ಬ್ರೇಕಿಂಗ್ ನ್ಯೂಸ್
06-06-26 05:48 pm HK News Staffer ದೇಶ - ವಿದೇಶ
ನವದೆಹಲಿ, ಜೂನ್ 6: NEET- UG ಪ್ರಶ್ನೆಪತ್ರಿಕೆ ಸೋರಿಕೆ ಸೇರಿದಂತೆ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿನ ಅಕ್ರಮಗಳ ವಿರುದ್ಧ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದಿದೆ. ‘ಕಾಕ್ರೋಚ್ ಜನತಾ ಪಾರ್ಟಿ’ ಪ್ರತಿಭಟನಾ ಕರೆಗೆ ಶಾಲಾ ಮಕ್ಕಳು, ಕಾಲೇಜು ವಿದ್ಯಾರ್ಥಿಗಳು, ಯುವಕರು ಮತ್ತು ಪೋಷಕರು ಸೇರಿದಂತೆ ನೂರಾರು ಮಂದಿ ಬೆಂಬಲ ವ್ಯಕ್ತಪಡಿಸಿದ್ದು, ದೆಹಲಿಯ ಜಂತರ್ ಮಂತರ್ನಲ್ಲಿ ಧರಣಿಗಿಳಿದಿದ್ದಾರೆ.
ಕಾಕ್ರೋಚ್ ಜನತಾ ಪಾರ್ಟಿ ಸಂಘಟನೆಯ ಬೆಂಬಲಿಗರು ಜಿರಳೆ ಮುಖವಾಡಗಳನ್ನು ಧರಿಸಿ, ಕೈಯಲ್ಲಿ ಹೂವುಗಳು, ಪುಸ್ತಕಗಳು ಹಾಗೂ ತ್ರಿವರ್ಣ ಧ್ವಜ ಹಿಡಿದು ಪ್ರತಿಭಟನೆಯಲ್ಲಿ ಭಾಗವಹಿಸಿದರು. ಹಲವಾರು ಶಾಲಾ ವಿದ್ಯಾರ್ಥಿಗಳು ತಮ್ಮ ಪೋಷಕರೊಂದಿಗೆ ಆಗಮಿಸಿದ್ದು, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದ್ದಾರೆ.





ಸಂಘಟನೆಯ ಸಂಸ್ಥಾಪಕ ಅಭಿಜೀತ್ ದಿಪ್ಕೆ ಪ್ರತಿಭಟನೆಯನ್ನು ಶಾಂತಿಯುತ ನಡೆಸುವಂತೆ ಕರೆ ನೀಡಿದ್ದು, ಪೊಲೀಸರಿಗೆ ಹೂವುಗಳನ್ನು ನೀಡಿ ಗೌರವ ಸೂಚಿಸಬೇಕು ಹಾಗೂ ಪ್ರೀತಿ ಮತ್ತು ಶಾಂತಿಯ ಮಾರ್ಗದಲ್ಲಿ ಹೋರಾಟ ನಡೆಸಬೇಕು ಎಂದು ಸಾಮಾಜಿಕ ಜಾಲತಾಣದ ಮೂಲಕ ಮನವಿ ಮಾಡಿದ್ದರು. ಮೊದಲು ಸಂಸತ್ ಮಾರ್ಗ ಪೊಲೀಸ್ ಠಾಣೆಯ ಮುಂದೆ ಸೇರಲು ಬೆಂಬಲಿಗರಿಗೆ ಸೂಚಿಸಲಾಗಿತ್ತು. ಆದರೆ, ನಂತರ ದೆಹಲಿ ಪೊಲೀಸರು ಜಂತರ್ ಮಂತರ್ನಲ್ಲಿ ಪ್ರತಿಭಟನೆ ನಡೆಸಲು ಅನುಮತಿ ನೀಡಿದ ಹಿನ್ನೆಲೆಯಲ್ಲಿ ಪ್ರತಿಭಟನಾಕಾರರು ನೇರವಾಗಿ ಅಲ್ಲಿಗೆ ತೆರಳಿದರು.
ಪ್ರತಿಭಟನೆ ವೇಳೆ "ಕಾಕ್ರೋಚ್ಗಳು ಬರುತ್ತಿವೆ, ಧರ್ಮೇಂದ್ರ ಪ್ರಧಾನ್ ಹೊರಟು ಹೋಗುತ್ತಿದ್ದಾರೆ" ಎಂಬ ಘೋಷಣೆಗಳನ್ನು ಕೂಗಲಾಗಿದ್ದು, NEET, CBSE, CUET ಹಾಗೂ SSC ಪರೀಕ್ಷೆಗಳಲ್ಲಿನ ಅಕ್ರಮಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಮತ್ತು ಶಿಕ್ಷಣ ಸಚಿವರು ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದ್ದಾರೆ.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am