ಬ್ರೇಕಿಂಗ್ ನ್ಯೂಸ್
03-07-26 09:40 pm HK News Staffer ದೇಶ - ವಿದೇಶ
ನವದೆಹಲಿ, ಜುಲೈ 3: ರಷ್ಯಾದಿಂದ ಕಡಿಮೆ ಬೆಲೆಗೆ ಕಚ್ಚಾ ತೈಲವನ್ನು ಆಮದು ಮಾಡಿಕೊಳ್ಳುವ ಭಾರತದ ರಿಫೈನರಿಗಳು, ಅವನ್ನು ಸಂಸ್ಕರಿಸಿ ಮತ್ತೆ ರಷ್ಯಾಕ್ಕೆ ಪೆಟ್ರೋಲ್ ರಫ್ತು ಮಾಡುತ್ತಿರುವ ವಿಚಾರ ಈಗ ಚರ್ಚೆಗೆ ಗ್ರಾಸವಾಗಿವೆ. ಇದು ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿದ್ದು, "ರಷ್ಯಾದಿಂದ ತೈಲ ತಂದು ಮತ್ತೆ ರಷ್ಯಾಕ್ಕೇ ಪೆಟ್ರೋಲ್ ಮಾರಾಟ ಮಾಡಲಾಗುತ್ತಿದೆಯೇ?" ಎಂಬ ಕುತೂಹಲ ಮೂಡಿಸಿದೆ.
ಆದರೆ ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವ ಹರ್ದೀಪ್ ಸಿಂಗ್ ಪುರಿ, ಭಾರತದ ಯಾವುದೇ ಸರ್ಕಾರಿ ಅಥವಾ ಖಾಸಗಿ ತೈಲ ಸಂಸ್ಕರಣಾ ಕಂಪನಿಗಳು (ರಿಫೈನರಿಗಳು) ನೇರವಾಗಿ ರಷ್ಯಾಕ್ಕೆ ಪೆಟ್ರೋಲ್ ಮಾರಾಟ ಮಾಡುತ್ತಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಆದರೆ ಕೆಲವು ಅಂತರಾಷ್ಟ್ರೀಯ ಮಾಧ್ಯಮ ವರದಿಗಳಲ್ಲಿ, ಉಕ್ರೇನ್ ದಾಳಿಯಿಂದಾಗಿ ರಷ್ಯಾದ ತೈಲ ಸಂಸ್ಕರಣಾ ಘಟಕಗಳಿಗೆ ಹಾನಿಯಾಗಿದ್ದು ಅಲ್ಲಿನ ದೇಶೀಯ ಬೇಡಿಕೆ ಪೂರೈಸಲು ಭಾರತದಿಂದ ಸಮುದ್ರ ಮಾರ್ಗದ ಮೂಲಕ ಪೆಟ್ರೋಲ್ ಖರೀದಿಸಲಾಗಿದೆ ಎಂದು ಹೇಳಲಾಗಿದೆ. ಸುಮಾರು 60,000 ಮೆಟ್ರಿಕ್ ಟನ್ ಪೆಟ್ರೋಲ್ ರವಾನೆಯಾಗಿದ್ದು, ಇನ್ನೂ ಎರಡು ಟ್ಯಾಂಕರ್ಗಳಲ್ಲಿ ತಲಾ 30ರಿಂದ 40 ಸಾವಿರ ಟನ್ ಪೆಟ್ರೋಲ್ ಕಳುಹಿಸಲಾಗಿದೆ ಎಂಬ ಮಾಹಿತಿಗಳಿವೆ.
ಈ ಕುರಿತು ಪ್ರತಿಕ್ರಿಯಿಸಿದ ಹರ್ದೀಪ್ ಸಿಂಗ್ ಪುರಿ, "ಭಾರತದ ಯಾವುದೇ ರಿಫೈನರಿ ರಷ್ಯಾಕ್ಕೆ ನೇರವಾಗಿ ಪೆಟ್ರೋಲ್ ರಫ್ತು ಮಾಡುತ್ತಿಲ್ಲ. ಭಾರತೀಯ ಮೂಲದ ಇಂಧನ ರಷ್ಯಾಕ್ಕೆ ತಲುಪಿದ್ದರೆ, ಅದು ಮಧ್ಯವರ್ತಿಗಳ ಮೂಲಕ ಕೈ ಬದಲಾಗಿ ಅಂತಿಮವಾಗಿ ತಲುಪಿರಬಹುದು" ಎಂದು ಹೇಳಿದ್ದಾರೆ. ಕಚ್ಚಾ ತೈಲ ಮತ್ತು ಸಂಸ್ಕರಿಸಿದ ಪೆಟ್ರೋಲಿಯಂ ಉತ್ಪನ್ನಗಳು ಜಾಗತಿಕ ಮಾರುಕಟ್ಟೆಯಲ್ಲಿ ಮಧ್ಯವರ್ತಿಗಳ ಒಂದು ರಾಷ್ಟ್ರದಿಂದ ಪಡೆದು ಇನ್ನೊಂದು ಕಡೆಗೆ ಮಾರಾಟ ಮಾಡುವುದು ಸಹಜ ಪ್ರಕ್ರಿಯೆ. ಉತ್ಪನ್ನದ ಮೂಲ ದೇಶ ಮತ್ತು ಖರೀದಿಸುವ ದೇಶದ ನಡುವೆ ನೇರ ವ್ಯವಹಾರ ಇರಲೇಬೇಕೆಂದಿಲ್ಲ ಎಂದು ತಿಳಿಸಿದ್ದಾರೆ.
ಇದೇ ವೇಳೆ ಭಾರತದಲ್ಲಿ ತೈಲ ದರ ಕಡಿಮೆಗೊಳಿಸುವ ಕುರಿತಾಗಿ ಮಾತನಾಡಿದ ಅವರು, ಅಂತರಾಷ್ಟ್ರೀಯ ಕಚ್ಚಾ ತೈಲದ ಬೆಲೆ ಇದೇ ಮಟ್ಟದಲ್ಲಿ ಕೆಲವು ತಿಂಗಳ ವರೆಗೆ ಸ್ಥಿರವಾಗಿದ್ದರೆ, ಭಾರತದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಇಳಿಕೆ ಮಾಡುವ ಬಗ್ಗೆ ಸರ್ಕಾರ ಹಾಗೂ ತೈಲ ಕಂಪನಿಗಳು ಪರಿಶೀಲನೆ ನಡೆಸಬಹುದು ಎಂದು ಹೇಳಿದ್ದಾರೆ.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
25-07-26 07:34 pm
HK News Staffer
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
ಮತ್ತೆ ಪ್ರತಿಭಟನೆಗೆ ಬಂದ್ರೆ ಜೇಬಿನಲ್ಲಿ 50 ಗ್ರಾಂ ಡ...
23-07-26 06:26 pm
25-07-26 07:32 pm
HK News Staffer
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
ನೀಟ್ ಪರೀಕ್ಷೆ ; ಮಂಗಳೂರಿನಲ್ಲೂ ಮೊಳಗಿದ ವಿದ್ಯಾರ್ಥಿ...
24-07-26 10:37 pm
Surathkal Brdige, Thokottu, Mangalore: ಸುರತ್ಕ...
23-07-26 10:27 pm
25-07-26 07:36 pm
HK News Staffer
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm
Astra Group Fraud, Lanchu Lal, Mangalore: ‘ಅಸ...
24-07-26 05:30 pm