ಬ್ರೇಕಿಂಗ್ ನ್ಯೂಸ್
15-06-26 11:18 am HK News Staffer ದೇಶ - ವಿದೇಶ
ಮಸ್ಕತ್, ಜೂನ್ 15: ಕೊಲ್ಲಿ ಪ್ರದೇಶದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆ, ತೈಲ ಹಡಗುಗಳ ಮೇಲಿನ ದಾಳಿ ನಡುವೆಯೇ ತಾಂತ್ರಿಕ ದೋಷದಿಂದ ಭಾರತದ ಧ್ವಜವನ್ನು ಹೊಂದಿದ್ದ ನೌಕೆಯೊಂದು ಒಮಾನ್ ಕರಾವಳಿಯಲ್ಲಿ ಮುಳುಗಡೆಯಾಗಿದೆ. ಅದರಲ್ಲಿದ್ದ ಎಲ್ಲಾ 14 ಸಿಬ್ಬಂದಿಯನ್ನು ಭಾನುವಾರ ರಕ್ಷಿಸಲಾಗಿದೆ ಎಂದು ಮಸ್ಕತ್ನಲ್ಲಿರುವ ಭಾರತೀಯ ರಾಯಭಾರ ಕಚೇರಿ ತಿಳಿಸಿದೆ.
ಈ ಬಗ್ಗೆ ಹೇಳಿಕೆ ಬಿಡುಗಡೆ ಮಾಡಿರುವ ರಾಯಭಾರ ಕಚೇರಿ, ವಾಣಿಜ್ಯ ನೌಕೆಯಾದ ವಿರಾಟ್ 1ರ ಎಂಜಿನ್ನಲ್ಲಿ ತಾಂತ್ರಿಕ ದೋಷ ಕಂಡುಬಂದಿದ್ದರಿಂದ ಸಮುದ್ರದಲ್ಲಿ ಮುಳುಗಡೆಯಾಗುತಿತ್ತು. ಈ ವೇಳೆ, ಒಮಾನ್ ಅಧಿಕಾರಿಗಳ ಸಹಕಾರದೊಂದಿಗೆ ಇತರೇ ಹಡಗುಗಳ ಮೂಲಕ ಅದರಲ್ಲಿದ್ದ ಎಲ್ಲಾ ಸಿಬ್ಬಂದಿಯನ್ನು ರಕ್ಷಿಸಲಾಗಿದೆ ಎಂದು ತಿಳಿಸಿದೆ. ಎಲ್ಲಾ 14 ಮಂದಿ ಸಿಬ್ಬಂದಿ ಸುರಕ್ಷಿತವಾಗಿದ್ದಾರೆ. ಅವರನ್ನು ಮುಂಬೈಗೆ ಪ್ರಯಾಣಿಸುತ್ತಿದ್ದ 'ಎಂವಿ ಜಬಲ್ ಅಲಿ' ಎಂಬ ಮತ್ತೊಂದು ಸರಕು ಸಾಗಣೆ ನೌಕೆಗೆ ಸ್ಥಳಾಂತರಿಸಲಾಗಿದೆ ಎಂದೂ ಹೇಳಿದೆ. ಕಳೆದ ವಾರ ಒಮಾನ್ ಕರಾವಳಿಯಲ್ಲಿ ಭಾರತೀಯ ಸಿಬ್ಬಂದಿಯನ್ನು ಹೊಂದಿದ್ದ ಮೂರು ಹಡಗುಗಳ ಮೇಲೆ ಅಮೆರಿಕ ಪಡೆಗಳು ದಾಳಿ ನಡೆಸಿದ್ದವು. ಈ ದಾಳಿಯಲ್ಲಿ ಮೂವರು ಭಾರತೀಯ ನಾವಿಕರು ಸಾವನ್ನಪ್ಪಿದ್ದರು.
ಹೊರ್ಮುಜ್ ನಲ್ಲಿ ಸಿಕ್ಕಿಬಿದ್ದ 13 ಹಡಗು, 563 ಸಿಬಂದಿ
ಇರಾನ್ ಭಾಗದಲ್ಲಿ ಹೊರ್ಮುಜ್ ಜಲಸಂಧಿ ಮುಚ್ಚಿರುವುದರಿಂದ ಭಾರತಕ್ಕೆ ಸೇರಿದ 13 ಹಡಗುಗಳು 107 ದಿನಗಳಿಂದ ಸಮುದ್ರದಲ್ಲಿ ಸಿಲುಕಿದ್ದು, 563 ನಾವಿಕರ ಸ್ಥಿತಿ ಅತಂತ್ರವಾಗಿದೆ. ಅನಿಶ್ಚಿತತೆ ಮುಂದುವರಿದಿದ್ದು ಅದರ ಸಿಬಂದಿಗೆ ಭಯದ ವಾತಾವರಣ ಸೃಷ್ಟಿಯಾಗಿದೆ. ಫೆ.28ರಂದು ಇರಾನ್ ಮೇಲೆ ಅಮೆರಿಕ ಮೊದಲ ಬಾರಿಗೆ ದಾಳಿ ಮಾಡಿತ್ತು. ಅಲ್ಲಿಂದ ಇಲ್ಲಿಯವರೆಗೆ ಹೊರ್ಮುಜ್ ಜಲಸಂಧಿಯನ್ನು ಆಂಶಿಕವಾಗಿ ಇರಾನ್ ಮುಚ್ಚಿದೆ. ಹಾಗಾಗಿ ಭಾರತದ ಒಟ್ಟು 13 ಹಡಗುಗಳು ಅಲ್ಲಿಂದ ಬರಲಾಗದೇ ಸಿಲುಕಿವೆ. ಹೊರ್ಮುಜ್ ಎಡಬದಿಯ ದಂಡೆಯಲ್ಲಿ ಲಂಗರು ಹಾಕಿರುವ ಹಡಗುಗಳಲ್ಲಿ ಸುಮಾರು 329 ನಾವಿಕರು, ದಕ್ಷಿಣದ ಒಮಾನ್ ಬಲಬದಿಯಲ್ಲಿ ಹಡಗುಗಳಲ್ಲಿ 233 ನಾವಿಕರು, ಕಳೆದ 107 ದಿನಗಳಿಂದ ಕಷ್ಟದಲ್ಲಿ ಜೀವನ ನಡೆಸುತ್ತಿದ್ದಾರೆಂದು ಮೂಲಗಳು ತಿಳಿಸಿವೆ.
ಸಿಬಂದಿಗೆ ಮಾನಸಿಕ ಸಮಸ್ಯೆ ಸಾಧ್ಯತೆ
ಜಲಸಂಧಿ ಮುಚ್ಚಿರುವುದರಿಂದ 20000 ಕ್ಕೂ ಹೆಚ್ಚು ಸಿಬಂದಿ ಸಮಸ್ಯೆಗೆ ತುತ್ತಾಗಿದ್ದಾರೆ. ದೀರ್ಘ ಕಾಲದಿಂದ ಇವರೆಲ್ಲರೂ ಸಮುದ್ರದಲ್ಲೇ ಸಿಲುಕಿದ್ದರಿಂದ ಮಾನಸಿಕ ಒತ್ತಡಕ್ಕೆ ತುತ್ತಾಗುವ ಸಾಧ್ಯತೆ ಇದೆ ಎಂದು ವೈದ್ಯರು ಎಚ್ಚರಿಸಿದ್ದಾರೆ.
12-06-26 12:02 pm
HK News Staffer
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
15-06-26 04:52 pm
HK News Staffer
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
ಮಧ್ಯರಾತ್ರಿ ಎದೆನೋವಿನಿಂದ ಮನೆಯಲ್ಲೇ ಕುಸಿದು ಬಿದ್ದ...
12-06-26 10:48 pm
15-06-26 04:54 pm
HK News Staffer
ಸೋಲಾಪುರದಲ್ಲಿ ಭೀಕರ ದುರಂತ! ನಿಯಂತ್ರಣ ತಪ್ಪಿ ನಾಲೆಗ...
15-06-26 11:50 am
ಧರ್ಮಸ್ಥಳಕ್ಕೆ ತೆರಳಿದ್ದ ಬೆಂಗಳೂರಿನ ಮೂವರು ಯುವಕರು...
15-06-26 11:27 am
ರೇಣುಕಾಸ್ವಾಮಿ ಕೇಸ್ ಮಾದರಿಯಲ್ಲೇ ಬಳ್ಳಾರಿಯಲ್ಲಿ ಭೀಕ...
14-06-26 10:30 pm
ಮಂಜೇಶ್ವರ; ಪ್ರತ್ಯೇಕ ಘಟನೆಗಳಲ್ಲಿ ಇಬ್ಬರು ಬಾಲಕಿಯರು...
14-06-26 05:08 pm