ಬ್ರೇಕಿಂಗ್ ನ್ಯೂಸ್
25-05-26 10:19 am HK News Staffer ದೇಶ - ವಿದೇಶ
ನವದೆಹಲಿ, ಮೇ 25: ದೇಶದ ಜನರಿಗೆ ಕೇಂದ್ರ ಸರ್ಕಾರ ಮತ್ತೊಮ್ಮೆ ಇಂಧನ ಶಾಕ್ ನೀಡಿದ್ದು, ಸೋಮವಾರ ಪೆಟ್ರೋಲ್ ಮತ್ತು ಡೀಸೆಲ್ ದರಗಳನ್ನು ಮತ್ತೆ ಏರಿಕೆ ಮಾಡಲಾಗಿದೆ. ಕಳೆದ 11 ದಿನಗಳಲ್ಲೇ ಇದು ನಾಲ್ಕನೇ ಬಾರಿ ಇಂಧನ ದರ ಏರಿಕೆಯಾಗಿದ್ದು, ವಾಹನ ಸವಾರರು ಹಾಗೂ ಸಾಮಾನ್ಯ ಜನರಲ್ಲಿ ಆಕ್ರೋಶಕ್ಕೆ ಕಾರಣವಾಗಿದೆ. ಈ ಬಾರಿ ಪ್ರತಿ ಲೀಟರ್ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಸುಮಾರು 3 ರೂ.ವರೆಗೆ ಹೆಚ್ಚಳ ಮಾಡಲಾಗಿದೆ.
ಇದರೊಂದಿಗೆ ಸಿಎನ್ಜಿ ದರವನ್ನೂ ಪ್ರತಿ ಕೆಜಿಗೆ 1 ರೂ. ಏರಿಕೆ ಮಾಡಲಾಗಿದ್ದು, ಇತ್ತೀಚಿನ ದಿನಗಳಲ್ಲಿ ಇದು ಮೂರನೇ ಬಾರಿಗೆ ಸಿಎನ್ಜಿ ದರ ಏರಿಕೆಯಾಗಿದೆ. ಒಟ್ಟಾರೆ ಸಿಎನ್ಜಿ ದರದಲ್ಲಿ ಸುಮಾರು 4 ರೂ.ಗಳಷ್ಟು ಹೆಚ್ಚಳ ಕಂಡುಬಂದಿದೆ.
ಹೊಸ ದರ ಪರಿಷ್ಕರಣೆಯ ನಂತರ ಬೆಂಗಳೂರಿನಲ್ಲಿ ಪೆಟ್ರೋಲ್ ಬೆಲೆ 110.89 ರೂ.ಗೆ ಏರಿಕೆಯಾದರೆ, ಡೀಸೆಲ್ ಬೆಲೆ 98.80 ರೂ. ತಲುಪಿದೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪೆಟ್ರೋಲ್ 102.12 ರೂ. ಹಾಗೂ ಡೀಸೆಲ್ 95.20 ರೂ. ಆಗಿದೆ. ಕೋಲ್ಕತ್ತಾದಲ್ಲಿ ಪೆಟ್ರೋಲ್ 113.51 ರೂ. ಮತ್ತು ಡೀಸೆಲ್ 99.82 ರೂ. ದಾಖಲಾಗಿದೆ. ಮುಂಬೈನಲ್ಲಿ ಪೆಟ್ರೋಲ್ ದರ 111.21 ರೂ. ಆಗಿದ್ದರೆ, ಡೀಸೆಲ್ 97.83 ರೂ. ತಲುಪಿದೆ. ಚೆನ್ನೈನಲ್ಲಿ ಪೆಟ್ರೋಲ್ 107.77 ರೂ. ಮತ್ತು ಡೀಸೆಲ್ 99.55 ರೂ. ಆಗಿದೆ.
ಜಾಗತಿಕ ಮಟ್ಟದಲ್ಲಿ ಕಚ್ಚಾ ತೈಲ ಬೆಲೆ ಏರಿಕೆಯಾಗುತ್ತಿರುವುದು ಹಾಗೂ ಡಾಲರ್ ಎದುರು ರೂಪಾಯಿ ಮೌಲ್ಯ ಕುಸಿಯುತ್ತಿರುವುದರಿಂದ ತೈಲ ಆಮದು ವೆಚ್ಚ ಹೆಚ್ಚಾಗಿದೆ. ಇದೇ ಕಾರಣದಿಂದ ಭಾರತೀಯ ತೈಲ ಮಾರುಕಟ್ಟೆ ಕಂಪನಿಗಳು ಭಾರೀ ನಷ್ಟ ಅನುಭವಿಸುತ್ತಿದ್ದು, ಆ ನಷ್ಟವನ್ನು ತಗ್ಗಿಸಲು ಬೆಲೆ ಪರಿಷ್ಕರಣೆ ಅನಿವಾರ್ಯವಾಗಿದೆ ಎಂದು ಕೇಂದ್ರ ಸರ್ಕಾರ ಸಮರ್ಥಿಸಿಕೊಂಡಿದೆ.
ಮೇ 15ರಂದು ಮೊದಲ ಬಾರಿಗೆ ಏಕಾಏಕಿ ಪ್ರತಿ ಲೀಟರ್ಗೆ ಸುಮಾರು 3 ರೂ.ಗಳಷ್ಟು ಏರಿಕೆ ಮಾಡಲಾಗಿತ್ತು. ಅದಾದ ಬಳಿಕ ಸತತವಾಗಿ ದರ ಏರಿಕೆ ನಡೆಯುತ್ತಿದ್ದು, ಇದರ ಪರಿಣಾಮ ಸಾರಿಗೆ ವೆಚ್ಚ, ಆಹಾರ ಪದಾರ್ಥಗಳ ಬೆಲೆ ಹಾಗೂ ದಿನನಿತ್ಯದ ಬದುಕಿನ ಮೇಲೂ ಬೀಳುವ ಸಾಧ್ಯತೆ ಇದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am