ಬ್ರೇಕಿಂಗ್ ನ್ಯೂಸ್
25-05-26 08:18 pm HK News Staffer ದೇಶ - ವಿದೇಶ
ಚೆನ್ನೈ, ಮೇ 25: ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ಎಐಎಡಿಎಂಕೆ ಪಕ್ಷದ ಎಸ್.ಪಿ ವೇಲುಮಣಿ ಮತ್ತು ಸಿ.ವಿ ಷಣ್ಮುಗಂ ಬಣದ ಮೂವರು ಶಾಸಕರು ತಮ್ಮ ಸ್ಥಾನಕ್ಕೆ ಅಧಿಕೃತವಾಗಿ ರಾಜೀನಾಮೆ ನೀಡಿದ್ದು ಟಿವಿಕೆ ಪಕ್ಷ ಸೇರಿದ್ದಾರೆ.
ಮರಗತಂ ಕುಮಾರ್ವೇಲು (ಮಧುರಾಂತಕಂ ಕ್ಷೇತ್ರ), ಜಯಕುಮಾರ್ (ಪೆರುಂದುರೈ ಕ್ಷೇತ್ರ), ಸತ್ಯಭಾಮಾ (ಧಾರಾಪುರಂ ಕ್ಷೇತ್ರ) ಅವರು ತಮಿಳುನಾಡು ವಿಧಾನಸಭೆಯ ಸ್ಪೀಕರ್ ಜೆ.ಸಿ.ಡಿ ಪ್ರಭಾಕರ್ ಅವರನ್ನು ಭೇಟಿಯಾಗಿ ರಾಜೀನಾಮೆ ಸಲ್ಲಿಸಿದ್ದಾರೆ. ಬಳಿಕ ಈ ಮೂವರು ಶಾಸಕರು ಸಚಿವ ಆಧವ್ ಅರ್ಜುನ್ ಅವರನ್ನು ಭೇಟಿಯಾಗಿ ಟಿವಿಕೆ ಸೇರಿದ್ದಾರೆ. ಇದರೊಂದಿಗೆ ತಮಿಳುನಾಡು ವಿಧಾನಸಭೆಯಲ್ಲಿ ಮತ್ತೆ ಮೂರು ಸ್ಥಾನಗಳು ಖಾಲಿಯಾಗಿವೆ. ಸಿಎಂ ವಿಜಯ್ ರಾಜೀನಾಮೆ ನಂತರ ತಾನು ಪ್ರತಿನಿಧಿಸಿದ್ದ ತಿರುಚ್ಚಿ ಪೂರ್ವ ಕ್ಷೇತ್ರವನ್ನು ಬಿಟ್ಟು ಪೆರಂಬದೂರು ಕ್ಷೇತ್ರವನ್ನು ಉಳಿಸಿಕೊಂಡಿದ್ದರು.
ತಮಿಳುನಾಡು ಚುನಾವಣೆ ಫಲಿತಾಂಶದ ನಂತರ ಎಐಎಡಿಎಂಕೆಯಲ್ಲಿ ತೀವ್ರ ಆಂತರಿಕ ಕಲಹ ಏರ್ಪಟ್ಟಿತ್ತು. ಪಕ್ಷದ ಪ್ರಧಾನ ಕಾರ್ಯದರ್ಶಿ ಎಡಪ್ಪಾಡಿ ಕೆ. ಪಳನಿಸ್ವಾಮಿ ವಿರುದ್ಧ ಬಂಡಾಯ ಎದ್ದಿರುವ ಎಸ್ ಪಿ ವೇಲುಮಣಿ ಮತ್ತು ಸಿ.ವಿ ಷಣ್ಮುಗಂ ನೇತೃತ್ವದ ಸುಮಾರು 30 ಶಾಸಕರ ಗುಂಪು, ವಿಜಯ್ ಅವರ ತಮಿಳಗ ವೆಟ್ರಿ ಕಳಗಂ ಸರ್ಕಾರಕ್ಕೆ ಬೆಂಬಲ ಘೋಷಿಸಿತ್ತು. ವಿಧಾನಸಭೆ ಕಲಾಪದಲ್ಲಿ ಈ ಬಂಡಾಯ ಶಾಸಕರು ಮುಖ್ಯಮಂತ್ರಿ ವಿಜಯ್ ಸರ್ಕಾರದ ಪರವಾಗಿ ಮತ ಚಲಾಯಿಸಿದ್ದರು. ಈ ಹಿನ್ನೆಲೆಯಲ್ಲಿ ಪಕ್ಷದ್ರೋಹ ಎಸಗಿದ ಇವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸಲು ಇಪಿಎಸ್ ನೇತೃತ್ವದ ಎಐಎಡಿಎಂಕೆ ನಾಯಕತ್ವವು ಕಾನೂನು ಪ್ರಕ್ರಿಯೆ ಆರಂಭಿಸಿತ್ತು. ಅನರ್ಹತೆಯ ಕಾನೂನು ಕ್ರಮ ಎದುರಿಸುವ ಮುನ್ನವೇ ಎಚ್ಚತ್ತುಕೊಂಡ ಮೂವರು ಶಾಸಕರು, ತಾವಾಗಿಯೇ ತಮ್ಮ ಸ್ಥಾನಗಳಿಗೆ ರಾಜೀನಾಮೆ ನೀಡಿದ್ದಾರೆ.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
16-09-26 10:51 am
HK News Staffer
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm