ಬ್ರೇಕಿಂಗ್ ನ್ಯೂಸ್
14-06-26 04:49 pm HK News Staffer ದೇಶ - ವಿದೇಶ
ಗುವಾಹಟಿ, ಜೂನ್ 14: ಅಕ್ರಮ ವಲಸಿಗರು ಆಧಾರ್ ಕಾರ್ಡ್ ಪಡೆಯುವುದನ್ನು ತಡೆಯುವ ಉದ್ದೇಶದಿಂದ 18 ವರ್ಷಕ್ಕಿಂತ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ್ ನೀಡುವುದನ್ನು ಸ್ಥಗಿತಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ತಿಳಿಸಿದ್ದಾರೆ.
ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಸಾಧಾರಣ ಸಂದರ್ಭಗಳಲ್ಲಿ ಮಾತ್ರ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ್ ನೀಡಲು ಅವಕಾಶ ಇರಲಿದೆ ಎಂದರು. ಅಂತಹ ಪ್ರಕರಣಗಳಲ್ಲಿ ಜಿಲ್ಲಾಧಿಕಾರಿಗಳು ಅನುಮತಿಗಾಗಿ ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಬೇಕು. ಅರ್ಜಿದಾರರು ಆಧಾರ್ ಪಡೆಯಲು ಅರ್ಹರೇ ಎಂಬುದನ್ನು ಪರಿಶೀಲಿಸಿ ಸರ್ಕಾರ ಅಂತಿಮ ನಿರ್ಧಾರ ಕೈಗೊಳ್ಳಲಿದೆ ಎಂದು ಹೇಳಿದರು.
ರಾಜ್ಯದಲ್ಲಿ ಆಧಾರ್ ನೋಂದಣಿ ಈಗಾಗಲೇ ಬಹುತೇಕ ಪೂರ್ಣಗೊಂಡಿದೆ. ಕೆಲವು ಜಿಲ್ಲೆಗಳಲ್ಲಿ ಆಧಾರ್ ನೋಂದಣಿ ವ್ಯಾಪ್ತಿ ಶೇ.100ಕ್ಕಿಂತಲೂ ಹೆಚ್ಚಾಗಿದೆ ಎಂದು ಶರ್ಮಾ ತಿಳಿಸಿದರು. ನಿಗದಿತ ಜನಸಂಖ್ಯೆಗಿಂತ (ಶೇ.100ಕ್ಕಿಂತ) ಹೆಚ್ಚು ಆಧಾರ್ ಕಾರ್ಡ್ಗಳು ಹೇಗೆ ವಿತರಿಸಲ್ಪಟ್ಟಿವೆ ಮತ್ತು ಹೆಚ್ಚುವರಿ ಕಾರ್ಡ್ಗಳನ್ನು ಪಡೆಯುತ್ತಿರುವವರು ಯಾರು ಎಂಬುದನ್ನು ಪರಿಶೀಲಿಸಬೇಕಿದೆ. ಯಾವುದೇ ಅಕ್ರಮ ಬಾಂಗ್ಲಾದೇಶಿ ವಲಸಿಗರು ಆಧಾರ್ ಕಾರ್ಡ್ ಪಡೆಯದಂತೆ ನೋಡಿಕೊಳ್ಳಲು ಈ ಕ್ರಮ ಕೈಗೊಳ್ಳಲಾಗುತ್ತಿದೆ’ ಎಂದು ಅವರು ಹೇಳಿದರು.
ಆದರೂ, ಚಹಾ ತೋಟದ ಕಾರ್ಮಿಕ ಸಮುದಾಯ ಹಾಗೂ ಪರಿಶಿಷ್ಟ ಪಂಗಡಗಳ ಜನರಿಗೆ ಆಧಾರ್ ಕಾರ್ಡ್ ವಿತರಣೆಯನ್ನು ಮುಂದುವರಿಸಲಾಗುವುದು. ಈ ಸಮುದಾಯಗಳ ಅನೇಕ ಮಂದಿಗೆ ಇನ್ನೂ ಆಧಾರ್ ಕಾರ್ಡ್ ದೊರೆತಿಲ್ಲ ಎಂದು ಅವರು ಹೇಳಿದರು. ಇದರ ವಿನಾಯಿತಿ ಎಪ್ರಿಲ್ 1, 2027ರ ವರೆಗೆ ಮಾತ್ರ ಜಾರಿಯಲ್ಲಿರುತ್ತದೆ. ಆ ದಿನಾಂಕದ ನಂತರ ಈ ಸಮುದಾಯಗಳಿಗೆ ಸೇರಿದ 18 ವರ್ಷ ಮೇಲ್ಪಟ್ಟವರಿಗೂ ಆಧಾರ್ ಕಾರ್ಡ್ ನೀಡಲಾಗುವುದಿಲ್ಲ ಎಂದು ಮುಖ್ಯಮಂತ್ರಿ ಸ್ಪಷ್ಟಪಡಿಸಿದರು.
ಆಧಾರ್ ಕಾರ್ಡ್ ವಿತರಣೆಯಲ್ಲಿ ರಾಜ್ಯ ಸರ್ಕಾರ ‘ಅತ್ಯಂತ ಕಟ್ಟುನಿಟ್ಟಿನ’ ನಿಲುವು ಅನುಸರಿಸಲಿದೆ. ಅಸ್ಸಾಂನಲ್ಲಿ ಆಧಾರ್ ಕಾರ್ಡ್ ಪಡೆಯುವುದು ಸುಲಭವಾಗುವುದಿಲ್ಲ ಎಂದು ಶರ್ಮಾ ಈ ಹಿಂದೆಯೇ ಹೇಳಿದ್ದರು.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
19-07-26 09:37 pm
HK News Staffer
20 ದಿನಗಳ ಉಪವಾಸದಿಂದ ಹದಗೆಟ್ಟ ಆರೋಗ್ಯ, ಸೋನಮ್ ವಾಂಗ...
18-07-26 09:31 pm
ಮಾಜಿ ಪ್ರಧಾನಿ ದೇವೇಗೌಡರ ಧರ್ಮಪತ್ನಿ ಚನ್ನಮ್ಮ ನಿಧನ...
18-07-26 06:22 pm
ಡೊನಾಲ್ಡ್ ಟ್ರಂಪ್ ಕೊಂದವರಿಗೆ 10 ಮಿಲಿಯನ್ ಡಾಲರ್ ಬಹ...
18-07-26 12:48 pm
‘ಪ್ರಾಜೆಕ್ಟ್ ಮೇಘಾಲಯ’ ಸಂಚು ಸ್ಫೋಟ! ವಿಜಯ್ ಸರ್ಕಾರ...
18-07-26 12:22 pm
17-07-26 10:25 pm
HK News Staffer
ಎಸ್ಐಆರ್ ನಡುವೆ ಶಾಶ್ವತ ನಿವಾಸಿ ಪತ್ರ ಜಾರಿ ಅಕ್ರಮ ಬ...
17-07-26 07:58 pm
ಉಳ್ಳಾಲ ತೀರಕ್ಕೆ ಅಪ್ಪಳಿಸಿದ ಬೂತಾಯಿ ಮೀನುಗಳ ರಾಶಿ !...
17-07-26 07:22 pm
ಸುರತ್ಕಲ್ ಬಳಿ ಮೀನುಗಾರಿಕಾ ದೋಣಿ ಪಲ್ಟಿ ; ಸಮುದ್ರಕ್...
17-07-26 03:55 pm
ಸೌಂದರ್ಯ ಕೆಡಿಸಿದೆ ತೊಕ್ಕೊಟ್ಟು ಫ್ಲೈ ಓವರಿನ ಅನಧಿಕೃ...
15-07-26 10:44 pm
19-07-26 07:42 pm
HK News Desk
ಮೂಡುಬಿದ್ರೆ ; ಕುಡಿದ ಮತ್ತಿನಲ್ಲಿ ಮಚ್ಚು ಹಿಡಿದು ಯು...
18-07-26 10:06 pm
ಮೈಸೂರು ; ಹೊಸ ಬದುಕಿನ ಕನಸು 15 ದಿನದಲ್ಲೇ ನುಚ್ಚುನ...
18-07-26 07:27 pm
ಅಕ್ರಮ ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ ; 8 ಕಾರ್...
18-07-26 07:21 pm
ಸಂಪಾಜೆ ಮೀಸಲು ಅರಣ್ಯದಲ್ಲಿ ಕಾಡುಕೋಣ ಬೇಟೆ ; ತಡೆದು...
18-07-26 12:34 pm