ಬ್ರೇಕಿಂಗ್ ನ್ಯೂಸ್
22-05-26 05:57 pm HK News Staffer ದೇಶ - ವಿದೇಶ
ನವದೆಹಲಿ, ಮೇ 22: ಚುನಾವಣಾ ಆಯೋಗವು ಜೂನ್ 18ರಂದು ಹತ್ತು ರಾಜ್ಯಗಳ ವ್ಯಾಪ್ತಿಯನ್ನೊಳಗೊಂಡ 24 ರಾಜ್ಯಸಭಾ ಸ್ಥಾನಗಳಿಗೆ ಚುನಾವಣೆ ನಡೆಸುವುದಾಗಿ ಘೋಷಿಸಿದೆ. ಜೊತೆಗೆ ಮಹಾರಾಷ್ಟ್ರ ಮತ್ತು ತಮಿಳುನಾಡಿನಲ್ಲಿ ಎರಡು ಉಪ ಚುನಾವಣೆಗಳನ್ನೂ ನಡೆಸಲಾಗುವುದು ಎಂದು ತಿಳಿಸಿದೆ.
ಭಾರತೀಯ ಚುನಾವಣಾ ಆಯೋಗವು ಶುಕ್ರವಾರ ಬಹು ನಿರೀಕ್ಷಿತ 10 ರಾಜ್ಯಗಳ 24 ರಾಜ್ಯಸಭಾ ಸ್ಥಾನಗಳಿಗೆ ಚುನಾವಣೆ ಘೋಷಿಸಿದ್ದು, ಜೂನ್ 18ರಂದು ಮತದಾನ ನಡೆಯಲಿದೆ. ನಾಮಪತ್ರ ಸಲ್ಲಿಸಲು ಜೂನ್ 8 ಕೊನೆಯ ದಿನಾಂಕವಾಗಿರುತ್ತದೆ. 24 ರಾಜ್ಯಸಭಾ ಸದಸ್ಯರ ಅವಧಿ ಜೂನ್ 21ರಿಂದ ಜುಲೈ 19ರ ನಡುವೆ ಮುಕ್ತಾಯಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಆ ಸ್ಥಾನಗಳನ್ನು ಭರ್ತಿ ಮಾಡಲು ಆಯೋಗ ಮುಂದಾಗಿದೆ ಎಂದು ಚುನಾವಣಾ ಆಯೋಗ ಪ್ರಕಟಣೆಯಲ್ಲಿ ತಿಳಿಸಿದೆ.
ಆಂಧ್ರಪ್ರದೇಶ, ಗುಜರಾತ್ ಮತ್ತು ಕರ್ನಾಟಕದಲ್ಲಿ ತಲಾ ನಾಲ್ಕು ಸದಸ್ಯರನ್ನು ಆಯ್ಕೆ ಮಾಡಲಾಗುತ್ತದೆ. ಮಧ್ಯಪ್ರದೇಶ ಮತ್ತು ರಾಜಸ್ಥಾನದಲ್ಲಿ ತಲಾ ಮೂರು ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ಜಾರ್ಖಂಡ್ನಲ್ಲಿ ಎರಡು ಸ್ಥಾನಗಳಿಗೆ ಮತದಾನ ನಡೆಯಲಿದ್ದು, ಮಣಿಪುರ, ಮೇಘಾಲಯ, ಅರುಣಾಚಲ ಪ್ರದೇಶ ಮತ್ತು ಮಿಜೋರಾಂ ರಾಜ್ಯಗಳಲ್ಲಿ ತಲಾ ಒಂದು ಸದಸ್ಯರನ್ನು ಆಯ್ಕೆ ಮಾಡಲಾಗುತ್ತದೆ.
ಚುನಾವಣೆ ಘೋಷಣೆ ಬೆನ್ನಲ್ಲೇ ರಾಜ್ಯಸಭೆ ಸದಸ್ಯರಾಗಲು ಆಕಾಂಕ್ಷಿತರ ಲಾಬಿ ಶುರುವಾಗಿದೆ. ಕರ್ನಾಟಕದಲ್ಲಿ ನಾಲ್ಕು ಸ್ಥಾನಗಳ ಪೈಕಿ ಅತಿ ಹೆಚ್ಚು ವಿಧಾನಸಭೆ ಸ್ಥಾನಗಳನ್ನು ಹೊಂದಿರುವ ಕಾಂಗ್ರೆಸ್ ಮೂರು ಮತ್ತು ಬಿಜೆಪಿ ಒಂದು ಸ್ಥಾನ ಗೆಲ್ಲಲು ಅವಕಾಶ ಇರುತ್ತದೆ. ಬಿಜೆಪಿ- ಜೆಡಿಎಸ್ ಮೈತ್ರಿಯಿಂದಾಗಿ ಹಾಲಿ ರಾಜ್ಯಸಭೆ ಸದಸ್ಯರೂ ಆಗಿರುವ ದೇವೇಗೌಡ ಅವರನ್ನು ಮುಂದುವರಿಸುವ ಸಾಧ್ಯತೆಯೂ ಇದೆ. ಅಂದಹಾಗೆ ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಚರ್ಚೆಗೆ ರಾಜ್ಯಸಭೆ ಚುನಾವಣೆ ಮತ್ತೆ ತಡೆಯಾಗಲಿದ್ದು ದೆಹಲಿಗೆ ತೆರಳಿ ಲಾಬಿ ನಡೆಸಲು ಮುಂದಾಗಿದ್ದ ತಂಡಕ್ಕೆ ಹಿನ್ನಡೆಯಾಗಿದೆ.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
16-09-26 10:51 am
HK News Staffer
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm