ಬ್ರೇಕಿಂಗ್ ನ್ಯೂಸ್
08-06-26 09:11 pm HK News Staffer ದೇಶ - ವಿದೇಶ
ನವದೆಹಲಿ, ಜೂನ್ 8: ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿರುವ ಹಿನ್ನೆಲೆಯಲ್ಲಿ ಇರಾನ್ನಲ್ಲಿ ನೆಲೆಸಿರುವ ಭಾರತ ಮೂಲದ ಪ್ರಜೆಗಳು ಆದಷ್ಟು ಬೇಗ ದೇಶ ತೊರೆಯುವಂತೆ ಭಾರತ ಸರ್ಕಾರ ಸಲಹೆ ನೀಡಿದೆ. ಅಲ್ಲದೆ, ಭಾರತೀಯರು ಅನಗತ್ಯವಾಗಿ ಇರಾನ್ಗೆ ಪ್ರಯಾಣಿಸದಂತೆಯೂ ಎಚ್ಚರಿಕೆ ನೀಡಿದೆ.
ಟೆಹ್ರಾನ್ನಲ್ಲಿರುವ ಭಾರತೀಯ ರಾಯಭಾರ ಕಚೇರಿ ಸೋಮವಾರ ಹೊಸ ಪ್ರಯಾಣ ಸಲಹೆ ಬಿಡುಗಡೆ ಮಾಡಿದ್ದು, ಪ್ರಾದೇಶಿಕ ಭದ್ರತಾ ಪರಿಸ್ಥಿತಿ ಹದಗೆಟ್ಟ ಹಿನ್ನೆಲೆಯಲ್ಲಿ ಈ ಸೂಚನೆ ನೀಡಲಾಗಿದೆ. ಇತ್ತೀಚಿನ ಬೆಳವಣಿಗೆ ಗಮನದಲ್ಲಿಟ್ಟು ಭಾರತ ಕಡೆಯಿಂದ ನೀಡಿರುವ ಎಂಟನೇ ಸಲಹೆ ಇದಾಗಿದೆ. ಇತ್ತೀಚಿನ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಎಲ್ಲಾ ಭಾರತೀಯ ನಾಗರಿಕರು ಇರಾನ್ಗೆ ಯಾವುದೇ ರೀತಿ ಪ್ರಯಾಣ ಕೈಗೊಳ್ಳಬಾರದು. ಈಗಾಗಲೇ ಇರಾನ್ನಲ್ಲಿ ಇರುವವರು ಲಭ್ಯವಿರುವ ಸಾರಿಗೆ ವ್ಯವಸ್ಥೆಗಳನ್ನು ಬಳಸಿಕೊಂಡು ಆದಷ್ಟು ಬೇಗ ದೇಶ ತೊರೆಯಬೇಕು ಎಂದು ಭಾರತೀಯ ರಾಯಭಾರ ಕಚೇರಿ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.
ಇಸ್ರೇಲ್ ಸೋಮವಾರ ಮುಂಜಾನೆ ಇರಾನ್ನ ಮಧ್ಯ ಮತ್ತು ಪಶ್ಚಿಮ ಭಾಗಗಳ ಮೇಲೆ ವೈಮಾನಿಕ ದಾಳಿ ನಡೆಸಿದ ಕೆಲವೇ ಗಂಟೆಗಳ ಬಳಿಕ ಈ ಎಚ್ಚರಿಕೆ ನೀಡಲಾಗಿದೆ. ಇರಾನ್ ಕ್ಷಿಪಣಿ ದಾಳಿಗೆ ಪ್ರತಿಯಾಗಿ ಇಸ್ರೇಲ್ ಈ ದಾಳಿ ನಡೆಸಿದ್ದು, ಇದರಿಂದ ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಆತಂಕ ಹೆಚ್ಚಾಗಿದೆ. ವಿದ್ಯಾರ್ಥಿಗಳು, ಉದ್ಯಮಿಗಳು, ಯಾತ್ರಿಕರು, ಪ್ರವಾಸಿಗರು ಸೇರಿದಂತೆ ಇರಾನ್ನಲ್ಲಿರುವ ಎಲ್ಲಾ ಭಾರತೀಯರಿಗೆ ಕೂಡಲೇ ದೇಶ ತೊರೆದು ಬರುವಂತೆ ಕೇಂದ್ರ ಸರ್ಕಾರ ಸಲಹೆ ನೀಡಿದೆ.
ಮಾಹಿತಿ ಪ್ರಕಾರ, ಫೆಬ್ರವರಿ ಅಂತ್ಯದಲ್ಲಿ ಇಸ್ರೇಲ್ ಮತ್ತು ಅಮೆರಿಕ ದಾಳಿಯ ನಂತರ ಸಂಘರ್ಷ ತೀವ್ರಗೊಂಡಾಗ ಸುಮಾರು 9,000 ಭಾರತೀಯರು ಇರಾನ್ನಲ್ಲಿ ನೆಲೆಸಿದ್ದರು. ಇವರಲ್ಲಿ ಸುಮಾರು 1,800 ಮಂದಿ ಭಾರತಕ್ಕೆ ಮರಳಿದ್ದು, ಇನ್ನೂ 7,500ಕ್ಕೂ ಹೆಚ್ಚು ಭಾರತೀಯರು ಅಲ್ಲಿಯೇ ಉಳಿದಿದ್ದಾರೆ ಎಂದು ಅಂದಾಜಿಸಲಾಗಿದೆ.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am