ಬ್ರೇಕಿಂಗ್ ನ್ಯೂಸ್
11-07-26 04:31 pm HK News Staffer ದೇಶ - ವಿದೇಶ
ನವದೆಹಲಿ, ಜುಲೈ 11: ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್ದ ಬೋಟ್ ಸಮುದ್ರದಲ್ಲಿ ಮುಳುಗಡೆಯಾಗಿದ್ದು, 15 ಮಂದಿ ಮೃತಪಟ್ಟ ಘಟನೆ ನಡೆದಿದೆ.
ಜುಲೈ 11ರ ಇಂದು ಮಧ್ಯಾಹ್ನ 1 ಗಂಟೆ ಸುಮಾರಿಗೆ ಫುಕೋ ದ್ವೀಪದ ಏರ್ಪೋರ್ಟ್ ಬಳಿಯಿಂದ 32 ಮಂದಿಯಿದ್ದ ಪ್ರವಾಸಿಗರನ್ನು ಬೋಟಿನಲ್ಲಿ ಇನ್ನೊಂದು ದ್ವೀಪದತ್ತ ಒಯ್ಯಲಾಗುತ್ತಿತ್ತು. ಈ ವೇಳೆ, ಸಮುದ್ರದ ಅಬ್ಬರ ಮತ್ತು ಭಾರೀ ಗಾಳಿಗೆ ಬೋಟ್ ಹಠಾತ್ ಪಲ್ಟಿಯಾಗಿ ಮುಳುಗಡೆಯಾಗಿದೆ. ಕೂಡಲೇ ರಕ್ಷಣಾ ತಂಡಗಳು ಧಾವಿಸಿದ್ದರೂ, ಹೆಚ್ಚಿನವರು ನೀರಿನಲ್ಲಿ ಮುಳುಗಿ ಅಸ್ವಸ್ಥರಾಗಿದ್ದಾರೆ.
ಬೋಟ್ ಮಗುಚಿ ಬಿದ್ದಿದ್ದರಿಂದ ಅದರಲ್ಲಿದ್ದ ಪ್ರವಾಸಿಗರು ನೀರಿನಲ್ಲಿ ಮುಳುಗಿದ್ದಾರೆ. ಹಲವರನ್ನು ಗಂಭೀರ ಸ್ಥಿತಿಯಲ್ಲಿ ರಕ್ಷಣೆ ಮಾಡಲಾಗಿದೆ. ಈ ವೇಳೆ, 15 ಮಂದಿಯಷ್ಟು ಪ್ರವಾಸಿಗರು ಮೃತಪಟ್ಟಿದ್ದಾರೆ ಎನ್ನಲಾಗಿದೆ. ಘಟನೆ ಸಂದರ್ಭದಲ್ಲಿ 4 ಮಂದಿ ಬೋಟ್ ಸಿಬಂದಿ ಇದ್ದರು. ದುರಂತದಲ್ಲಿ ಕೆಲವರಷ್ಟೇ ತೊಂದರೆಯಿಲ್ಲದೆ ಪಾರಾಗಿದ್ದಾರೆ. ಸ್ಥಳದಲ್ಲಿ ಮಳೆ ಇಲ್ಲದಿದ್ದರೂ, ಸಮುದ್ರದ ಅಬ್ಬರ ತೀವ್ರವಾಗಿತ್ತು. ಇತರೇ ಸ್ಪೀಡ್ ಬೋಟ್ ಗಳಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಸಲಾಗಿತ್ತು. ಸದ್ಯಕ್ಕೆ ಮೃತರಲ್ಲಿ ಎಲ್ಲಿಯವರು, ಯಾರು ಎನ್ನುವುದು ಗೊತ್ತಾಗಿಲ್ಲ. ಬೋಟಿನಲ್ಲಿ ಭಾರತೀಯರೇ ಹೆಚ್ಚಿದ್ದರು ಅನ್ನುವ ಮಾಹಿತಿ ಇದೆ.
ಫುಕೋ ದ್ವೀಪಕ್ಕೆ ಕಳೆದ ಆರು ತಿಂಗಳಲ್ಲಿ 5.7 ಮಿಲಿಯನ್ ಪ್ರವಾಸಿಗರು ಬಂದಿದ್ದು ದಾಖಲೆಯಾಗಿದೆ. ವಿಯೆಟ್ನಾಂ ದ್ಪೀಪ ರಾಷ್ಟ್ರಗಳಿಗೆ ಪ್ರವಾಸೋದ್ಯಮವೇ ಆಕರ್ಷಣೆಯಾಗಿದ್ದು ಜಗತ್ತಿನ ಬಹುತೇಕ ರಾಷ್ಟ್ರಗಳಿಂದ ಇಲ್ಲಿನ ದ್ವೀಪಗಳಿಗೆ ಜನರು ಪ್ರವಾಸ ಬರುತ್ತಾರೆ. ಕಳೆದ ವರ್ಷ ಜುಲೈ ತಿಂಗಳಲ್ಲೂ ವಿಯೆಟ್ನಾಂನಲ್ಲಿ ಬೋಟ್ ದುರಂತ ನಡೆದು 38 ಮಂದಿ ಸಾವನ್ನಪ್ಪಿದ್ದರು.
11-07-26 01:48 pm
HK News Staffer
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:12 pm
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
11-07-26 04:31 pm
HK News Staffer
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
11-07-26 04:26 pm
HK News Staffer
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
11-07-26 04:28 pm
HK News Staffer
ಮಾಜಿ ಸಾರಿಗೆ ಅಧಿಕಾರಿ ಮನೆಯಲ್ಲಿ ಕುಬೇರನ ಖಜಾನೆ ! ಗ...
10-07-26 10:14 pm
ಷೇರು ಮಾರ್ಕೆಟ್ ಹೆಸ್ರಲ್ಲಿ 10 ಲಕ್ಷ ರೂ. ವಂಚನೆ ; ಮ...
10-07-26 08:22 pm
ರಿವರ್ಸ್ ಮಾಡುವಾಗ ನಿಯಂತ್ರಣ ತಪ್ಪಿ ತೋಡಿಗೆ ಉರುಳಿ ಬ...
10-07-26 05:29 pm
ರೆಡ್ ಅಲರ್ಟ್; ರಜೆ ಆದೇಶ ಪಾಲಿಸದ ಹತ್ತಕ್ಕೂ ಹೆಚ್ಚು...
10-07-26 03:25 pm