ಬ್ರೇಕಿಂಗ್ ನ್ಯೂಸ್
14-06-26 04:49 pm HK News Staffer ದೇಶ - ವಿದೇಶ
ಗುವಾಹಟಿ, ಜೂನ್ 14: ಅಕ್ರಮ ವಲಸಿಗರು ಆಧಾರ್ ಕಾರ್ಡ್ ಪಡೆಯುವುದನ್ನು ತಡೆಯುವ ಉದ್ದೇಶದಿಂದ 18 ವರ್ಷಕ್ಕಿಂತ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ್ ನೀಡುವುದನ್ನು ಸ್ಥಗಿತಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ತಿಳಿಸಿದ್ದಾರೆ.
ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಸಾಧಾರಣ ಸಂದರ್ಭಗಳಲ್ಲಿ ಮಾತ್ರ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ್ ನೀಡಲು ಅವಕಾಶ ಇರಲಿದೆ ಎಂದರು. ಅಂತಹ ಪ್ರಕರಣಗಳಲ್ಲಿ ಜಿಲ್ಲಾಧಿಕಾರಿಗಳು ಅನುಮತಿಗಾಗಿ ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಬೇಕು. ಅರ್ಜಿದಾರರು ಆಧಾರ್ ಪಡೆಯಲು ಅರ್ಹರೇ ಎಂಬುದನ್ನು ಪರಿಶೀಲಿಸಿ ಸರ್ಕಾರ ಅಂತಿಮ ನಿರ್ಧಾರ ಕೈಗೊಳ್ಳಲಿದೆ ಎಂದು ಹೇಳಿದರು.
ರಾಜ್ಯದಲ್ಲಿ ಆಧಾರ್ ನೋಂದಣಿ ಈಗಾಗಲೇ ಬಹುತೇಕ ಪೂರ್ಣಗೊಂಡಿದೆ. ಕೆಲವು ಜಿಲ್ಲೆಗಳಲ್ಲಿ ಆಧಾರ್ ನೋಂದಣಿ ವ್ಯಾಪ್ತಿ ಶೇ.100ಕ್ಕಿಂತಲೂ ಹೆಚ್ಚಾಗಿದೆ ಎಂದು ಶರ್ಮಾ ತಿಳಿಸಿದರು. ನಿಗದಿತ ಜನಸಂಖ್ಯೆಗಿಂತ (ಶೇ.100ಕ್ಕಿಂತ) ಹೆಚ್ಚು ಆಧಾರ್ ಕಾರ್ಡ್ಗಳು ಹೇಗೆ ವಿತರಿಸಲ್ಪಟ್ಟಿವೆ ಮತ್ತು ಹೆಚ್ಚುವರಿ ಕಾರ್ಡ್ಗಳನ್ನು ಪಡೆಯುತ್ತಿರುವವರು ಯಾರು ಎಂಬುದನ್ನು ಪರಿಶೀಲಿಸಬೇಕಿದೆ. ಯಾವುದೇ ಅಕ್ರಮ ಬಾಂಗ್ಲಾದೇಶಿ ವಲಸಿಗರು ಆಧಾರ್ ಕಾರ್ಡ್ ಪಡೆಯದಂತೆ ನೋಡಿಕೊಳ್ಳಲು ಈ ಕ್ರಮ ಕೈಗೊಳ್ಳಲಾಗುತ್ತಿದೆ’ ಎಂದು ಅವರು ಹೇಳಿದರು.
ಆದರೂ, ಚಹಾ ತೋಟದ ಕಾರ್ಮಿಕ ಸಮುದಾಯ ಹಾಗೂ ಪರಿಶಿಷ್ಟ ಪಂಗಡಗಳ ಜನರಿಗೆ ಆಧಾರ್ ಕಾರ್ಡ್ ವಿತರಣೆಯನ್ನು ಮುಂದುವರಿಸಲಾಗುವುದು. ಈ ಸಮುದಾಯಗಳ ಅನೇಕ ಮಂದಿಗೆ ಇನ್ನೂ ಆಧಾರ್ ಕಾರ್ಡ್ ದೊರೆತಿಲ್ಲ ಎಂದು ಅವರು ಹೇಳಿದರು. ಇದರ ವಿನಾಯಿತಿ ಎಪ್ರಿಲ್ 1, 2027ರ ವರೆಗೆ ಮಾತ್ರ ಜಾರಿಯಲ್ಲಿರುತ್ತದೆ. ಆ ದಿನಾಂಕದ ನಂತರ ಈ ಸಮುದಾಯಗಳಿಗೆ ಸೇರಿದ 18 ವರ್ಷ ಮೇಲ್ಪಟ್ಟವರಿಗೂ ಆಧಾರ್ ಕಾರ್ಡ್ ನೀಡಲಾಗುವುದಿಲ್ಲ ಎಂದು ಮುಖ್ಯಮಂತ್ರಿ ಸ್ಪಷ್ಟಪಡಿಸಿದರು.
ಆಧಾರ್ ಕಾರ್ಡ್ ವಿತರಣೆಯಲ್ಲಿ ರಾಜ್ಯ ಸರ್ಕಾರ ‘ಅತ್ಯಂತ ಕಟ್ಟುನಿಟ್ಟಿನ’ ನಿಲುವು ಅನುಸರಿಸಲಿದೆ. ಅಸ್ಸಾಂನಲ್ಲಿ ಆಧಾರ್ ಕಾರ್ಡ್ ಪಡೆಯುವುದು ಸುಲಭವಾಗುವುದಿಲ್ಲ ಎಂದು ಶರ್ಮಾ ಈ ಹಿಂದೆಯೇ ಹೇಳಿದ್ದರು.
17-08-26 02:26 pm
HK News Staffer
ಜಮೀರ್ ಹಲ್ಲು ಕಿತ್ತ ಹಾವು, ನೆಪಕ್ಕಷ್ಟೇ ಸಚಿವ ಸ್ಥಾನ...
14-08-26 08:42 pm
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
18-08-26 02:42 pm
HK News Staffer
ನಿತಿನ್ ನಬಿನ್ ಸಾರಥ್ಯದಲ್ಲಿ ಬಿಜೆಪಿಗೆ ಹೊಸ ಟೀಮ್ ;...
17-08-26 09:45 pm
ಪ್ರಧಾನಿ ‘ದಿಮಾಗಿ ನಕ್ಸಲರು’ ಹೇಳಿಕೆಗೆ ರಿಜಿಜು ಅರ್ಥ...
17-08-26 05:38 pm
ನೀಟ್ ಪರೀಕ್ಷೆ ರದ್ದುಗೊಳಿಸಲು ತಮಿಳುನಾಡು ವಿಧಾನಸಭೆಯ...
11-08-26 10:25 pm
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
17-08-26 05:07 pm
HK News Staffer
ನಾಗರಪಂಚಮಿ ; ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ಸ...
16-08-26 09:33 pm
After Rotten Chicken Scare at KFC, McDonald’s...
16-08-26 08:29 pm
McDonald's City Centre Raid, Mangalore: ಕೆಎಫ್...
16-08-26 08:20 pm
ಫೈವ್ ಸ್ಟಾರ್ ಹೊಟೇಲ್ ರೈಡ್ ಆದ್ರೂ ಕೊಳೆತ ಮಾಂಸ ಇಟ್ಕ...
16-08-26 04:14 pm
18-08-26 10:06 pm
HK News Staffer
ಮೊಬೈಲ್ ಗೀಳು ಬೇಡ ಎಂದಿದ್ದ ಅಜ್ಜನನ್ನೇ ಕೊಲ್ಲಿಸಿದ 1...
18-08-26 06:02 pm
ಚಿಕ್ಕಬಾಣಾವರ ತಂದೆ, ಮಗು ಸಾವಿಗೆ ರೋಚಕ ಟ್ವಿಸ್ಟ್ ;...
18-08-26 03:00 pm
ಬೆಳಗಾವಿಯಲ್ಲಿ ಬೀದಿ ನಾಯಿಗಳ ಅಟ್ಟಹಾಸ ; ವೃದ್ಧನ ಮೇಲ...
17-08-26 10:04 pm
ದಾಂಡೇಲಿ ವೈಲ್ಡರ್ ನೆಸ್ಟ್ ರೆಸಾರ್ಟ್ಗೆ ನುಗ್ಗಿದ ಬ್...
17-08-26 10:02 pm