ಬ್ರೇಕಿಂಗ್ ನ್ಯೂಸ್
03-07-26 09:40 pm HK News Staffer ದೇಶ - ವಿದೇಶ
ನವದೆಹಲಿ, ಜುಲೈ 3: ರಷ್ಯಾದಿಂದ ಕಡಿಮೆ ಬೆಲೆಗೆ ಕಚ್ಚಾ ತೈಲವನ್ನು ಆಮದು ಮಾಡಿಕೊಳ್ಳುವ ಭಾರತದ ರಿಫೈನರಿಗಳು, ಅವನ್ನು ಸಂಸ್ಕರಿಸಿ ಮತ್ತೆ ರಷ್ಯಾಕ್ಕೆ ಪೆಟ್ರೋಲ್ ರಫ್ತು ಮಾಡುತ್ತಿರುವ ವಿಚಾರ ಈಗ ಚರ್ಚೆಗೆ ಗ್ರಾಸವಾಗಿವೆ. ಇದು ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿದ್ದು, "ರಷ್ಯಾದಿಂದ ತೈಲ ತಂದು ಮತ್ತೆ ರಷ್ಯಾಕ್ಕೇ ಪೆಟ್ರೋಲ್ ಮಾರಾಟ ಮಾಡಲಾಗುತ್ತಿದೆಯೇ?" ಎಂಬ ಕುತೂಹಲ ಮೂಡಿಸಿದೆ.
ಆದರೆ ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವ ಹರ್ದೀಪ್ ಸಿಂಗ್ ಪುರಿ, ಭಾರತದ ಯಾವುದೇ ಸರ್ಕಾರಿ ಅಥವಾ ಖಾಸಗಿ ತೈಲ ಸಂಸ್ಕರಣಾ ಕಂಪನಿಗಳು (ರಿಫೈನರಿಗಳು) ನೇರವಾಗಿ ರಷ್ಯಾಕ್ಕೆ ಪೆಟ್ರೋಲ್ ಮಾರಾಟ ಮಾಡುತ್ತಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಆದರೆ ಕೆಲವು ಅಂತರಾಷ್ಟ್ರೀಯ ಮಾಧ್ಯಮ ವರದಿಗಳಲ್ಲಿ, ಉಕ್ರೇನ್ ದಾಳಿಯಿಂದಾಗಿ ರಷ್ಯಾದ ತೈಲ ಸಂಸ್ಕರಣಾ ಘಟಕಗಳಿಗೆ ಹಾನಿಯಾಗಿದ್ದು ಅಲ್ಲಿನ ದೇಶೀಯ ಬೇಡಿಕೆ ಪೂರೈಸಲು ಭಾರತದಿಂದ ಸಮುದ್ರ ಮಾರ್ಗದ ಮೂಲಕ ಪೆಟ್ರೋಲ್ ಖರೀದಿಸಲಾಗಿದೆ ಎಂದು ಹೇಳಲಾಗಿದೆ. ಸುಮಾರು 60,000 ಮೆಟ್ರಿಕ್ ಟನ್ ಪೆಟ್ರೋಲ್ ರವಾನೆಯಾಗಿದ್ದು, ಇನ್ನೂ ಎರಡು ಟ್ಯಾಂಕರ್ಗಳಲ್ಲಿ ತಲಾ 30ರಿಂದ 40 ಸಾವಿರ ಟನ್ ಪೆಟ್ರೋಲ್ ಕಳುಹಿಸಲಾಗಿದೆ ಎಂಬ ಮಾಹಿತಿಗಳಿವೆ.
ಈ ಕುರಿತು ಪ್ರತಿಕ್ರಿಯಿಸಿದ ಹರ್ದೀಪ್ ಸಿಂಗ್ ಪುರಿ, "ಭಾರತದ ಯಾವುದೇ ರಿಫೈನರಿ ರಷ್ಯಾಕ್ಕೆ ನೇರವಾಗಿ ಪೆಟ್ರೋಲ್ ರಫ್ತು ಮಾಡುತ್ತಿಲ್ಲ. ಭಾರತೀಯ ಮೂಲದ ಇಂಧನ ರಷ್ಯಾಕ್ಕೆ ತಲುಪಿದ್ದರೆ, ಅದು ಮಧ್ಯವರ್ತಿಗಳ ಮೂಲಕ ಕೈ ಬದಲಾಗಿ ಅಂತಿಮವಾಗಿ ತಲುಪಿರಬಹುದು" ಎಂದು ಹೇಳಿದ್ದಾರೆ. ಕಚ್ಚಾ ತೈಲ ಮತ್ತು ಸಂಸ್ಕರಿಸಿದ ಪೆಟ್ರೋಲಿಯಂ ಉತ್ಪನ್ನಗಳು ಜಾಗತಿಕ ಮಾರುಕಟ್ಟೆಯಲ್ಲಿ ಮಧ್ಯವರ್ತಿಗಳ ಒಂದು ರಾಷ್ಟ್ರದಿಂದ ಪಡೆದು ಇನ್ನೊಂದು ಕಡೆಗೆ ಮಾರಾಟ ಮಾಡುವುದು ಸಹಜ ಪ್ರಕ್ರಿಯೆ. ಉತ್ಪನ್ನದ ಮೂಲ ದೇಶ ಮತ್ತು ಖರೀದಿಸುವ ದೇಶದ ನಡುವೆ ನೇರ ವ್ಯವಹಾರ ಇರಲೇಬೇಕೆಂದಿಲ್ಲ ಎಂದು ತಿಳಿಸಿದ್ದಾರೆ.
ಇದೇ ವೇಳೆ ಭಾರತದಲ್ಲಿ ತೈಲ ದರ ಕಡಿಮೆಗೊಳಿಸುವ ಕುರಿತಾಗಿ ಮಾತನಾಡಿದ ಅವರು, ಅಂತರಾಷ್ಟ್ರೀಯ ಕಚ್ಚಾ ತೈಲದ ಬೆಲೆ ಇದೇ ಮಟ್ಟದಲ್ಲಿ ಕೆಲವು ತಿಂಗಳ ವರೆಗೆ ಸ್ಥಿರವಾಗಿದ್ದರೆ, ಭಾರತದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಇಳಿಕೆ ಮಾಡುವ ಬಗ್ಗೆ ಸರ್ಕಾರ ಹಾಗೂ ತೈಲ ಕಂಪನಿಗಳು ಪರಿಶೀಲನೆ ನಡೆಸಬಹುದು ಎಂದು ಹೇಳಿದ್ದಾರೆ.
03-07-26 01:21 pm
HK News Staffer
ರಾಮನಗರದಲ್ಲಿ 10 ಸಾವಿರಕ್ಕೂ ಹೆಚ್ಚು ಬಾಂಗ್ಲಾ ಪ್ರಜೆ...
02-07-26 09:19 pm
ಆರ್ಎಸ್ಎಸ್ಗೆ ಬರುವ ಪ್ರತಿ ರೂಪಾಯಿಗೂ ಲೆಕ್ಕವಿದೆ,...
02-07-26 09:18 pm
ಬಿಜೆಪಿಯವರು ದೇವಸ್ಥಾನಗಳ ಮುಂದೆ ಹುಂಡಿ ಹಣ ಕಳ್ಳರಿದ್...
01-07-26 09:49 pm
ದನ ಕೊಂದವರು ಜೈಲಿಗೆ, ಮನುಷ್ಯರನ್ನು ಕೊಂದವರು ಪ್ರಧಾನ...
29-06-26 10:33 pm
03-07-26 09:40 pm
HK News Staffer
ಲಾಡ್ಲೆ ಮಶಾಕ್ ದರ್ಗಾ ಗಲಭೆ ಪ್ರಕರಣ ಸೇರಿ 52 ಕ್ರಿಮಿ...
02-07-26 03:37 pm
ಹಿಂದು ವಿವಾಹಕ್ಕೆ ನೋಂದಣಿಯಷ್ಟೇ ಸಾಲದು, ಸಪ್ತಪದಿ ಇನ...
02-07-26 01:56 pm
ಅಯೋಧ್ಯೆ ರಾಮ ಮಂದಿರ ದೇಣಿಗೆ ಹಗರಣ; ಟ್ರಸ್ಟಿ ಅನಿಲ್...
02-07-26 01:42 pm
1990ರ ಕಾಶ್ಮೀರಿ ಪಂಡಿತರ ನರಮೇಧ ; ನರ್ಸ್ ಸರಳಾ ಭಟ್...
30-06-26 08:06 pm
03-07-26 10:17 pm
HK News Staffer
ಕೆರೆಬೈಲ್ ಎಸ್ಟೇಟ್ ಆವರಣ ಗೋಡೆ ಕುಸಿದು ಅವಾಂತರ ; ಸ...
02-07-26 10:53 pm
ಆರೆಂಜ್ ಅಲರ್ಟ್ ಸೂಚನೆ ; ದಕ್ಷಿಣ ಕನ್ನಡ ಜಿಲ್ಲೆಯಲ್ಲ...
02-07-26 10:11 pm
ಮಂಜನಾಡಿ ಮನೆ ಕುಸಿತ ದುರಂತ ; ಎರಡೂ ಕಾಲುಗಳನ್ನು ಕಳಕ...
01-07-26 10:37 pm
ಭಾರಿ ಮಳೆ ; ಜುಲೈ 2 ದಕ್ಷಿಣ ಕನ್ನಡ ಶಾಲೆ - ಕಾಲೇಜಿಗ...
01-07-26 09:58 pm
03-07-26 07:45 pm
HK News Staffer
ಮುಸ್ಲಿಂ ಧರ್ಮಗುರುಗಳಿಗೆ ನಿಂದನೆ ; ಪುನೀತ್ ಕೆರೆಹಳ್...
03-07-26 06:59 pm
ಇನ್ಸ್ಟಾ ಗ್ರಾಮ್ ಸ್ಟಾರ್ ಧನ್ಯಾ ಕುಂಬಳೆ ಹೆದ್ದಾರಿ...
03-07-26 04:22 pm
ಬೆಂಗಳೂರಿನಲ್ಲಿ ಡೇಂಜರ್ ಡೇ ಕೇರ್ ; ಪುಟ್ಟ ಮಕ್ಕಳನ್ನ...
03-07-26 02:41 pm
ಮಂಗಳೂರು ಜೈಲಿಗೆ ಹೊರಗಿನಿಂದ ಗಾಂಜಾ ಪೊಟ್ಟಣ ಎಸೆದ ವ್...
03-07-26 12:25 pm