ಬ್ರೇಕಿಂಗ್ ನ್ಯೂಸ್
11-07-26 11:48 am HK News Staffer ದೇಶ - ವಿದೇಶ
ಲಕ್ನೋ, ಜುಲೈ 11: ರಾಮ ಮಂದಿರದ ದೇಣಿಗೆ ಕಳ್ಳತನದ ಒಂದು ಭಾಗವನ್ನು ಆರೋಪಿಗಳು ಷೇರು ಮಾರುಕಟ್ಟೆ ಹಾಗೂ ಇತರ ಕಡೆಗಳಲ್ಲಿ ಹೂಡಿಕೆ ಮಾಡಿರುವುದು ಎಸ್ಐಟಿ ತನಿಖೆಯಲ್ಲಿ ಬೆಳಕಿಗೆ ಬಂದಿದೆ. ಹಣದ ಮೂಲವನ್ನು ಮರೆ ಮಾಚುವುದಕ್ಕಾಗಿ ಸಂಬಂಧಿಕರು, ಆಪ್ತರ ಹೆಸರಲ್ಲಿ ಹೂಡಿಕೆ ಮಾಡಿದ್ದರು. ಪೊಲೀಸರು ಆರೋಪಿಗಳು ಮತ್ತು ಅವರ ಸಂಬಂಧಿಕರಿಗೆ ಸೇರಿದ 30ಕ್ಕೂ ಹೆಚ್ಚು ಖಾತೆಗಳನ್ನು ಜಪ್ತಿ ಮಾಡಿದ್ದಾರೆ.
ಅಯೋಧ್ಯೆ ಪೊಲೀಸರು ಆರೋಪಿಗಳ ಮನೆಗಳಲ್ಲಿ ಶೋಧ ನಡೆಸಿದ್ದು, ಅವರ ಬ್ಯಾಂಕ್ ಖಾತೆಗಳನ್ನು ಸ್ಥಗಿತಗೊಳಿಸಿದ್ದಾರೆ. ಆರೋಪಿ ಅನುಕಲ್ಪ್ ಮಿಶ್ರಾನನ್ನು ಆತನ ಮನೆಗೆ ಕರೆದೊಯ್ದು ಶೋಧ ನಡೆಸಿ, ಕುಟುಂಬ ಸದಸ್ಯರನ್ನು ವಿಚಾರಣೆ ನಡೆಸಿದರು. ವಿಚಾರಣೆ ವೇಳೆ, ಇನ್ನೊಬ್ಬ ಆರೋಪಿ ಅವಿನಾಶ್ ಶುಕ್ಲಾ ಜೊತೆಗೆ ಕಳವಾದ ದೇಣಿಗೆ ಹಣವನ್ನು ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿದ್ದಾಗಿ ಪೊಲೀಸರಿಗೆ ತಿಳಿಸಿದ್ದಾನೆ. ಅಲ್ಲದೆ, ಬಡ್ಡಿಗೆ ಹಣ ನೀಡುವುದರ ಜೊತೆಗೆ, ಸಂಬಂಧಿಕರು ಹಾಗೂ ಆಪ್ತರ ಬ್ಯಾಂಕ್ ಖಾತೆಗಳಿಗೆ ಹಣ ವರ್ಗಾಯಿಸಿ, ಬಳಿಕ ಅದನ್ನು ತಮ್ಮ ಖಾತೆಗಳಿಗೆ ಮರಳಿ ವರ್ಗಾಯಿಸುತ್ತಿದ್ದರು ಎಂದು ತಪ್ಪೊಪ್ಪಿಕೊಂಡಿದ್ದಾನೆ.
ಆರೋಪಿಗಳಾದ ಲವ್ಕುಶ್ ಮಿಶ್ರಾ ಹಾಗೂ ಕರುಣೇಶ್ ಪಾಂಡೆ ಅವರನ್ನು ಸಹ ಅವರ ಮನೆಗಳಿಗೆ ಕರೆದೊಯ್ದು ಶೋಧ ನಡೆಸಿದ್ದಾರೆ. ಮೂವರು ಆರೋಪಿಗಳನ್ನೂ 40 ಗಂಟೆಗಳ ಪೊಲೀಸ್ ಕಸ್ಟಡಿಗೆ ಒಪ್ಪಿಸಲಾಗಿತ್ತು. ಅವರ ಕುಟುಂಬ ಸದಸ್ಯರನ್ನೂ ವಿಚಾರಣೆ ನಡೆಸಿದ್ದು, ದಾಖಲೆಗಳನ್ನು ಪರಿಶೀಲಿಸಿದ್ದಾರೆ. ಹಣದ ಜಾಡು ಪತ್ತೆಹಚ್ಚಲು ನೆರವಾಗುವ ಇಲೆಕ್ಟ್ರಾನಿಕ್ ಸಾಧನಗಳು, ಹೂಡಿಕೆ ದಾಖಲೆಗಳು ಹಾಗೂ ಇತರ ಹಣಕಾಸು ಸಂಬಂಧಿತ ಸಾಕ್ಷ್ಯಗಳನ್ನು ಶೋಧಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ಆರೋಪಿಗಳು ಹಾಗೂ ಅವರ ಸಂಬಂಧಿಕರ ಹೆಸರಿನ 30ಕ್ಕೂ ಹೆಚ್ಚು ಬ್ಯಾಂಕ್ ಖಾತೆಗಳಲ್ಲಿ ಘೋಷಿತ ಆದಾಯಕ್ಕೆ ಹೊಂದಿಕೆಯಾಗದ ವಹಿವಾಟುಗಳು ಪತ್ತೆಯಾಗಿದ್ದು ಅವುಗಳನ್ನು ಸ್ಥಗಿತಗೊಳಿಸಲಾಗಿದೆ. ಆರೋಪಿಗಳ ಬಳಿಯಿಂದ ನಕಲಿ ದೇಣಿಗೆ ರಸೀದಿಗಳನ್ನೂ ಪೊಲೀಸರು ವಶಪಡಿಸಿದ್ದಾರೆ. ಅಲ್ಲದೆ, ಆರೋಪಿಗಳ ಬ್ಯಾಂಕ್ ವಹಿವಾಟುಗಳನ್ನು ಷೇರು ಮಾರುಕಟ್ಟೆ ಹೂಡಿಕೆಗಳು, ಆಸ್ತಿ ಖರೀದಿಗಳು ಹಾಗೂ ವಶಪಡಿಸಿಕೊಂಡ ನಗದುಗಳೊಂದಿಗೆ ಹೋಲಿಕೆ ಮಾಡಿ ಪರಿಶೀಲಿಸುತ್ತಿದ್ದಾರೆ.
ಆರೋಪಿಗಳು ದೇವಸ್ಥಾನದ ದೇಣಿಗೆ ಎಣಿಕೆ ವ್ಯವಸ್ಥೆಯಲ್ಲಿದ್ದ ಲೋಪಗಳನ್ನು ದುರುಪಯೋಗಪಡಿಸಿದ್ದರು. ಕಾಣಿಕೆ ಕಳವು ಪತ್ತೆಯಾಗದಂತೆ ನೋಡಿಕೊಳ್ಳಲು ಎಣಿಕೆ ವೇಳೆ ಸಣ್ಣ ಪ್ರಮಾಣದಲ್ಲಿ ನಗದು ಹಣವನ್ನು ತೆಗೆಯುತ್ತಿದ್ದರು. ಹಣವನ್ನು ತಕ್ಷಣವೇ ಖರ್ಚು ಮಾಡುವ ಬದಲು, ಅದನ್ನು ಹಣಕಾಸು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿ ಲಾಭ ಗಳಿಸುವ ಎಚ್ಚರಿಕೆಯ ವಿಧಾನವನ್ನು ಆರೋಪಿಗಳು ಅನುಸರಿಸಿದ್ದರು ಎಂದು ತನಿಖಾಧಿಕಾರಿಗಳು ಅಂದಾಜಿಸಿದ್ದಾರೆ.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm