ಬ್ರೇಕಿಂಗ್ ನ್ಯೂಸ್
26-05-26 12:54 pm HK News Staffer ದೇಶ - ವಿದೇಶ
ಬೆಂಗಳೂರು, ಮೇ 26: ಮುಂದಿನ ತಿಂಗಳು ವಿಧಾನ ಪರಿಷತ್ಗೆ ನಡೆಯಲಿರುವ ಚುನಾವಣೆಗೆ ಆಡಳಿತಾರೂಢ ಕಾಂಗ್ರೆಸ್ನಲ್ಲಿ ಪೈಪೋಟಿ ಶುರುವಾಗಿದೆ. ಜೂನ್, ಜುಲೈನಲ್ಲಿ ಖಾಲಿಯಾಗುವ 9 ಸ್ಥಾನಗಳಿಗೆ ಆಯ್ಕೆಗೊಳ್ಳಲು ಆಕಾಂಕ್ಷಿಗಳ ಪಟ್ಟಿ ಮೂರು ಡಜನ್ ಗಿಂತಲೂ ಹೆಚ್ಚಿದೆ. ಇದಕ್ಕಾಗಿ ಲಾಬಿ ನಡೆಸಲು ಆಕಾಂಕ್ಷಿಗಳ ತಂಡವೊಂದು ಸೋಮವಾರವೇ ದೆಹಲಿಗೆ ತೆರಳಿದೆ.
ನಾಮನಿರ್ದೇಶನ ಮತ್ತು ವಿಧಾನಸಭೆಯಿಂದ ಆಯ್ಕೆಯಾಗಿರುವ 12 ಸದಸ್ಯರು ನಿವೃತ್ತಿಯಾಗಲಿದ್ದಾರೆ. ಈ ಪೈಕಿ 9 ಸ್ಥಾನಗಳು ಕಾಂಗ್ರೆಸ್ ಪಾಲಾಗಲಿವೆ. ಪರಿಷತ್ ಸ್ಥಾನಗಳು ಖಾಲಿಯಾದ ಮೇಲೆ ಹೊಸ ಆಯ್ಕೆಗೆ ಸರ್ಕಾರ ಅಧಿಸೂಚನೆ ಹೊರಡಿಸಲಿದೆ. ಆ ನಂತರ ಪ್ರಕ್ರಿಯೆ ಶುರುವಾಗಲಿದೆ. ಈ ಕುರಿತು ಸಿಎಂ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿಸಿಎಂ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ ಮಾಡಿ ಹಲವರು ಮನವಿ ಸಲ್ಲಿಸಿದ್ದಾರೆ. ಇದೀಗ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪ್ರಧಾನ ಕಾರ್ಯದರ್ಶಿಗಳಾದ ಕೆ.ಸಿ.ವೇಣುಗೋಪಾಲ್ ಮತ್ತು ರಣದೀಪ್ ಸಿಂಗ್ ಸುರ್ಜೇವಾಲಾ ಸೇರಿಗೆ ಮನವಿ ಸಲ್ಲಿಸಲು ದೆಹಲಿಗೆ ಪ್ರಯಾಣ ಬೆಳೆಸಿದ್ದಾರೆ.
ಪರಿಷತ್ತಿಗೆ ನಾಮ ನಿರ್ದೇಶನವಾಗಿದ್ದ ಬಿಜೆಪಿಯ ಎಚ್. ವಿಶ್ವನಾಥ್, ಭಾರತಿ ಶೆಟ್ಟಿ, ಶಾಂತರಾಮ್ ಸಿದ್ಧಿ, ಡಾ.ತಳವಾರ ಸಾಬಣ್ಣ, ಕಾಂಗ್ರೆಸ್ನ ರಮೇಶ್ ಬಾಬು ಜುಲೈನಲ್ಲಿ ನಿವೃತ್ತಿಯಾಗಲಿದ್ದಾರೆ. ವಿಧಾನಸಭಾ ಕ್ಷೇತ್ರದಿಂದ ಆಯ್ಕೆಯಾಗಿದ್ದ ಜೆಡಿಎಸ್ನ ಗೋವಿಂದರಾಜು, ಕಾಂಗ್ರೆಸ್ನ ನಸೀರ್ ಅಹ್ಮದ್, ಬಿಜೆಪಿಯ ಎನ್. ನಾಗರಾಜು (ಎಂಟಿಬಿ), ಕೆ.ಪ್ರತಾಪ್ ಸಿಂಹ ನಾಯಕ್, ಸುನೀಲ್ ವಲ್ಯಾಪುರೆ, ಕಾಂಗ್ರೆಸ್ನ ಬಿ.ಕೆ.ಹರಿಪ್ರಸಾದ್ ಮತ್ತು ತಿಪ್ಪಣ್ಣ ಕಮಕನೂರ ಜೂನ್ನಲ್ಲಿ ನಿವೃತ್ತಿಯಾಗಲಿದ್ದಾರೆ.
ಇದೇ ವೇಳೆ, ಈ ಸ್ಥಾನಗಳಿಗೆ ಆಯ್ಕೆಗೊಳ್ಳಲು ಕಾಂಗ್ರೆಸ್ ಕಡೆಯಿಂದ ಎ.ಎನ್.ನಟರಾಜ್ಗೌಡ, ಬಿ.ಆರ್.ನಾಯ್ಡು, ಅನಿಲ್ ತಡ್ಕಲ್, ಕಾಂತನಾಯಕ್, ನಟರಾಜ್, ರಾಜೇಶ್ವರಿ ಪಾಟೀಲ್, ಪುಷ್ಪಾ ಅಮರನಾಥ್, ತಿಪ್ಪೇಸ್ವಾಮಿ, ಸುನೀಲ್ ಹನುಮಣ್ಣವರ್, ಮೆಹರೋಜ್ ಖಾನ್, ನಿಜಾಮ್ ಫೈಜಾಕ್, ಎಂ.ವೆಂಕಟೇಶ್ ಮುಂಚೂಣಿಯಲ್ಲಿ ಲಾಬಿ ನಡೆಸುತ್ತಿದ್ದಾರೆ. ನಿವೃತ್ತಿ ಬಳಿಕ ಮರು ಆಯ್ಕೆ ಬಯಸುವವರ ಪಟ್ಟಿಯಲ್ಲಿ ರಮೇಶ್ ಬಾಬು, ಬಿ.ಕೆ ಹರಿಪ್ರಸಾದ್ ಮುಂದಿದ್ದಾರೆ.
17-08-26 02:26 pm
HK News Staffer
ಜಮೀರ್ ಹಲ್ಲು ಕಿತ್ತ ಹಾವು, ನೆಪಕ್ಕಷ್ಟೇ ಸಚಿವ ಸ್ಥಾನ...
14-08-26 08:42 pm
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
18-08-26 02:42 pm
HK News Staffer
ನಿತಿನ್ ನಬಿನ್ ಸಾರಥ್ಯದಲ್ಲಿ ಬಿಜೆಪಿಗೆ ಹೊಸ ಟೀಮ್ ;...
17-08-26 09:45 pm
ಪ್ರಧಾನಿ ‘ದಿಮಾಗಿ ನಕ್ಸಲರು’ ಹೇಳಿಕೆಗೆ ರಿಜಿಜು ಅರ್ಥ...
17-08-26 05:38 pm
ನೀಟ್ ಪರೀಕ್ಷೆ ರದ್ದುಗೊಳಿಸಲು ತಮಿಳುನಾಡು ವಿಧಾನಸಭೆಯ...
11-08-26 10:25 pm
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
17-08-26 05:07 pm
HK News Staffer
ನಾಗರಪಂಚಮಿ ; ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ಸ...
16-08-26 09:33 pm
After Rotten Chicken Scare at KFC, McDonald’s...
16-08-26 08:29 pm
McDonald's City Centre Raid, Mangalore: ಕೆಎಫ್...
16-08-26 08:20 pm
ಫೈವ್ ಸ್ಟಾರ್ ಹೊಟೇಲ್ ರೈಡ್ ಆದ್ರೂ ಕೊಳೆತ ಮಾಂಸ ಇಟ್ಕ...
16-08-26 04:14 pm
18-08-26 10:06 pm
HK News Staffer
ಮೊಬೈಲ್ ಗೀಳು ಬೇಡ ಎಂದಿದ್ದ ಅಜ್ಜನನ್ನೇ ಕೊಲ್ಲಿಸಿದ 1...
18-08-26 06:02 pm
ಚಿಕ್ಕಬಾಣಾವರ ತಂದೆ, ಮಗು ಸಾವಿಗೆ ರೋಚಕ ಟ್ವಿಸ್ಟ್ ;...
18-08-26 03:00 pm
ಬೆಳಗಾವಿಯಲ್ಲಿ ಬೀದಿ ನಾಯಿಗಳ ಅಟ್ಟಹಾಸ ; ವೃದ್ಧನ ಮೇಲ...
17-08-26 10:04 pm
ದಾಂಡೇಲಿ ವೈಲ್ಡರ್ ನೆಸ್ಟ್ ರೆಸಾರ್ಟ್ಗೆ ನುಗ್ಗಿದ ಬ್...
17-08-26 10:02 pm