ಬ್ರೇಕಿಂಗ್ ನ್ಯೂಸ್
25-05-26 10:19 am HK News Staffer ದೇಶ - ವಿದೇಶ
ನವದೆಹಲಿ, ಮೇ 25: ದೇಶದ ಜನರಿಗೆ ಕೇಂದ್ರ ಸರ್ಕಾರ ಮತ್ತೊಮ್ಮೆ ಇಂಧನ ಶಾಕ್ ನೀಡಿದ್ದು, ಸೋಮವಾರ ಪೆಟ್ರೋಲ್ ಮತ್ತು ಡೀಸೆಲ್ ದರಗಳನ್ನು ಮತ್ತೆ ಏರಿಕೆ ಮಾಡಲಾಗಿದೆ. ಕಳೆದ 11 ದಿನಗಳಲ್ಲೇ ಇದು ನಾಲ್ಕನೇ ಬಾರಿ ಇಂಧನ ದರ ಏರಿಕೆಯಾಗಿದ್ದು, ವಾಹನ ಸವಾರರು ಹಾಗೂ ಸಾಮಾನ್ಯ ಜನರಲ್ಲಿ ಆಕ್ರೋಶಕ್ಕೆ ಕಾರಣವಾಗಿದೆ. ಈ ಬಾರಿ ಪ್ರತಿ ಲೀಟರ್ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಸುಮಾರು 3 ರೂ.ವರೆಗೆ ಹೆಚ್ಚಳ ಮಾಡಲಾಗಿದೆ.
ಇದರೊಂದಿಗೆ ಸಿಎನ್ಜಿ ದರವನ್ನೂ ಪ್ರತಿ ಕೆಜಿಗೆ 1 ರೂ. ಏರಿಕೆ ಮಾಡಲಾಗಿದ್ದು, ಇತ್ತೀಚಿನ ದಿನಗಳಲ್ಲಿ ಇದು ಮೂರನೇ ಬಾರಿಗೆ ಸಿಎನ್ಜಿ ದರ ಏರಿಕೆಯಾಗಿದೆ. ಒಟ್ಟಾರೆ ಸಿಎನ್ಜಿ ದರದಲ್ಲಿ ಸುಮಾರು 4 ರೂ.ಗಳಷ್ಟು ಹೆಚ್ಚಳ ಕಂಡುಬಂದಿದೆ.
ಹೊಸ ದರ ಪರಿಷ್ಕರಣೆಯ ನಂತರ ಬೆಂಗಳೂರಿನಲ್ಲಿ ಪೆಟ್ರೋಲ್ ಬೆಲೆ 110.89 ರೂ.ಗೆ ಏರಿಕೆಯಾದರೆ, ಡೀಸೆಲ್ ಬೆಲೆ 98.80 ರೂ. ತಲುಪಿದೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪೆಟ್ರೋಲ್ 102.12 ರೂ. ಹಾಗೂ ಡೀಸೆಲ್ 95.20 ರೂ. ಆಗಿದೆ. ಕೋಲ್ಕತ್ತಾದಲ್ಲಿ ಪೆಟ್ರೋಲ್ 113.51 ರೂ. ಮತ್ತು ಡೀಸೆಲ್ 99.82 ರೂ. ದಾಖಲಾಗಿದೆ. ಮುಂಬೈನಲ್ಲಿ ಪೆಟ್ರೋಲ್ ದರ 111.21 ರೂ. ಆಗಿದ್ದರೆ, ಡೀಸೆಲ್ 97.83 ರೂ. ತಲುಪಿದೆ. ಚೆನ್ನೈನಲ್ಲಿ ಪೆಟ್ರೋಲ್ 107.77 ರೂ. ಮತ್ತು ಡೀಸೆಲ್ 99.55 ರೂ. ಆಗಿದೆ.
ಜಾಗತಿಕ ಮಟ್ಟದಲ್ಲಿ ಕಚ್ಚಾ ತೈಲ ಬೆಲೆ ಏರಿಕೆಯಾಗುತ್ತಿರುವುದು ಹಾಗೂ ಡಾಲರ್ ಎದುರು ರೂಪಾಯಿ ಮೌಲ್ಯ ಕುಸಿಯುತ್ತಿರುವುದರಿಂದ ತೈಲ ಆಮದು ವೆಚ್ಚ ಹೆಚ್ಚಾಗಿದೆ. ಇದೇ ಕಾರಣದಿಂದ ಭಾರತೀಯ ತೈಲ ಮಾರುಕಟ್ಟೆ ಕಂಪನಿಗಳು ಭಾರೀ ನಷ್ಟ ಅನುಭವಿಸುತ್ತಿದ್ದು, ಆ ನಷ್ಟವನ್ನು ತಗ್ಗಿಸಲು ಬೆಲೆ ಪರಿಷ್ಕರಣೆ ಅನಿವಾರ್ಯವಾಗಿದೆ ಎಂದು ಕೇಂದ್ರ ಸರ್ಕಾರ ಸಮರ್ಥಿಸಿಕೊಂಡಿದೆ.
ಮೇ 15ರಂದು ಮೊದಲ ಬಾರಿಗೆ ಏಕಾಏಕಿ ಪ್ರತಿ ಲೀಟರ್ಗೆ ಸುಮಾರು 3 ರೂ.ಗಳಷ್ಟು ಏರಿಕೆ ಮಾಡಲಾಗಿತ್ತು. ಅದಾದ ಬಳಿಕ ಸತತವಾಗಿ ದರ ಏರಿಕೆ ನಡೆಯುತ್ತಿದ್ದು, ಇದರ ಪರಿಣಾಮ ಸಾರಿಗೆ ವೆಚ್ಚ, ಆಹಾರ ಪದಾರ್ಥಗಳ ಬೆಲೆ ಹಾಗೂ ದಿನನಿತ್ಯದ ಬದುಕಿನ ಮೇಲೂ ಬೀಳುವ ಸಾಧ್ಯತೆ ಇದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.
08-07-26 02:06 pm
HK News Staffer
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
ದೇಶದ 'ತೂಗುಸೇತುವೆಗಳ ಸರದಾರ' ಪದ್ಮಶ್ರೀ ಡಾ. ಗಿರೀಶ್...
07-07-26 10:52 am
ಮೈಸೂರು ದಸರಾದಲ್ಲಿ ಕಂಬಳ ಬೇಡವೇ ಬೇಡ ; ಯದುವೀರ್ ಒಡ...
06-07-26 04:40 pm
07-07-26 03:22 pm
HK News Staffer
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
ಚೀನಾ ಮಹಾಗೋಡೆ ಮಾದರಿಯಲ್ಲೇ ಆಫ್ರಿಕಾ ಮರುಭೂಮಿಯಲ್ಲಿ...
04-07-26 08:09 pm
08-07-26 11:04 pm
HK News Desk
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
ಕನ್ನಡದ ಸುದ್ದಿ ವಾಹಿನಿಗಳು ಮಲಯಾಳ ಮಾಧ್ಯಮ ನೋಡಿ ಕಲಿ...
08-07-26 06:53 pm
ಮಾಣಿ-ಸಂಪಾಜೆ ರಸ್ತೆ ದುರಸ್ತಿಗೆ ಕೇಂದ್ರದಿಂದ 49.22...
08-07-26 01:17 pm
ರಾಮ ಮಂದಿರ ದೇಣಿಗೆ ಲೂಟಿ ; ಹಿಂದೂ ಸಂಘಟನೆಗಳು ಯಾಕೆ...
07-07-26 11:13 pm
09-07-26 11:38 am
HK News Staffer
ಅಡುಗೆ ವಿಚಾರದಲ್ಲಿ ಹೆಂಡತಿಯೊಂದಿಗೆ ಜಗಳ ; ಅಡ್ಡ ಬಂದ...
07-07-26 08:07 pm
Konaje Police, Accused Escapes, Mangalore: ಪೋ...
07-07-26 03:50 pm
Mangalore Panambur Truck Block; ಪಣಂಬೂರಿನಲ್ಲಿ...
06-07-26 04:49 pm
Panambur Gold Robbery, Photo Released: ಚಿನ್ನದ...
06-07-26 12:28 pm