ಬ್ರೇಕಿಂಗ್ ನ್ಯೂಸ್
25-05-26 08:18 pm HK News Staffer ದೇಶ - ವಿದೇಶ
ಚೆನ್ನೈ, ಮೇ 25: ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ಎಐಎಡಿಎಂಕೆ ಪಕ್ಷದ ಎಸ್.ಪಿ ವೇಲುಮಣಿ ಮತ್ತು ಸಿ.ವಿ ಷಣ್ಮುಗಂ ಬಣದ ಮೂವರು ಶಾಸಕರು ತಮ್ಮ ಸ್ಥಾನಕ್ಕೆ ಅಧಿಕೃತವಾಗಿ ರಾಜೀನಾಮೆ ನೀಡಿದ್ದು ಟಿವಿಕೆ ಪಕ್ಷ ಸೇರಿದ್ದಾರೆ.
ಮರಗತಂ ಕುಮಾರ್ವೇಲು (ಮಧುರಾಂತಕಂ ಕ್ಷೇತ್ರ), ಜಯಕುಮಾರ್ (ಪೆರುಂದುರೈ ಕ್ಷೇತ್ರ), ಸತ್ಯಭಾಮಾ (ಧಾರಾಪುರಂ ಕ್ಷೇತ್ರ) ಅವರು ತಮಿಳುನಾಡು ವಿಧಾನಸಭೆಯ ಸ್ಪೀಕರ್ ಜೆ.ಸಿ.ಡಿ ಪ್ರಭಾಕರ್ ಅವರನ್ನು ಭೇಟಿಯಾಗಿ ರಾಜೀನಾಮೆ ಸಲ್ಲಿಸಿದ್ದಾರೆ. ಬಳಿಕ ಈ ಮೂವರು ಶಾಸಕರು ಸಚಿವ ಆಧವ್ ಅರ್ಜುನ್ ಅವರನ್ನು ಭೇಟಿಯಾಗಿ ಟಿವಿಕೆ ಸೇರಿದ್ದಾರೆ. ಇದರೊಂದಿಗೆ ತಮಿಳುನಾಡು ವಿಧಾನಸಭೆಯಲ್ಲಿ ಮತ್ತೆ ಮೂರು ಸ್ಥಾನಗಳು ಖಾಲಿಯಾಗಿವೆ. ಸಿಎಂ ವಿಜಯ್ ರಾಜೀನಾಮೆ ನಂತರ ತಾನು ಪ್ರತಿನಿಧಿಸಿದ್ದ ತಿರುಚ್ಚಿ ಪೂರ್ವ ಕ್ಷೇತ್ರವನ್ನು ಬಿಟ್ಟು ಪೆರಂಬದೂರು ಕ್ಷೇತ್ರವನ್ನು ಉಳಿಸಿಕೊಂಡಿದ್ದರು.
ತಮಿಳುನಾಡು ಚುನಾವಣೆ ಫಲಿತಾಂಶದ ನಂತರ ಎಐಎಡಿಎಂಕೆಯಲ್ಲಿ ತೀವ್ರ ಆಂತರಿಕ ಕಲಹ ಏರ್ಪಟ್ಟಿತ್ತು. ಪಕ್ಷದ ಪ್ರಧಾನ ಕಾರ್ಯದರ್ಶಿ ಎಡಪ್ಪಾಡಿ ಕೆ. ಪಳನಿಸ್ವಾಮಿ ವಿರುದ್ಧ ಬಂಡಾಯ ಎದ್ದಿರುವ ಎಸ್ ಪಿ ವೇಲುಮಣಿ ಮತ್ತು ಸಿ.ವಿ ಷಣ್ಮುಗಂ ನೇತೃತ್ವದ ಸುಮಾರು 30 ಶಾಸಕರ ಗುಂಪು, ವಿಜಯ್ ಅವರ ತಮಿಳಗ ವೆಟ್ರಿ ಕಳಗಂ ಸರ್ಕಾರಕ್ಕೆ ಬೆಂಬಲ ಘೋಷಿಸಿತ್ತು. ವಿಧಾನಸಭೆ ಕಲಾಪದಲ್ಲಿ ಈ ಬಂಡಾಯ ಶಾಸಕರು ಮುಖ್ಯಮಂತ್ರಿ ವಿಜಯ್ ಸರ್ಕಾರದ ಪರವಾಗಿ ಮತ ಚಲಾಯಿಸಿದ್ದರು. ಈ ಹಿನ್ನೆಲೆಯಲ್ಲಿ ಪಕ್ಷದ್ರೋಹ ಎಸಗಿದ ಇವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸಲು ಇಪಿಎಸ್ ನೇತೃತ್ವದ ಎಐಎಡಿಎಂಕೆ ನಾಯಕತ್ವವು ಕಾನೂನು ಪ್ರಕ್ರಿಯೆ ಆರಂಭಿಸಿತ್ತು. ಅನರ್ಹತೆಯ ಕಾನೂನು ಕ್ರಮ ಎದುರಿಸುವ ಮುನ್ನವೇ ಎಚ್ಚತ್ತುಕೊಂಡ ಮೂವರು ಶಾಸಕರು, ತಾವಾಗಿಯೇ ತಮ್ಮ ಸ್ಥಾನಗಳಿಗೆ ರಾಜೀನಾಮೆ ನೀಡಿದ್ದಾರೆ.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
28-07-26 11:56 am
HK News Staffer
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
28-07-26 12:28 pm
HK News Staffer
12 ವರ್ಷಗಳ ಹಿಂದಿನ ಗಂಗಾಧರ ಪಾಂಗಾಳ ಕೊಲೆ ಪ್ರಕರಣ ;...
27-07-26 11:07 pm
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm