ಬ್ರೇಕಿಂಗ್ ನ್ಯೂಸ್
23-06-26 10:47 pm HK News Staffer ದೇಶ - ವಿದೇಶ
ಮುಂಬೈ, ಜೂನ್ 23: ಮಹಾರಾಷ್ಟ್ರ ಸರಕಾರ ಮಾಹಿತಿ ಹಕ್ಕು ನಿಯಮಗಳಿಗೆ ಮಾಡಿರುವ ಐದು ತಿದ್ದುಪಡಿಗಳನ್ನು ಹಿಂಪಡೆಯದಿದ್ದರೆ, ಜುಲೈ 5ರಿಂದ ಆಮರಣಾಂತ ಉಪವಾಸ ಸತ್ಯಾಗ್ರಹ ಕೈಗೊಳ್ಳುವುದಾಗಿ 89ರ ಹರೆಯದ ಸಾಮಾಜಿಕ ಹೋರಾಟಗಾರ ಅಣ್ಣಾ ಹಝಾರೆ ಎಚ್ಚರಿಕೆ ನೀಡಿದ್ದಾರೆ.
ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರಿಗೆ ಈ ಸಂಬಂಧ ಪತ್ರ ಬರೆದಿರುವ ಅಣ್ಣಾ ಹಝಾರೆ, “ಜೂನ್ 12ರಂದು ಮಾಡಲಾಗಿರುವ ತಿದ್ದುಪಡಿಗಳು ಮಾಹಿತಿ ಹಕ್ಕು ಕಾಯ್ದೆಯ ಆಶಯಗಳನ್ನು ಉಲ್ಲಂಘಿಸುತ್ತದೆ ಹಾಗೂ ಪಾರದರ್ಶಕತೆಯನ್ನು ಇಲ್ಲವಾಗಿಸುತ್ತದೆ” ಎಂದು ಆಕ್ಷೇಪಿಸಿದ್ದಾರೆ. ಮಾಹಿತಿ ಹಕ್ಕು ಅರ್ಜಿಯನ್ನು ಸಲ್ಲಿಸಲು ಏರಿಕೆ ಮಾಡಲಾಗಿರುವ ಶುಲ್ಕವನ್ನೂ ಆಕ್ಷೇಪಿಸಿದ್ದು ಈ ಏರಿಕೆಗೆ ಯಾವುದೇ ತಾರ್ಕಿಕ ಸಮರ್ಥನೆಯಾಗಲಿ ಅಥವಾ ಆರ್ಥಿಕ ವಿಶ್ಲೇಷಣೆಯನ್ನಾಗಲಿ ಒದಗಿಸಿಲ್ಲ ಎಂದು ಅಭಿಪ್ರಾಯ ಪಟ್ಟಿದ್ದಾರೆ.
“ಮಾಹಿತಿ ಹಕ್ಕು ಕಾಯ್ದೆ ಆದಾಯವನ್ನು ಸೃಷ್ಟಿಸುವ ಕಾನೂನಲ್ಲ. 20 ವರ್ಷಗಳ ಬಳಿಕ ಮಾಹಿತಿ ಹಕ್ಕು ಅರ್ಜಿಯ ಶುಲ್ಕವನ್ನು ಏರಿಕೆ ಮಾಡಿರುವುದಾದರೆ, ಮಾಹಿತಿ ನಿರಾಕರಿಸುವ ಅಧಿಕಾರಿಗಳ ಮೇಲಿನ ದಂಡವನ್ನೇಕೆ ಹೆಚ್ಚಳ ಮಾಡಬಾರದು?” ಎಂದೂ ಅವರು ಪ್ರಶ್ನಿಸಿದ್ದಾರೆ. ಮಾಹಿತಿ ಪಡೆಯಲು ಗುರುತಿನ ಚೀಟಿಯನ್ನು ಕಡ್ಡಾಯಗೊಳಿಸಿರುವುದನ್ನು ವಿರೋಧಿಸಿರುವ ಅಣ್ಣಾ ಹಝಾರೆ, ಮಾಹಿತಿ ಹಕ್ಕು ಕಾಯ್ದೆಯ ಸೆಕ್ಷನ್ 6(2)ರ ಅನ್ವಯ ಅರ್ಜಿದಾರರು ಮಾಹಿತಿಯನ್ನು ಪಡೆಯಲು ತಮ್ಮ ವೈಯಕ್ತಿಕ ವಿವರಗಳನ್ನಾಗಲಿ ಅಥವಾ ಕಾರಣಗಳನ್ನಾಗಲಿ ಬಹಿರಂಗಗೊಳಿಸಬೇಕಾದ ಅಗತ್ಯವಿಲ್ಲ. ಇಂತಹ ಷರತ್ತುಗಳು ಮಾಹಿತಿ ಬಯಸುವವರಿಗೆ ಅಪಾಯ ತಂದೊಡ್ಡುತ್ತವೆ” ಎಂದು ಅವರು ತಮ್ಮ ಪತ್ರದಲ್ಲಿ ವಿವರಿಸಿದ್ದಾರೆ.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
25-07-26 07:34 pm
HK News Staffer
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
ಮತ್ತೆ ಪ್ರತಿಭಟನೆಗೆ ಬಂದ್ರೆ ಜೇಬಿನಲ್ಲಿ 50 ಗ್ರಾಂ ಡ...
23-07-26 06:26 pm
25-07-26 07:32 pm
HK News Staffer
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
ನೀಟ್ ಪರೀಕ್ಷೆ ; ಮಂಗಳೂರಿನಲ್ಲೂ ಮೊಳಗಿದ ವಿದ್ಯಾರ್ಥಿ...
24-07-26 10:37 pm
Surathkal Brdige, Thokottu, Mangalore: ಸುರತ್ಕ...
23-07-26 10:27 pm
25-07-26 07:36 pm
HK News Staffer
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm
Astra Group Fraud, Lanchu Lal, Mangalore: ‘ಅಸ...
24-07-26 05:30 pm