಸತ್ತಿದ್ದವು. ಇದೇ ವೇಳೆ ಕುಟ್ಟನಾಡ್ ವಲಯದ 34 ಸಾವಿರ ಸೇರಿ ಒಟ್ಟು ಕೊಟ್ಟಾಯಂ ಜಿಲ್ಲೆಯಲ್ಲಿ 40 ಸಾವಿರ ಕೋಳಿಗಳನ್ನು ಕೊಲ್ಲಲು ನಿರ್ಧರಿಸಲಾಗಿದೆ.
ಇದೇ ವೇಳೆ, ಆಲಪ್ಪುಳ ಜಿಲ್ಲೆಯ ಕುಟ್ಟನಾಡ್ ಮತ್ತು ಕಾರ್ತಿಕಪಳ್ಳಿ ತಾಲೂಕು ವ್ಯಾಪ್ತಿಯಲ್ಲಿ ಕೋಳಿ, ಬಾತುಕೋಳಿ, ಮೊಟ್ಟೆ, ಮಾಂಸಗಳ ಸೇವನೆ ಮತ್ತು ಮಾರಾಟ ಮಾಡುವುದನ್ನು ನಿಷೇಧಿಸಿ ಜಿಲ್ಲಾಧಿಕಾರಿ ಆದೇಶ ಮಾಡಿದ್ದಾರೆ.
ಇದೇ ವೇಳೆ, ವಲಸೆ ಹಕ್ಕಿಗಳ ಬಗ್ಗೆ ನಿಗಾ ಇಡಲು ಅರಣ್ಯಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಈಗಾಗ್ಲೇ ಉತ್ತರ ಭಾರತದ ರಾಜಸ್ಥಾನ, ಮಧ್ಯಪ್ರದೇಶ ಮತ್ತು ಹಿಮಾಚಲ ಪ್ರದೇಶದಲ್ಲಿ ಹಕ್ಕಿಜ್ವರದ ಬಾಧೆ ಕಂಡುಬಂದಿದೆ. ಹಿಮಾಚಲ ಪ್ರದೇಶದ ಪೊಂಗ್ ಧಾಮ್ ಸರೋವರ ವ್ಯಾಪ್ತಿಯ ಪಕ್ಷಿಧಾಮದಲ್ಲಿ 1800ಕ್ಕೂ ಹೆಚ್ಚು ವಲಸೆ ಹಕ್ಕಿಗಳು ಸತ್ತು ಬಿದ್ದಿರುವುದು ಪತ್ತೆಯಾಗಿತ್ತು.
ಹಕ್ಕಿಜ್ವರ ಸಾಂಕ್ರಾಮಿಕ ರೋಗವಾಗಿದ್ದು ಒಂದರಿಂದ ಇನ್ನೊಂದಕ್ಕೆ ಸುಲಭದಲ್ಲಿ ಹರಡುತ್ತದೆ. ಹಕ್ಕಿಗಳನ್ನು ಬರಿಗೈಯಲ್ಲಿ ಮುಟ್ಟುವುದರಿಂದ ಮತ್ತು ಅದರ ಎಂಜಲು ದೇಹಕ್ಕೆ ಸೋಕಿದರೆ ಮಾನವನಿಗೂ ವೈರಸ್ ಹರಡುತ್ತದೆ. ನ್ಯುಮೋನಿಯಾ ಮಾದರಿಯ ಜ್ವರ, ಕೆಮ್ಮು ಕಂಡುಬರುತ್ತದೆ. ಜ್ವರಕ್ಕೆ ಸಕಾಲದಲ್ಲಿ ಔಷಧಿ ಸಿಗದೇ ಇದ್ದರೆ ಮಾನವನಿಗೂ ವೈರಸ್ ಬಾಧೆ ಮಾರಣಾಂತಿಕ ಆಗುತ್ತದೆ.
The Pinarayi Vijayan-led Kerala government said on Tuesday that bird flu has been declared as a state-specific disaster adding that a high alert has been issued after the virus was found in some parts of Kottayam and Alappuzha districts.
22-04-25 10:15 pm
Bangalore Correspondent
30 ವರ್ಷಗಳಲ್ಲಿ ಮುಸ್ಲಿಮರು, ಪರಿಶಿಷ್ಟರ ಸಂಖ್ಯೆ ದುಪ...
22-04-25 10:13 pm
Bidar SSLC Student, Blackmail: ಫುಲ್ ಮಾರ್ಕ್ ಕೊ...
22-04-25 02:37 pm
ಜನಿವಾರ ತೆಗೆಸಿರುವ ಕ್ರಮ ನಿಯಮಬಾಹಿರ, ಧಾರ್ಮಿಕ ನಂಬಿ...
22-04-25 01:00 pm
R Ashok, Census Probe: ಜಾತಿಗಣತಿ ವರದಿಯೇ ನಕಲಿ,...
21-04-25 07:27 pm
22-04-25 10:33 pm
HK News Desk
Rahul Gandhi, BJP : ಅಮೆರಿಕದಲ್ಲಿ ನಿಂತು ಭಾರತದ ಚ...
22-04-25 07:13 pm
Next Pope: ರೋಮನ್ ಕ್ಯಾಥೋಲಿಕ್ ಚರ್ಚ್ನ 266ನೇ ಪೋಪ...
21-04-25 07:46 pm
Pope Francis Death, Vatican, Catholic: ಕೆಥೋಲಿ...
21-04-25 02:13 pm
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
21-04-25 10:32 pm
Mangalore Correspondent
Puttur, Arun Putila: ಬ್ರಾಹ್ಮಣರು ಮತ್ತೆ ಪರಶುರಾಮ...
21-04-25 07:08 pm
Mangalore Chakravarti Sulibele, Ujre; ಸರ್ಕಾರವ...
20-04-25 05:42 pm
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
22-04-25 07:37 pm
Bangalore Correspondent
IPS Om Prakash Murder, Update: ನಿವೃತ್ತ ಡಿಜಿಪಿ...
22-04-25 03:26 pm
Om Prakash IPS Murder, Wife arrest: ನಿವೃತ್ತ ಡ...
21-04-25 01:03 pm
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm