ಬ್ರೇಕಿಂಗ್ ನ್ಯೂಸ್
09-07-26 03:40 pm HK News Staffer ದೇಶ - ವಿದೇಶ
ಟೆಹ್ರಾನ್, ಜುಲೈ 9: ಅಮೆರಿಕ ಮತ್ತು ಇರಾನ್ ನಡುವಿನ ಸಂಘರ್ಷ ಮತ್ತೆ ತಾರಕಕ್ಕೇರಿದ್ದು, ಜೂನ್ 17 ರಂದು ಮಾಡಿಕೊಂಡಿದ್ದ ಕದನ ವಿರಾಮ ಒಪ್ಪಂದ ಮುರಿದು ಬಿದ್ದಿದೆ. ಇರಾನ್ ತನ್ನ ಮಾತು ಕೇಳುತ್ತಿಲ್ಲ ಎಂದು ಅಮೆರಿಕದ ಪಡೆಗಳು ಮತ್ತೆ ವೈಮಾನಿಕ ದಾಳಿ ನಡೆಸಲಾರಂಭಿಸಿದೆ. ಇದಕ್ಕೆದುರಾಗಿ ಇರಾನ್ ಪಡೆಗಳು ಬಹ್ರೇನ್, ಕುವೈತ್ ಹಾಗೂ ಕತಾರ್ನಲ್ಲಿರುವ ಅಮೆರಿಕದ ಸೇನಾನೆಲೆ ಗುರಿಯಾಗಿಸಿ ಕ್ಷಿಪಣಿಗಳನ್ನು ಉಡಾಯಿಸಿದೆ.
ಹಾರ್ಮುಜ್ ಜಲಸಂಧಿಯಲ್ಲಿ ಹಡಗುಗಳ ಮೇಲೆ ಇರಾನ್ ದಾಳಿ ನಡೆಸಿದ್ದಕ್ಕೆ ಪ್ರತಿಯಾಗಿ ಅಮೆರಿಕದ ಪಡೆಗಳು ವೈಮಾನಿಕ ದಾಳಿಗೆ ಮುಂದಾಗಿದ್ದವು. ಇದರ ಬೆನ್ನಲ್ಲೇ ಡೊನಾಲ್ಡ್ ಟ್ರಂಪ್, ತಾತ್ಕಾಲಿಕ ಕದನ ವಿರಾಮ ಮುಕ್ತಾಯವಾಗಿದೆ ಎಂದು ಘೋಷಿಸಿದ್ದರು. ಅಮೆರಿಕ ಸೇನೆಯ ಪ್ರಕಾರ, ಹಾರ್ಮುಜ್ ಜಲಸಂಧಿಯಲ್ಲಿ ನೌಕಾಯಾನಕ್ಕೆ ಬೆದರಿಕೆ ಒಡ್ಡುವ ಇರಾನ್ ಸಾಮರ್ಥ್ಯವನ್ನು ಮತ್ತಷ್ಟು ಕುಗ್ಗಿಸುವ ಉದ್ದೇಶದಿಂದ ಈ ದಾಳಿಗಳನ್ನು ನಡೆಸಲಾಗಿದೆ. ವಿಶ್ವದ ಒಟ್ಟು ತೈಲ ಮತ್ತು ನೈಸರ್ಗಿಕ ಅನಿಲ ಸಾಗಣೆಯ ಸುಮಾರು 20 ಪ್ರತಿಶತ ಇದೇ ಜಲಸಂಧಿಯ ಮೂಲಕ ನಡೆಯುವುದರಿಂದ, ಈ ಪ್ರದೇಶದ ಉದ್ವಿಗ್ನತೆ ಜಾಗತಿಕ ಇಂಧನ ಮಾರುಕಟ್ಟೆ ಮೇಲೆ ನೇರ ಪರಿಣಾಮ ಬೀರುತ್ತದೆ.
ಈ ನಡುವೆ ಇರಾನ್ ಸರ್ಕಾರಿ ಮಾಧ್ಯಮಗಳು, ಬುಶೆಹರ್ ಸೇರಿದಂತೆ ಹಲವು ಪ್ರಮುಖ ಪ್ರದೇಶಗಳಲ್ಲಿ ಸ್ಫೋಟಗಳು ಸಂಭವಿಸಿವೆ. ಅಲ್ಲದೆ, ಪರಮಾಣು ವಿದ್ಯುತ್ ಸ್ಥಾವರ ಹೊಂದಿರುವ ಬುಶೆಹರ್ ನಗರ, ದಕ್ಷಿಣದ ಚಬಹಾರ್, ಕೊನಾರಕ್, ಬಂದರ್ ಅಬ್ಬಾಸ್ ಮತ್ತು ಸಿರಿಕ್ ಬಂದರು ನಗರಗಳಲ್ಲಿ ಸ್ಫೋಟ ಉಂಟಾಗಿದೆ ಎಂದು ತಿಳಿಸಿವೆ. ವಿವಿಧ ನಗರ ಪ್ರದೇಶಗಳ ಮೇಲಿನ ದಾಳಿಯಲ್ಲಿ ಇರಾನ್ ಕಡೆಯ 14 ಜನರು ಸಾವಿಗೀಡಾಗಿದ್ದು 78 ಜನರು ಗಾಯಗೊಂಡಿದ್ದಾರೆಂದು ಅಲ್ ಜಜೀರಾ ವರದಿ ಮಾಡಿದೆ.
ಇತ್ತ ಬಹ್ರೇನ್, ಕುವೈತ್ ಮತ್ತು ಕತಾರ್ ಕಡೆಗೆ ಇರಾನ್ ಉಡಾಯಿಸಿದ ಕ್ಷಿಪಣಿಗಳು ಹಾಗೂ ಡ್ರೋನ್ಗಳ ಪರಿಣಾಮದ ಕುರಿತು ಆರಂಭಿಕ ಮಾಹಿತಿ ಲಭ್ಯವಾಗಿಲ್ಲ. ಆದರೆ, ಕುವೈತ್ ಸೇನೆ ತನ್ನ ವಾಯು ರಕ್ಷಣಾ ವ್ಯವಸ್ಥೆಗಳನ್ನು ಸಕ್ರಿಯಗೊಳಿಸಿ, ಹಲವು ಡ್ರೋನ್ಗಳು ಮತ್ತು ಕ್ಷಿಪಣಿಗಳನ್ನು ಮಧ್ಯದಲ್ಲೇ ಹೊಡೆದುರುಳಿಸಲಾಗಿದೆ ಎಂದು ತಿಳಿಸಿದೆ.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm