ಬ್ರೇಕಿಂಗ್ ನ್ಯೂಸ್
11-07-26 04:31 pm HK News Staffer ದೇಶ - ವಿದೇಶ
ನವದೆಹಲಿ, ಜುಲೈ 11: ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್ದ ಬೋಟ್ ಸಮುದ್ರದಲ್ಲಿ ಮುಳುಗಡೆಯಾಗಿದ್ದು, 15 ಮಂದಿ ಮೃತಪಟ್ಟ ಘಟನೆ ನಡೆದಿದೆ.
ಜುಲೈ 11ರ ಇಂದು ಮಧ್ಯಾಹ್ನ 1 ಗಂಟೆ ಸುಮಾರಿಗೆ ಫುಕೋ ದ್ವೀಪದ ಏರ್ಪೋರ್ಟ್ ಬಳಿಯಿಂದ 32 ಮಂದಿಯಿದ್ದ ಪ್ರವಾಸಿಗರನ್ನು ಬೋಟಿನಲ್ಲಿ ಇನ್ನೊಂದು ದ್ವೀಪದತ್ತ ಒಯ್ಯಲಾಗುತ್ತಿತ್ತು. ಈ ವೇಳೆ, ಸಮುದ್ರದ ಅಬ್ಬರ ಮತ್ತು ಭಾರೀ ಗಾಳಿಗೆ ಬೋಟ್ ಹಠಾತ್ ಪಲ್ಟಿಯಾಗಿ ಮುಳುಗಡೆಯಾಗಿದೆ. ಕೂಡಲೇ ರಕ್ಷಣಾ ತಂಡಗಳು ಧಾವಿಸಿದ್ದರೂ, ಹೆಚ್ಚಿನವರು ನೀರಿನಲ್ಲಿ ಮುಳುಗಿ ಅಸ್ವಸ್ಥರಾಗಿದ್ದಾರೆ.
ಬೋಟ್ ಮಗುಚಿ ಬಿದ್ದಿದ್ದರಿಂದ ಅದರಲ್ಲಿದ್ದ ಪ್ರವಾಸಿಗರು ನೀರಿನಲ್ಲಿ ಮುಳುಗಿದ್ದಾರೆ. ಹಲವರನ್ನು ಗಂಭೀರ ಸ್ಥಿತಿಯಲ್ಲಿ ರಕ್ಷಣೆ ಮಾಡಲಾಗಿದೆ. ಈ ವೇಳೆ, 15 ಮಂದಿಯಷ್ಟು ಪ್ರವಾಸಿಗರು ಮೃತಪಟ್ಟಿದ್ದಾರೆ ಎನ್ನಲಾಗಿದೆ. ಘಟನೆ ಸಂದರ್ಭದಲ್ಲಿ 4 ಮಂದಿ ಬೋಟ್ ಸಿಬಂದಿ ಇದ್ದರು. ದುರಂತದಲ್ಲಿ ಕೆಲವರಷ್ಟೇ ತೊಂದರೆಯಿಲ್ಲದೆ ಪಾರಾಗಿದ್ದಾರೆ. ಸ್ಥಳದಲ್ಲಿ ಮಳೆ ಇಲ್ಲದಿದ್ದರೂ, ಸಮುದ್ರದ ಅಬ್ಬರ ತೀವ್ರವಾಗಿತ್ತು. ಇತರೇ ಸ್ಪೀಡ್ ಬೋಟ್ ಗಳಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಸಲಾಗಿತ್ತು. ಸದ್ಯಕ್ಕೆ ಮೃತರಲ್ಲಿ ಎಲ್ಲಿಯವರು, ಯಾರು ಎನ್ನುವುದು ಗೊತ್ತಾಗಿಲ್ಲ. ಬೋಟಿನಲ್ಲಿ ಭಾರತೀಯರೇ ಹೆಚ್ಚಿದ್ದರು ಅನ್ನುವ ಮಾಹಿತಿ ಇದೆ.
ಫುಕೋ ದ್ವೀಪಕ್ಕೆ ಕಳೆದ ಆರು ತಿಂಗಳಲ್ಲಿ 5.7 ಮಿಲಿಯನ್ ಪ್ರವಾಸಿಗರು ಬಂದಿದ್ದು ದಾಖಲೆಯಾಗಿದೆ. ವಿಯೆಟ್ನಾಂ ದ್ಪೀಪ ರಾಷ್ಟ್ರಗಳಿಗೆ ಪ್ರವಾಸೋದ್ಯಮವೇ ಆಕರ್ಷಣೆಯಾಗಿದ್ದು ಜಗತ್ತಿನ ಬಹುತೇಕ ರಾಷ್ಟ್ರಗಳಿಂದ ಇಲ್ಲಿನ ದ್ವೀಪಗಳಿಗೆ ಜನರು ಪ್ರವಾಸ ಬರುತ್ತಾರೆ. ಕಳೆದ ವರ್ಷ ಜುಲೈ ತಿಂಗಳಲ್ಲೂ ವಿಯೆಟ್ನಾಂನಲ್ಲಿ ಬೋಟ್ ದುರಂತ ನಡೆದು 38 ಮಂದಿ ಸಾವನ್ನಪ್ಪಿದ್ದರು.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm