ಬ್ರೇಕಿಂಗ್ ನ್ಯೂಸ್
23-06-26 10:47 pm HK News Staffer ದೇಶ - ವಿದೇಶ
ಮುಂಬೈ, ಜೂನ್ 23: ಮಹಾರಾಷ್ಟ್ರ ಸರಕಾರ ಮಾಹಿತಿ ಹಕ್ಕು ನಿಯಮಗಳಿಗೆ ಮಾಡಿರುವ ಐದು ತಿದ್ದುಪಡಿಗಳನ್ನು ಹಿಂಪಡೆಯದಿದ್ದರೆ, ಜುಲೈ 5ರಿಂದ ಆಮರಣಾಂತ ಉಪವಾಸ ಸತ್ಯಾಗ್ರಹ ಕೈಗೊಳ್ಳುವುದಾಗಿ 89ರ ಹರೆಯದ ಸಾಮಾಜಿಕ ಹೋರಾಟಗಾರ ಅಣ್ಣಾ ಹಝಾರೆ ಎಚ್ಚರಿಕೆ ನೀಡಿದ್ದಾರೆ.
ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರಿಗೆ ಈ ಸಂಬಂಧ ಪತ್ರ ಬರೆದಿರುವ ಅಣ್ಣಾ ಹಝಾರೆ, “ಜೂನ್ 12ರಂದು ಮಾಡಲಾಗಿರುವ ತಿದ್ದುಪಡಿಗಳು ಮಾಹಿತಿ ಹಕ್ಕು ಕಾಯ್ದೆಯ ಆಶಯಗಳನ್ನು ಉಲ್ಲಂಘಿಸುತ್ತದೆ ಹಾಗೂ ಪಾರದರ್ಶಕತೆಯನ್ನು ಇಲ್ಲವಾಗಿಸುತ್ತದೆ” ಎಂದು ಆಕ್ಷೇಪಿಸಿದ್ದಾರೆ. ಮಾಹಿತಿ ಹಕ್ಕು ಅರ್ಜಿಯನ್ನು ಸಲ್ಲಿಸಲು ಏರಿಕೆ ಮಾಡಲಾಗಿರುವ ಶುಲ್ಕವನ್ನೂ ಆಕ್ಷೇಪಿಸಿದ್ದು ಈ ಏರಿಕೆಗೆ ಯಾವುದೇ ತಾರ್ಕಿಕ ಸಮರ್ಥನೆಯಾಗಲಿ ಅಥವಾ ಆರ್ಥಿಕ ವಿಶ್ಲೇಷಣೆಯನ್ನಾಗಲಿ ಒದಗಿಸಿಲ್ಲ ಎಂದು ಅಭಿಪ್ರಾಯ ಪಟ್ಟಿದ್ದಾರೆ.
“ಮಾಹಿತಿ ಹಕ್ಕು ಕಾಯ್ದೆ ಆದಾಯವನ್ನು ಸೃಷ್ಟಿಸುವ ಕಾನೂನಲ್ಲ. 20 ವರ್ಷಗಳ ಬಳಿಕ ಮಾಹಿತಿ ಹಕ್ಕು ಅರ್ಜಿಯ ಶುಲ್ಕವನ್ನು ಏರಿಕೆ ಮಾಡಿರುವುದಾದರೆ, ಮಾಹಿತಿ ನಿರಾಕರಿಸುವ ಅಧಿಕಾರಿಗಳ ಮೇಲಿನ ದಂಡವನ್ನೇಕೆ ಹೆಚ್ಚಳ ಮಾಡಬಾರದು?” ಎಂದೂ ಅವರು ಪ್ರಶ್ನಿಸಿದ್ದಾರೆ. ಮಾಹಿತಿ ಪಡೆಯಲು ಗುರುತಿನ ಚೀಟಿಯನ್ನು ಕಡ್ಡಾಯಗೊಳಿಸಿರುವುದನ್ನು ವಿರೋಧಿಸಿರುವ ಅಣ್ಣಾ ಹಝಾರೆ, ಮಾಹಿತಿ ಹಕ್ಕು ಕಾಯ್ದೆಯ ಸೆಕ್ಷನ್ 6(2)ರ ಅನ್ವಯ ಅರ್ಜಿದಾರರು ಮಾಹಿತಿಯನ್ನು ಪಡೆಯಲು ತಮ್ಮ ವೈಯಕ್ತಿಕ ವಿವರಗಳನ್ನಾಗಲಿ ಅಥವಾ ಕಾರಣಗಳನ್ನಾಗಲಿ ಬಹಿರಂಗಗೊಳಿಸಬೇಕಾದ ಅಗತ್ಯವಿಲ್ಲ. ಇಂತಹ ಷರತ್ತುಗಳು ಮಾಹಿತಿ ಬಯಸುವವರಿಗೆ ಅಪಾಯ ತಂದೊಡ್ಡುತ್ತವೆ” ಎಂದು ಅವರು ತಮ್ಮ ಪತ್ರದಲ್ಲಿ ವಿವರಿಸಿದ್ದಾರೆ.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
23-08-26 06:17 pm
HK News Staffer
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
24-08-26 11:05 am
HK News Staffer
ಹೊಳೆನರಸೀಪುರ ; ಟ್ರ್ಯಾಕ್ಟರ್ ಕೀಯನ್ನು ತಿರುಗಿಸಿದ ಮ...
23-08-26 05:20 pm
ಹೆತ್ತವರನ್ನು ಕೊಲ್ತೇನೆಂದು ಹೇಳಿ ಒಂಬತ್ತನೇ ಕ್ಲಾಸ್...
22-08-26 12:43 pm
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am