ಬ್ರೇಕಿಂಗ್ ನ್ಯೂಸ್
25-05-26 05:29 pm HK News Staffer ದೇಶ - ವಿದೇಶ
ನವದೆಹಲಿ, ಮೇ 25: ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆ ನಡೆಸಬೇಕೆಂದು ಸಲ್ಲಿಸಿದ್ದ ಅರ್ಜಿಯನ್ನು ತುರ್ತು ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ಸೋಮವಾರ ನಿರಾಕರಿಸಿದ್ದು ಅಂತಹ ಅಗತ್ಯ ಏನೂ ಇಲ್ಲ ಎಂದು ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್, ನ್ಯಾಯಮೂರ್ತಿ ಜೋಯ್ಮಲ್ಯ ಬಾಗ್ಚಿ, ವಿ.ಎಂ ಪಂಚೋಲಿ ಅವರಿದ್ದ ಪೀಠವು ಅರ್ಜಿಯನ್ನು ವಿಚಾರಣೆ ನಡೆಸಿತು.
'ಅರ್ಜಿದಾರರು ವಿಷಯವನ್ನು ಭಾವನಾತ್ಮಕವಾಗಿ ತೆಗೆದುಕೊಳ್ಳುತ್ತಿರುವಂತೆ ಕಾಣುತ್ತಿದೆ, ಇದನ್ನು 'ತುಂಬಾ ಭಾವನಾತ್ಮಕವಾಗಿ ತೆಗೆದುಕೊಳ್ಳಬೇಡಿ' ಎಂದು ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಸಲಹೆ ಮಾಡಿದ್ದಾರೆ. ಪ್ರಕರಣದಲ್ಲಿ ಅಂತಹ ಗಂಭೀರ ತುರ್ತು ಏನಿಲ್ಲ. ನಾವು ಪರಿಶೀಲನೆ ಮಾಡುತ್ತೇವೆ ಎಂದು ತಿಳಿಸಿದ್ದಾರೆ. ಸದ್ಯಕ್ಕೆ ಯಾವುದೇ ಗಂಭೀರ ತುರ್ತು ಪರಿಸ್ಥಿತಿ ಕಾಣುತ್ತಿಲ್ಲ. ಅರ್ಜಿಯನ್ನು ನಂತರ ಪರಿಗಣಿಸುತ್ತೇವೆ ಎಂದು ನ್ಯಾಯಾಲಯ ತಿಳಿಸಿದೆ.
ಅರ್ಜಿಯಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಮತ್ತು ಅದರ ಚಟುವಟಿಕೆಗಳ ಕುರಿತಾಗಿ ಸಿಬಿಐ ತನಿಖೆ ನಡೆಸಬೇಕೆಂದು ಕೋರಲಾಗಿತ್ತು. ಮೇ 15ರಂದು ಅರ್ಜಿಯೊಂದರ ವಿಚಾರಣೆ ಸಂದರ್ಭದಲ್ಲಿ ಸಿಜೆಐ ಸೂರ್ಯಕಾಂತ್ ಅವರು ನಿರುದ್ಯೋಗಿಗಳನ್ನು 'ಜಿರಳೆ'ಗಳಿಗೆ ಹೋಲಿಸಿರುವುದು ವಿವಾದಕ್ಕೆ ಕಾರಣವಾಗಿತ್ತು.
ಉದ್ಯೋಗ ಸಿಗದ ಕೆಲವು ಯುವಕರು ಜಿರಳೆಗಳಂತೆ ವ್ಯವಸ್ಥೆಯ ಮೇಲೆ ದಾಳಿ ಮಾಡಲು ಆರಂಭಿಸುತ್ತಾರೆ ಎಂದು ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಹೇಳಿದ್ದರು. ಇದರ ಬೆನ್ನಲ್ಲೇ ಸಾಮಾಜಿಕ ಮಾಧ್ಯಮಗಳಲ್ಲಿ ವ್ಯವಸ್ಥೆಯ ವಿಡಂಬನೆಗಾಗಿ ಕಾಕ್ರೋಚ್ ಜನತಾ ಪಾರ್ಟಿ ಹುಟ್ಟಿಕೊಂಡಿದ್ದು ಭಾರೀ ಸಂಚಲನ ಸೃಷ್ಟಿಸಿದೆ. ಇದರ ಬೆನ್ನಲ್ಲೇ ಸಿಜೆಐ ತಾವು ನಕಲಿ ಪದವೀಧರರನ್ನು ಉದ್ದೇಶಿಸಿ ಈ ಹೇಳಿಕೆ ನೀಡಿದ್ದು ಎಂದು ಸ್ಪಷ್ಟನೆ ನೀಡಿದ್ದರು.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am