ಬ್ರೇಕಿಂಗ್ ನ್ಯೂಸ್
25-05-26 10:19 am HK News Staffer ದೇಶ - ವಿದೇಶ
ನವದೆಹಲಿ, ಮೇ 25: ದೇಶದ ಜನರಿಗೆ ಕೇಂದ್ರ ಸರ್ಕಾರ ಮತ್ತೊಮ್ಮೆ ಇಂಧನ ಶಾಕ್ ನೀಡಿದ್ದು, ಸೋಮವಾರ ಪೆಟ್ರೋಲ್ ಮತ್ತು ಡೀಸೆಲ್ ದರಗಳನ್ನು ಮತ್ತೆ ಏರಿಕೆ ಮಾಡಲಾಗಿದೆ. ಕಳೆದ 11 ದಿನಗಳಲ್ಲೇ ಇದು ನಾಲ್ಕನೇ ಬಾರಿ ಇಂಧನ ದರ ಏರಿಕೆಯಾಗಿದ್ದು, ವಾಹನ ಸವಾರರು ಹಾಗೂ ಸಾಮಾನ್ಯ ಜನರಲ್ಲಿ ಆಕ್ರೋಶಕ್ಕೆ ಕಾರಣವಾಗಿದೆ. ಈ ಬಾರಿ ಪ್ರತಿ ಲೀಟರ್ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಸುಮಾರು 3 ರೂ.ವರೆಗೆ ಹೆಚ್ಚಳ ಮಾಡಲಾಗಿದೆ.
ಇದರೊಂದಿಗೆ ಸಿಎನ್ಜಿ ದರವನ್ನೂ ಪ್ರತಿ ಕೆಜಿಗೆ 1 ರೂ. ಏರಿಕೆ ಮಾಡಲಾಗಿದ್ದು, ಇತ್ತೀಚಿನ ದಿನಗಳಲ್ಲಿ ಇದು ಮೂರನೇ ಬಾರಿಗೆ ಸಿಎನ್ಜಿ ದರ ಏರಿಕೆಯಾಗಿದೆ. ಒಟ್ಟಾರೆ ಸಿಎನ್ಜಿ ದರದಲ್ಲಿ ಸುಮಾರು 4 ರೂ.ಗಳಷ್ಟು ಹೆಚ್ಚಳ ಕಂಡುಬಂದಿದೆ.
ಹೊಸ ದರ ಪರಿಷ್ಕರಣೆಯ ನಂತರ ಬೆಂಗಳೂರಿನಲ್ಲಿ ಪೆಟ್ರೋಲ್ ಬೆಲೆ 110.89 ರೂ.ಗೆ ಏರಿಕೆಯಾದರೆ, ಡೀಸೆಲ್ ಬೆಲೆ 98.80 ರೂ. ತಲುಪಿದೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪೆಟ್ರೋಲ್ 102.12 ರೂ. ಹಾಗೂ ಡೀಸೆಲ್ 95.20 ರೂ. ಆಗಿದೆ. ಕೋಲ್ಕತ್ತಾದಲ್ಲಿ ಪೆಟ್ರೋಲ್ 113.51 ರೂ. ಮತ್ತು ಡೀಸೆಲ್ 99.82 ರೂ. ದಾಖಲಾಗಿದೆ. ಮುಂಬೈನಲ್ಲಿ ಪೆಟ್ರೋಲ್ ದರ 111.21 ರೂ. ಆಗಿದ್ದರೆ, ಡೀಸೆಲ್ 97.83 ರೂ. ತಲುಪಿದೆ. ಚೆನ್ನೈನಲ್ಲಿ ಪೆಟ್ರೋಲ್ 107.77 ರೂ. ಮತ್ತು ಡೀಸೆಲ್ 99.55 ರೂ. ಆಗಿದೆ.
ಜಾಗತಿಕ ಮಟ್ಟದಲ್ಲಿ ಕಚ್ಚಾ ತೈಲ ಬೆಲೆ ಏರಿಕೆಯಾಗುತ್ತಿರುವುದು ಹಾಗೂ ಡಾಲರ್ ಎದುರು ರೂಪಾಯಿ ಮೌಲ್ಯ ಕುಸಿಯುತ್ತಿರುವುದರಿಂದ ತೈಲ ಆಮದು ವೆಚ್ಚ ಹೆಚ್ಚಾಗಿದೆ. ಇದೇ ಕಾರಣದಿಂದ ಭಾರತೀಯ ತೈಲ ಮಾರುಕಟ್ಟೆ ಕಂಪನಿಗಳು ಭಾರೀ ನಷ್ಟ ಅನುಭವಿಸುತ್ತಿದ್ದು, ಆ ನಷ್ಟವನ್ನು ತಗ್ಗಿಸಲು ಬೆಲೆ ಪರಿಷ್ಕರಣೆ ಅನಿವಾರ್ಯವಾಗಿದೆ ಎಂದು ಕೇಂದ್ರ ಸರ್ಕಾರ ಸಮರ್ಥಿಸಿಕೊಂಡಿದೆ.
ಮೇ 15ರಂದು ಮೊದಲ ಬಾರಿಗೆ ಏಕಾಏಕಿ ಪ್ರತಿ ಲೀಟರ್ಗೆ ಸುಮಾರು 3 ರೂ.ಗಳಷ್ಟು ಏರಿಕೆ ಮಾಡಲಾಗಿತ್ತು. ಅದಾದ ಬಳಿಕ ಸತತವಾಗಿ ದರ ಏರಿಕೆ ನಡೆಯುತ್ತಿದ್ದು, ಇದರ ಪರಿಣಾಮ ಸಾರಿಗೆ ವೆಚ್ಚ, ಆಹಾರ ಪದಾರ್ಥಗಳ ಬೆಲೆ ಹಾಗೂ ದಿನನಿತ್ಯದ ಬದುಕಿನ ಮೇಲೂ ಬೀಳುವ ಸಾಧ್ಯತೆ ಇದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.
24-05-26 09:03 pm
HK News Staffer
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
ಹಾವೇರಿ ; ಕಾಲು ಜಾರಿ ನೀರಿನ ಹೊಂಡಕ್ಕೆ ಬಿದ್ದ 8 ವರ್...
22-05-26 10:24 pm
25-05-26 10:19 am
HK News Staffer
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
ಬೆಲೆ ಏರಿಕೆ, ನಿರುದ್ಯೋಗ, ಮೋದಿ ವಿದೇಶ ಪ್ರವಾಸ ವಿರೋ...
23-05-26 01:59 pm
ಪೆಟ್ರೋಲ್ - ಡೀಸೆಲ್ ಬೆಲೆ ಮತ್ತೆ ಏರಿಕೆ ! ಬೆಂಗಳೂರಿ...
23-05-26 09:15 am
24-05-26 09:22 pm
Mangaluru Staffer
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
ಮಂಗಳೂರು ವಿಮಾನ ದುರಂತಕ್ಕೆ 16 ವರ್ಷ ; 158 ಜೀವಗಳನ್...
22-05-26 09:47 pm
ಬೈಕಂಪಾಡಿ- KIOCL ಜಂಕ್ಷನ್ ಮಧ್ಯೆ ಬಹು ನಿರೀಕ್ಷಿತ ಫ...
22-05-26 08:10 pm
ಮಂಗಳೂರಿನ ನಾಲ್ಕು ಕಡೆ ಅದ್ದೂರಿ ಸಭಾಭವನ ; ಲ್ಯಾಂಡ್...
21-05-26 05:52 pm
25-05-26 09:27 am
HK News Staffer
Bangalore Digital Arrest: ಅಕ್ರಮ ಹಣ ವರ್ಗಾವಣೆ ಹ...
24-05-26 09:01 pm
Assault on police Mangalore: ಗಸ್ತಿನಲ್ಲಿದ್ದ ಉರ...
24-05-26 06:44 pm
ವರದಕ್ಷಿಣೆ ಕಿರುಕುಳ ; ಪೊಲೀಸ್ ಕಾನ್ಸ್ ಟೇಬಲ್ ಪತ್ನಿ...
24-05-26 02:01 pm
ಉಡುಪಿಯಲ್ಲಿ ನಿರ್ಮಾಣ ಹಂತದ ಬಾವಿ ಕುಸಿದು 25 ವರ್ಷದ...
23-05-26 11:54 am