ಬ್ರೇಕಿಂಗ್ ನ್ಯೂಸ್
02-07-26 01:42 pm HK News Staffer ದೇಶ - ವಿದೇಶ
ಅಯೋಧ್ಯೆ, ಜುಲೈ 2 : ಇಡೀ ದೇಶದಲ್ಲಿ ತೀವ್ರ ಸಂಚಲನ ಎಬ್ಬಿಸಿರುವ ಅಯೋಧ್ಯೆ ಶ್ರೀರಾಮ ಮಂದಿರದ ದೇಣಿಗೆ ಮತ್ತು ಹುಂಡಿ ಹಣ ದುರುಪಯೋಗ ಪ್ರಕರಣದ ತನಿಖೆಯನ್ನು ಪೊಲೀಸರು ತೀವ್ರಗೊಳಿಸಿದ್ದು, ನೇರ ಭಾಗಿಯಾದ ಆರೋಪಿಗಳ ತನಿಖೆಯಲ್ಲಿ ಹಗರಣದ ಹಿಂದೆ ರಾಮಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ನ ಪ್ರಮುಖರಾಗಿದ್ದ ಡಾ. ಅನಿಲ್ ಮಿಶ್ರಾ ಅವರ ಕೈವಾಡ ಇರುವ ಅನುಮಾನ ಮೂಡಿದೆ.
ರಾಮ ಮಂದಿರಕ್ಕೆ ಭಕ್ತರು ನೀಡುವ ಕಾಣಿಕೆ ಮತ್ತು ದೇಣಿಗೆಯನ್ನು (ಚಡಾವಾ) ಎಣಿಕೆ ಮಾಡುವ ಹಾಗೂ ಬ್ಯಾಂಕ್ಗೆ ಜಮಾ ಮಾಡುವ ಪ್ರಕ್ರಿಯೆಯಲ್ಲಿ ಭದ್ರತಾ ನಿಯಮಗಳನ್ನು ಉಲ್ಲಂಘನೆ ಮಾಡಲಾಗಿತ್ತು ಎಂದು ಎಸ್ಐಟಿ ಪ್ರಾಥಮಿಕ ತನಿಖೆಯಲ್ಲಿ ಪತ್ತೆಹಚ್ಚಿದೆ. ಸಿಸಿಟಿವಿ ಕಣ್ಗಾವಲು ಇಲ್ಲದಿರುವುದು ಮತ್ತು ಸಿಬ್ಬಂದಿಗಳ ತಪಾಸಣೆ ನಡೆಸದೆ ಇರುವುದನ್ನು ದುರುಪಯೋಗಪಡಿಸಿ ಕೋಟ್ಯಂತರ ರೂಪಾಯಿ ಲೂಟಿ ಮಾಡಲಾಗಿದೆ. ವಿಶೇಷವೆಂದರೆ, 2025ರಲ್ಲಿ ಈ ಭದ್ರತಾ ನಿಯಮಗಳಿಗೆ ಅನುಮೋದನೆ ನೀಡಿದ್ದ ಸಹಿದಾರರಲ್ಲಿ ಅನಿಲ್ ಮಿಶ್ರಾ ಅವರೂ ಒಬ್ಬರಾಗಿದ್ದರು.
ನೈತಿಕ ಹೊಣೆ ಹೊತ್ತು ರಾಜೀನಾಮೆ
ಹಗರಣದ ತೀವ್ರತೆ ಹೆಚ್ಚುತ್ತಿದ್ದಂತೆ, ಕೆಲವೇ ದಿನಗಳ ಹಿಂದೆಯಷ್ಟೇ ಟ್ರಸ್ಟ್ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮತ್ತು ಟ್ರಸ್ಟಿ ಅನಿಲ್ ಮಿಶ್ರಾ ತಮ್ಮ ಸ್ಥಾನಗಳಿಗೆ ರಾಜೀನಾಮೆ ನೀಡಿದ್ದರು. ತನಿಖೆಗೆ ಯಾವುದೇ ಅಡ್ಡಿಯಾಗಬಾರದು ಎಂಬ ಕಾರಣಕ್ಕೆ "ನೈತಿಕ ಹೊಣೆ" ಹೊತ್ತು ರಾಜೀನಾಮೆ ನೀಡುವುದಾಗಿ ಅವರು ತಿಳಿಸಿದ್ದರೂ, ತಮಗೂ ಹಗರಣಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಸ್ಪಷ್ಟಪಡಿಸಿದ್ದರು. ಆದಾಗ್ಯೂ, ಈಗ ಬಂಧಿತ ಆರೋಪಿಗಳೇ ನೇರವಾಗಿ ಮಿಶ್ರಾ ಅವರ ಹೆಸರನ್ನು ಉಲ್ಲೇಖಿಸಿದ್ದು ಅವರ ಸುತ್ತ ಕಾನೂನು ಉರುಳು ಬಿಗಿಯಾಗಿದೆ.
ಆರೋಪಿಗಳ ಹೇಳಿಕೆಯ ಬೆನ್ನಲ್ಲೇ ಅಯೋಧ್ಯೆ ಪೊಲೀಸರು ಮತ್ತು ಎಸ್ಐಟಿ ಅಧಿಕಾರಿಗಳು ಟ್ರಸ್ಟ್ನ ಉನ್ನತ ಮಟ್ಟದ ಪದಾಧಿಕಾರಿಗಳ ಆರ್ಥಿಕ ವ್ಯವಹಾರಗಳು ಮತ್ತು ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ. ಇದೇ ವೇಳೆ, ಸಾರ್ವಜನಿಕರ ಧಾರ್ಮಿಕ ಭಾವನೆಗಳೊಂದಿಗೆ ಆಟವಾಡಿದವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದು ಉತ್ತರ ಪ್ರದೇಶ ಸರ್ಕಾರ ತಿಳಿಸಿದೆ. ಮತ್ತೊಂದೆಡೆ, ಉನ್ನತ ಮಟ್ಟದ ರಾಜಕೀಯ ಮತ್ತು ಆಡಳಿತಾತ್ಮಕ ವ್ಯಕ್ತಿಗಳು ಇದರಲ್ಲಿ ಭಾಗಿಯಾಗಿರುವುದರಿಂದ ಪ್ರಕರಣದ ನ್ಯಾಯಾಂಗ ತನಿಖೆಯಾಗಬೇಕು ಎಂದು ವಿರೋಧ ಪಕ್ಷಗಳು ಒತ್ತಾಯಿಸಿವೆ.
ಹುಂಡಿ ಹಣ ಎಣಿಕೆ ಮತ್ತಿತರ ಕೆಲಸಕ್ಕಾಗಿ ತೀರ್ಥಕ್ಷೇತ್ರ ಟ್ರಸ್ಟ್ 125 ಮಂದಿಯನ್ನು ನೇಮಕ ಮಾಡಿತ್ತು. ಈ ಪೈಕಿ ಬಹುತೇಕರು ಟ್ರಸ್ಟಿ ಅನಿಲ್ ಮಿಶ್ರಾ ಸಂಬಂಧಿಕರು ಮತ್ತು ಆಪ್ತರೇ ಆಗಿದ್ದಾರೆ. ಇದಲ್ಲದೆ, ಹಣಕಾಸು ನಿರ್ವಹಣೆಯಲ್ಲಿ ಲೋಪ ಆಗಿರುವ ಬಗ್ಗೆ ಬ್ಯಾಂಕ್ ಅಧಿಕಾರಿಗಳು ಈ ಹಿಂದೆಯೇ ಅನಿಲ್ ಮಿಶ್ರಾ ಮತ್ತು ಟ್ರಸ್ಟ್ ಗಮನಕ್ಕೆ ತಂದಿದ್ದರು. ಆದರೆ ಮಿಶ್ರಾ ಈ ವಿಚಾರವನ್ನು ಗೌಪ್ಯವಾಗಿರಿಸಿ ಮರೆಮಾಚಿಸಿದ್ದರು. ತನ್ನದೇ ಉದ್ಯೋಗಿಗಳ ಮೂಲಕ ಅನಿಲ್ ಮಿಶ್ರಾ ಭಾರೀ ಕಿಕ್ ಬ್ಯಾಕ್ ಪಡೆದಿರುವ ಶಂಕೆಯಿದ್ದು ಎರಡು ವರ್ಷಗಳಲ್ಲಿ ಅವರ ಆಸ್ತಿ ಅಪರಿಮಿತವಾಗಿ ಹೆಚ್ಚಿರುವುದನ್ನು ಎಸ್ಐಟಿ ಪತ್ತೆಹಚ್ಚಿದೆ. ಹೀಗಾಗಿ ಒಟ್ಟು ಹಗರಣದ ಮಾಸ್ಟರ್ ಮೈಂಡ್ ಅನಿಲ್ ಮಿಶ್ರಾ ಎಂಬ ಮಾತು ಕೇಳಿಬಂದಿದ್ದು ಯಾವುದೇ ಕ್ಷಣದಲ್ಲಿ ಬಂಧನವಾಗುವ ಸಾಧ್ಯತೆಯಿದೆ.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
23-08-26 06:17 pm
HK News Staffer
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
24-08-26 11:05 am
HK News Staffer
ಹೊಳೆನರಸೀಪುರ ; ಟ್ರ್ಯಾಕ್ಟರ್ ಕೀಯನ್ನು ತಿರುಗಿಸಿದ ಮ...
23-08-26 05:20 pm
ಹೆತ್ತವರನ್ನು ಕೊಲ್ತೇನೆಂದು ಹೇಳಿ ಒಂಬತ್ತನೇ ಕ್ಲಾಸ್...
22-08-26 12:43 pm
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am