ಬ್ರೇಕಿಂಗ್ ನ್ಯೂಸ್
31-05-26 09:25 pm HK News Staffer ದೇಶ - ವಿದೇಶ
ನವದೆಹಲಿ, ಮೇ 31: ಗಲ್ಫ್ ಯುದ್ಧ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಚಿನ್ನ ಖರೀದಿಯನ್ನು ಮುಂದೂಡುವಂತೆ ಪ್ರಧಾನಿ ನರೇಂದ್ರ ಮೋದಿ ದೇಶದ ಜನರಿಗೆ ಕರೆ ನೀಡಿರುವುದು ಮತ್ತು ಕೇಂದ್ರ ಸರಕಾರ ಚಿನ್ನದ ಮೇಲಿನ ಆಮದು ಸುಂಕವನ್ನು ಶೇ.6ರಿಂದ ಶೇ.15ಕ್ಕೆ ಹೆಚ್ಚಿಸಿದ ಬೆನ್ನಲ್ಲೇ ಚಿನ್ನದ ಬೇಡಿಕೆ ದೇಶದಲ್ಲಿ ಶೇ.70ರಷ್ಟು ಕುಸಿದಿದೆ.
ಆಮದು ಸುಂಕ ಏರಿಕೆಯಾದ ನಂತರದ 14 ದಿನಗಳಲ್ಲಿ ಬೇಡಿಕೆ ಪ್ರಮಾಣ 7.5 ಟನ್ ಗಳಷ್ಟು ಇಳಿಕೆಯಾಗಿದೆ. ಹಿಂದಿನ ವರ್ಷ ಮೇ ತಿಂಗಳ ಇದೇ ಅವಧಿಯಲ್ಲಿ ಅಂದರೆ ಮೇ 13ರಿಂದ 27ರ ಅವಧಿಯಲ್ಲಿ ಚಿನ್ನದ ಬೇಡಿಕೆ ಪ್ರಮಾಣ 25 ಟನ್ ಇತ್ತು. ಈ ಸಲ ಎರಡು ವಾರದಲ್ಲಿ 7.5 ಟನ್ ನಷ್ಟು ಚಿನ್ನದ ಬೇಡಿಕೆ ಕುಸಿದಿದೆ. ದೇಶಾದ್ಯಂತ ಚಿನ್ನಕ್ಕೆ ಬೇಡಿಕೆ ಕಡಿಮೆಯಾಗಿದ್ದು ಚಿನ್ನ ಖರೀದಿಗೆ ಗ್ರಾಹಕರು ಮುಂದಾಗುತ್ತಿಲ್ಲ ಎಂದು ಅಖಿಲ ಭಾರತ ಆಭರಣ ವ್ಯಾಪಾರಿಗಳ ಸಂಘದ ರಾಷ್ಟ್ರೀಯ ಕಾರ್ಯದರ್ಶಿ ಸುರೇಂದ್ರ ಮೆಹ್ತಾ ಹೇಳಿದ್ದಾರೆ.
ಅಮದು ಸುಂಕ ಹೆಚ್ಚಳದ ನಂತರ ಸರಕು ಮತ್ತು ಸೇವಾ ತೆರಿಗೆ (ಜಿಎಸ್ಟಿ) ಸೇರಿದಂತೆ ಚಿನ್ನದ ಮೇಲೆ ತೆರಿಗೆ ಹೊರೆ ಶೇ.9.18 ರಿಂದ ಶೇ.18.45ಕ್ಕೆ ಏರಿದೆ. ರೂಪಾಯಿ ಅಪಮೌಲ್ಯ, ಕಚ್ಚಾ ತೈಲದ ಹೆಚ್ಚಿದ ಬೆಲೆಗಳು, ಭೌಗೋಳಿಕ ರಾಜಕೀಯ ಉದ್ವಿಗ್ನತೆ ಹಿನ್ನೆಲೆಯಲ್ಲಿ ಸರಕಾರ ಸುಂಕಗಳನ್ನು ಹೆಚ್ಚಿಸಿದೆ.
ಪ್ರಧಾನಿ ಮೋದಿಯವರ ಕರೆ ಚಿನ್ನದ ಬೇಡಿಕೆ ಕುಸಿಯಲು ಪ್ರಮುಖ ಕಾರಣ. ''ಒಂದು ವರ್ಷದ ತನಕ ಚಿನ್ನದ ಖರೀದಿಯಿಂದ ದೂರವಿರಿ," ಎಂದು ಮೋದಿ ಕರೆ ನೀಡಿರುವುದು ಚಿನ್ನ ಖರೀದಿ ಮೇಲೆ ದೊಡ್ಡ ಪರಿಣಾಮ ಬೀರಿದೆ. ಇದೇ ವೇಳೆ ಚಿನ್ನದ ಮೇಲಿನ ಹೂಡಿಕೆಯೂ ಕಡಿಮೆಯಾಗಿದೆ. ಜನರು ಕಡಿಮೆ ಕ್ಯಾರೆಟ್ನ ಆಭರಣಗಳ ಕಡೆಗೆ ಮುಖ ಮಾಡುತ್ತಿದ್ದಾರೆ. ಆದರೆ ಹಳೆಯ ಚಿನ್ನದ ಮಾರಾಟವು ಹೆಚ್ಚಾಗಿದೆ. ಗ್ರಾಹಕರು ತಮ್ಮ ಬಜೆಟ್ ಮೀರಿ ಖರ್ಚು ಮಾಡುತ್ತಿಲ್ಲ ಎಂದು ಜಾಗತಿಕ ಚಿನ್ನ ಸಂಶೋಧನಾ ಮಂಡಳಿ ಮುಖ್ಯಸ್ಥೆ ಕವಿತಾ ಚಾಕೋ ತಿಳಿಸಿದ್ದಾರೆ. ಬೇಡಿಕೆ ಕುಸಿದರೂ ಚಿನ್ನದ ದರದಲ್ಲಿ ಹೆಚ್ಚಿನ ವ್ಯತ್ಯಾಸ ಆಗಿಲ್ಲ. ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ 16100 ರು. ಆಸುಪಾಸಿನಲ್ಲಿ ಇದೆ.
08-06-26 12:37 pm
HK News Staffer
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
ಎಂಬಿಬಿಎಸ್ ಪದವಿ ಮುಗಿಸಿದ ಬೆನ್ನಲ್ಲೇ ಸರ್ಕಾರಿ ಆಸ್ಪ...
05-06-26 07:14 pm
ಬೆಂಗಳೂರು ಖಾತೆಗಾಗಿ ರಾಮಲಿಂಗಾರೆಡ್ಡಿ ಬಂಡಾಯ: ಮನವೊಲ...
05-06-26 06:19 pm
ರಾಮಲಿಂಗಾ ರೆಡ್ಡಿ ಕಚೇರಿ ಎದುರಲ್ಲಿ ಪ್ರತಿಭಟನೆ ; ಕಾ...
05-06-26 05:23 pm
06-06-26 10:42 pm
HK News Desk
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
ಯೋಗಿಜೀ ನಮ್ಮನ್ನು ಕ್ಷಮಿಸಿ..! ಇನ್ನೆಂದೂ ಅಪರಾಧ ಕೃತ...
04-06-26 04:19 pm
20 ವರ್ಷಗಳ ಹಿಂದೆ ಬರೆದಿದ್ದ ಪರೀಕ್ಷೆಗೆ ಈಗ ಬಂತು ಸರ...
03-06-26 09:17 pm
08-06-26 04:55 pm
HK News Staffer
UT Khader, Mangalore: ಎಂಬಿಬಿಎಸ್ ಆದವರಿಗೆ ಕಲಿತ...
07-06-26 03:38 pm
Apex Capital Fraud Investment, Mangalore: ಬಿಜ...
07-06-26 01:57 pm
ಮುರಿನಕಟ್ಟೆ ಧ್ವಂಸ ಪ್ರಕರಣಕ್ಕೆ ಮತ್ತೆ ಕಾವು ; ಭಟ್ಕ...
05-06-26 01:25 pm
ಪಿನಾಕಿನಿ ಹೊಳೆಯಲ್ಲಿ ಹೆಚ್ಚಾದ ಹೂಳು, ಬದಲಾದ ಹರಿವಿನ...
04-06-26 12:51 pm
08-06-26 04:42 pm
HK News Staffer
ರಾಜ್ಯ- ಕೇಂದ್ರ ಸರ್ಕಾರದ ಇಲಾಖೆಗಳಲ್ಲಿ ಉದ್ಯೋಗ ಕೊಡಿ...
08-06-26 03:14 pm
ಪಬ್ಜಿ ಚಟಕ್ಕೆ ಬಿದ್ದು ಅಪ್ಪ - ಅಕ್ಕನನ್ನ ಚಟ್ಟಕ್ಕೆ...
08-06-26 02:20 pm
ಹಾಸನದ ಜಿಲ್ಲಾ ನ್ಯಾಯಾಲಯದ ಎದುರೇ ರೌಡಿಶೀಟರ್ ಬರ್ಬರ...
08-06-26 12:33 pm
ಕೋಟೆಕಾರು ದರೋಡೆ ಪ್ರಕರಣದಲ್ಲಿ ಮತ್ತೊಬ್ಬ ಆರೋಪಿ ಬಂಧ...
07-06-26 03:08 pm