ಬ್ರೇಕಿಂಗ್ ನ್ಯೂಸ್
09-07-26 03:40 pm HK News Staffer ದೇಶ - ವಿದೇಶ
ಟೆಹ್ರಾನ್, ಜುಲೈ 9: ಅಮೆರಿಕ ಮತ್ತು ಇರಾನ್ ನಡುವಿನ ಸಂಘರ್ಷ ಮತ್ತೆ ತಾರಕಕ್ಕೇರಿದ್ದು, ಜೂನ್ 17 ರಂದು ಮಾಡಿಕೊಂಡಿದ್ದ ಕದನ ವಿರಾಮ ಒಪ್ಪಂದ ಮುರಿದು ಬಿದ್ದಿದೆ. ಇರಾನ್ ತನ್ನ ಮಾತು ಕೇಳುತ್ತಿಲ್ಲ ಎಂದು ಅಮೆರಿಕದ ಪಡೆಗಳು ಮತ್ತೆ ವೈಮಾನಿಕ ದಾಳಿ ನಡೆಸಲಾರಂಭಿಸಿದೆ. ಇದಕ್ಕೆದುರಾಗಿ ಇರಾನ್ ಪಡೆಗಳು ಬಹ್ರೇನ್, ಕುವೈತ್ ಹಾಗೂ ಕತಾರ್ನಲ್ಲಿರುವ ಅಮೆರಿಕದ ಸೇನಾನೆಲೆ ಗುರಿಯಾಗಿಸಿ ಕ್ಷಿಪಣಿಗಳನ್ನು ಉಡಾಯಿಸಿದೆ.
ಹಾರ್ಮುಜ್ ಜಲಸಂಧಿಯಲ್ಲಿ ಹಡಗುಗಳ ಮೇಲೆ ಇರಾನ್ ದಾಳಿ ನಡೆಸಿದ್ದಕ್ಕೆ ಪ್ರತಿಯಾಗಿ ಅಮೆರಿಕದ ಪಡೆಗಳು ವೈಮಾನಿಕ ದಾಳಿಗೆ ಮುಂದಾಗಿದ್ದವು. ಇದರ ಬೆನ್ನಲ್ಲೇ ಡೊನಾಲ್ಡ್ ಟ್ರಂಪ್, ತಾತ್ಕಾಲಿಕ ಕದನ ವಿರಾಮ ಮುಕ್ತಾಯವಾಗಿದೆ ಎಂದು ಘೋಷಿಸಿದ್ದರು. ಅಮೆರಿಕ ಸೇನೆಯ ಪ್ರಕಾರ, ಹಾರ್ಮುಜ್ ಜಲಸಂಧಿಯಲ್ಲಿ ನೌಕಾಯಾನಕ್ಕೆ ಬೆದರಿಕೆ ಒಡ್ಡುವ ಇರಾನ್ ಸಾಮರ್ಥ್ಯವನ್ನು ಮತ್ತಷ್ಟು ಕುಗ್ಗಿಸುವ ಉದ್ದೇಶದಿಂದ ಈ ದಾಳಿಗಳನ್ನು ನಡೆಸಲಾಗಿದೆ. ವಿಶ್ವದ ಒಟ್ಟು ತೈಲ ಮತ್ತು ನೈಸರ್ಗಿಕ ಅನಿಲ ಸಾಗಣೆಯ ಸುಮಾರು 20 ಪ್ರತಿಶತ ಇದೇ ಜಲಸಂಧಿಯ ಮೂಲಕ ನಡೆಯುವುದರಿಂದ, ಈ ಪ್ರದೇಶದ ಉದ್ವಿಗ್ನತೆ ಜಾಗತಿಕ ಇಂಧನ ಮಾರುಕಟ್ಟೆ ಮೇಲೆ ನೇರ ಪರಿಣಾಮ ಬೀರುತ್ತದೆ.
ಈ ನಡುವೆ ಇರಾನ್ ಸರ್ಕಾರಿ ಮಾಧ್ಯಮಗಳು, ಬುಶೆಹರ್ ಸೇರಿದಂತೆ ಹಲವು ಪ್ರಮುಖ ಪ್ರದೇಶಗಳಲ್ಲಿ ಸ್ಫೋಟಗಳು ಸಂಭವಿಸಿವೆ. ಅಲ್ಲದೆ, ಪರಮಾಣು ವಿದ್ಯುತ್ ಸ್ಥಾವರ ಹೊಂದಿರುವ ಬುಶೆಹರ್ ನಗರ, ದಕ್ಷಿಣದ ಚಬಹಾರ್, ಕೊನಾರಕ್, ಬಂದರ್ ಅಬ್ಬಾಸ್ ಮತ್ತು ಸಿರಿಕ್ ಬಂದರು ನಗರಗಳಲ್ಲಿ ಸ್ಫೋಟ ಉಂಟಾಗಿದೆ ಎಂದು ತಿಳಿಸಿವೆ. ವಿವಿಧ ನಗರ ಪ್ರದೇಶಗಳ ಮೇಲಿನ ದಾಳಿಯಲ್ಲಿ ಇರಾನ್ ಕಡೆಯ 14 ಜನರು ಸಾವಿಗೀಡಾಗಿದ್ದು 78 ಜನರು ಗಾಯಗೊಂಡಿದ್ದಾರೆಂದು ಅಲ್ ಜಜೀರಾ ವರದಿ ಮಾಡಿದೆ.
ಇತ್ತ ಬಹ್ರೇನ್, ಕುವೈತ್ ಮತ್ತು ಕತಾರ್ ಕಡೆಗೆ ಇರಾನ್ ಉಡಾಯಿಸಿದ ಕ್ಷಿಪಣಿಗಳು ಹಾಗೂ ಡ್ರೋನ್ಗಳ ಪರಿಣಾಮದ ಕುರಿತು ಆರಂಭಿಕ ಮಾಹಿತಿ ಲಭ್ಯವಾಗಿಲ್ಲ. ಆದರೆ, ಕುವೈತ್ ಸೇನೆ ತನ್ನ ವಾಯು ರಕ್ಷಣಾ ವ್ಯವಸ್ಥೆಗಳನ್ನು ಸಕ್ರಿಯಗೊಳಿಸಿ, ಹಲವು ಡ್ರೋನ್ಗಳು ಮತ್ತು ಕ್ಷಿಪಣಿಗಳನ್ನು ಮಧ್ಯದಲ್ಲೇ ಹೊಡೆದುರುಳಿಸಲಾಗಿದೆ ಎಂದು ತಿಳಿಸಿದೆ.
13-08-26 08:09 pm
HK News Staffer
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
ಐಷಾರಾಮಿ ಹೊಟೇಲ್ ಬಳಿಕ ಸರ್ಕಾರಿ ಕಚೇರಿಗಳ ಕ್ಯಾಂಟೀನ್...
13-08-26 02:22 pm
ಸಚಿವ ಸ್ಥಾನ ಕೈತಪ್ಪಿದ ಮಂಕಾಳ ವೈದ್ಯಗೆ ವಿಧಾನಸಭೆ ಉಪ...
13-08-26 01:00 pm
ಕೊನೆಗೂ ಖಾತೆ ಫೈನಲ್ ; ಜಮೀರ್ ಡೌನ್ ಗ್ರೇಡ್, ಖಾದರ್...
12-08-26 06:57 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
12-08-26 11:06 pm
HK News Desk
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
Mangalore Railway, Train: ಕಾಲು ಜಾರಿ ರೈಲಿನಡಿ ಬ...
11-08-26 10:23 pm
ಮೂಡುಬಿದಿರೆಯಲ್ಲಿ ಸಿಲಿಂಡರ್ ಸ್ಫೋಟ ; ಆರು ವರ್ಷದ ಬಾ...
11-08-26 10:03 pm
13-08-26 04:29 pm
HK News Staffer
ನಿರ್ಮಾಣ ಹಂತದ ಕಟ್ಟಡದಿಂದ ಕೆಳಕ್ಕೆ ಬಿದ್ದ ವಲಸೆ ಕಾರ...
13-08-26 03:22 pm
ಮದುವೆ ನಿಶ್ಚಿತಾರ್ಥ ಆಗಿದ್ದ ಎಸ್ ಬಿಐ ಬ್ಯಾಂಕ್ ಉದ್ಯ...
13-08-26 01:17 pm
Mangalore crime, Arrest: ಕೈ ಕೋಳದಲ್ಲೇ ಪೊಲೀಸರನ್...
12-08-26 11:18 pm
Panambur Robbery, Update, Mangalore: ಪಣಂಬೂರು...
12-08-26 07:47 pm