ಬ್ರೇಕಿಂಗ್ ನ್ಯೂಸ್
08-06-26 09:11 pm HK News Staffer ದೇಶ - ವಿದೇಶ
ನವದೆಹಲಿ, ಜೂನ್ 8: ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿರುವ ಹಿನ್ನೆಲೆಯಲ್ಲಿ ಇರಾನ್ನಲ್ಲಿ ನೆಲೆಸಿರುವ ಭಾರತ ಮೂಲದ ಪ್ರಜೆಗಳು ಆದಷ್ಟು ಬೇಗ ದೇಶ ತೊರೆಯುವಂತೆ ಭಾರತ ಸರ್ಕಾರ ಸಲಹೆ ನೀಡಿದೆ. ಅಲ್ಲದೆ, ಭಾರತೀಯರು ಅನಗತ್ಯವಾಗಿ ಇರಾನ್ಗೆ ಪ್ರಯಾಣಿಸದಂತೆಯೂ ಎಚ್ಚರಿಕೆ ನೀಡಿದೆ.
ಟೆಹ್ರಾನ್ನಲ್ಲಿರುವ ಭಾರತೀಯ ರಾಯಭಾರ ಕಚೇರಿ ಸೋಮವಾರ ಹೊಸ ಪ್ರಯಾಣ ಸಲಹೆ ಬಿಡುಗಡೆ ಮಾಡಿದ್ದು, ಪ್ರಾದೇಶಿಕ ಭದ್ರತಾ ಪರಿಸ್ಥಿತಿ ಹದಗೆಟ್ಟ ಹಿನ್ನೆಲೆಯಲ್ಲಿ ಈ ಸೂಚನೆ ನೀಡಲಾಗಿದೆ. ಇತ್ತೀಚಿನ ಬೆಳವಣಿಗೆ ಗಮನದಲ್ಲಿಟ್ಟು ಭಾರತ ಕಡೆಯಿಂದ ನೀಡಿರುವ ಎಂಟನೇ ಸಲಹೆ ಇದಾಗಿದೆ. ಇತ್ತೀಚಿನ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಎಲ್ಲಾ ಭಾರತೀಯ ನಾಗರಿಕರು ಇರಾನ್ಗೆ ಯಾವುದೇ ರೀತಿ ಪ್ರಯಾಣ ಕೈಗೊಳ್ಳಬಾರದು. ಈಗಾಗಲೇ ಇರಾನ್ನಲ್ಲಿ ಇರುವವರು ಲಭ್ಯವಿರುವ ಸಾರಿಗೆ ವ್ಯವಸ್ಥೆಗಳನ್ನು ಬಳಸಿಕೊಂಡು ಆದಷ್ಟು ಬೇಗ ದೇಶ ತೊರೆಯಬೇಕು ಎಂದು ಭಾರತೀಯ ರಾಯಭಾರ ಕಚೇರಿ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.
ಇಸ್ರೇಲ್ ಸೋಮವಾರ ಮುಂಜಾನೆ ಇರಾನ್ನ ಮಧ್ಯ ಮತ್ತು ಪಶ್ಚಿಮ ಭಾಗಗಳ ಮೇಲೆ ವೈಮಾನಿಕ ದಾಳಿ ನಡೆಸಿದ ಕೆಲವೇ ಗಂಟೆಗಳ ಬಳಿಕ ಈ ಎಚ್ಚರಿಕೆ ನೀಡಲಾಗಿದೆ. ಇರಾನ್ ಕ್ಷಿಪಣಿ ದಾಳಿಗೆ ಪ್ರತಿಯಾಗಿ ಇಸ್ರೇಲ್ ಈ ದಾಳಿ ನಡೆಸಿದ್ದು, ಇದರಿಂದ ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಆತಂಕ ಹೆಚ್ಚಾಗಿದೆ. ವಿದ್ಯಾರ್ಥಿಗಳು, ಉದ್ಯಮಿಗಳು, ಯಾತ್ರಿಕರು, ಪ್ರವಾಸಿಗರು ಸೇರಿದಂತೆ ಇರಾನ್ನಲ್ಲಿರುವ ಎಲ್ಲಾ ಭಾರತೀಯರಿಗೆ ಕೂಡಲೇ ದೇಶ ತೊರೆದು ಬರುವಂತೆ ಕೇಂದ್ರ ಸರ್ಕಾರ ಸಲಹೆ ನೀಡಿದೆ.
ಮಾಹಿತಿ ಪ್ರಕಾರ, ಫೆಬ್ರವರಿ ಅಂತ್ಯದಲ್ಲಿ ಇಸ್ರೇಲ್ ಮತ್ತು ಅಮೆರಿಕ ದಾಳಿಯ ನಂತರ ಸಂಘರ್ಷ ತೀವ್ರಗೊಂಡಾಗ ಸುಮಾರು 9,000 ಭಾರತೀಯರು ಇರಾನ್ನಲ್ಲಿ ನೆಲೆಸಿದ್ದರು. ಇವರಲ್ಲಿ ಸುಮಾರು 1,800 ಮಂದಿ ಭಾರತಕ್ಕೆ ಮರಳಿದ್ದು, ಇನ್ನೂ 7,500ಕ್ಕೂ ಹೆಚ್ಚು ಭಾರತೀಯರು ಅಲ್ಲಿಯೇ ಉಳಿದಿದ್ದಾರೆ ಎಂದು ಅಂದಾಜಿಸಲಾಗಿದೆ.
17-08-26 02:26 pm
HK News Staffer
ಜಮೀರ್ ಹಲ್ಲು ಕಿತ್ತ ಹಾವು, ನೆಪಕ್ಕಷ್ಟೇ ಸಚಿವ ಸ್ಥಾನ...
14-08-26 08:42 pm
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
18-08-26 02:42 pm
HK News Staffer
ನಿತಿನ್ ನಬಿನ್ ಸಾರಥ್ಯದಲ್ಲಿ ಬಿಜೆಪಿಗೆ ಹೊಸ ಟೀಮ್ ;...
17-08-26 09:45 pm
ಪ್ರಧಾನಿ ‘ದಿಮಾಗಿ ನಕ್ಸಲರು’ ಹೇಳಿಕೆಗೆ ರಿಜಿಜು ಅರ್ಥ...
17-08-26 05:38 pm
ನೀಟ್ ಪರೀಕ್ಷೆ ರದ್ದುಗೊಳಿಸಲು ತಮಿಳುನಾಡು ವಿಧಾನಸಭೆಯ...
11-08-26 10:25 pm
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
17-08-26 05:07 pm
HK News Staffer
ನಾಗರಪಂಚಮಿ ; ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ಸ...
16-08-26 09:33 pm
After Rotten Chicken Scare at KFC, McDonald’s...
16-08-26 08:29 pm
McDonald's City Centre Raid, Mangalore: ಕೆಎಫ್...
16-08-26 08:20 pm
ಫೈವ್ ಸ್ಟಾರ್ ಹೊಟೇಲ್ ರೈಡ್ ಆದ್ರೂ ಕೊಳೆತ ಮಾಂಸ ಇಟ್ಕ...
16-08-26 04:14 pm
18-08-26 10:06 pm
HK News Staffer
ಮೊಬೈಲ್ ಗೀಳು ಬೇಡ ಎಂದಿದ್ದ ಅಜ್ಜನನ್ನೇ ಕೊಲ್ಲಿಸಿದ 1...
18-08-26 06:02 pm
ಚಿಕ್ಕಬಾಣಾವರ ತಂದೆ, ಮಗು ಸಾವಿಗೆ ರೋಚಕ ಟ್ವಿಸ್ಟ್ ;...
18-08-26 03:00 pm
ಬೆಳಗಾವಿಯಲ್ಲಿ ಬೀದಿ ನಾಯಿಗಳ ಅಟ್ಟಹಾಸ ; ವೃದ್ಧನ ಮೇಲ...
17-08-26 10:04 pm
ದಾಂಡೇಲಿ ವೈಲ್ಡರ್ ನೆಸ್ಟ್ ರೆಸಾರ್ಟ್ಗೆ ನುಗ್ಗಿದ ಬ್...
17-08-26 10:02 pm