ಬ್ರೇಕಿಂಗ್ ನ್ಯೂಸ್
17-07-26 10:32 am HK News Staffer ದೇಶ - ವಿದೇಶ
ಪಾಟ್ನಾ, ಜುಲೈ 17: ಜಗತ್ತಿನ ಅಪಾಯಕಾರಿ ಸರ್ಪಗಳಲ್ಲಿ ಒಂದಾದ ಕಿಂಗ್ ಕೋಬ್ರಾ ಅಥವಾ ಕಾಳಿಂಗ ಸರ್ಪದಿಂದ ಬರೋಬ್ಬರಿ 51 ಬಾರಿ ಕಚ್ಚಿಸಿಕೊಂಡರೂ ಬಿಹಾರದ ಸ್ನೇಕ್ ಲೇಡಿ ಜಾನಕಿ ದೇವಿ ಪವಾಡಸದೃಶ ಬದುಕುಳಿದಿದ್ದಾರೆ ಎನ್ನುವುದು ದೇಶದ ಗಮನ ಸೆಳೆದಿದೆ. ಬಿಹಾರದಲ್ಲಿ "ಸ್ನೇಕ್ ಲೇಡಿ" ಎಂದೇ ಖ್ಯಾತಿ ಪಡೆದಿರುವ ಜಾನಕಿ ದೇವಿ ಅವರಿಗೆ ಹಾವು ರಕ್ಷಣೆ ಕಾರ್ಯಾಚರಣೆ ವೇಳೆ 51 ಬಾರಿ ವಿಷದ ಹಾವುಗಳು ಕಚ್ಚಿದರೂ, ಸಕಾಲದಲ್ಲಿ ಚಿಕಿತ್ಸೆ ದೊರೆತಿದ್ದರಿಂದ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
56 ವರ್ಷದ ಜಾನಕಿ ದೇವಿ ಜುಲೈ 15ರ ಸಂಜೆ ಬಿಹಾರದ ಪಶ್ಚಿಮ ಚಂಪಾರಣ ಜಿಲ್ಲೆಯ ಭಾರತ-ನೇಪಾಳ ಗಡಿಭಾಗದ ವಾಲ್ಮೀಕಿನಗರ ಸಮೀಪದ ಬಿಸಾಹಾ ಗ್ರಾಮದಲ್ಲಿ ಮನೆಯೊಂದಕ್ಕೆ ನುಗ್ಗಿದ್ದ ಕಿಂಗ್ ಕೋಬ್ರಾ ಹಾವನ್ನು ರಕ್ಷಿಸಲು ತೆರಳಿದ್ದರು. ಈ ವೇಳೆ ಹಾವನ್ನು ಹಿಡಿದು ಪೋಸು ನೀಡುತ್ತಿದ್ದಾಗ ಜಾನಕಿ ದೇವಿಗೆ ಕಚ್ಚಿದ್ದು, ಕೂಡಲೇ ಅವರನ್ನು ನೇಪಾಳದ ತ್ರಿವೇಣಿ ಸೇನಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ವೈದ್ಯರು ಚಿಕಿತ್ಸೆ ನೀಡಿದ್ದು, ಚೇತರಿಕೆ ಕಂಡಿದ್ದಾರೆ ಎಂದು ತಿಳಿಸಿದ್ದಾರೆ.
ಫೋಟೋಗೆ ಪೋಸ್ ನೀಡುತ್ತಿದ್ದಾಗ ಕಚ್ಚಿದ ಸರ್ಪ
ಬಿಸಾಹಾ ಗ್ರಾಮದ ನಿವಾಸಿಯೊಬ್ಬರ ಮನೆಗೆ ಕಿಂಗ್ ಕೋಬ್ರಾ ನುಗ್ಗಿತ್ತು. ಸ್ಥಳೀಯರ ಮಾಹಿತಿ ಮೇರೆಗೆ ಜಾನಕಿ ದೇವಿ ಸ್ಥಳಕ್ಕೆ ತೆರಳಿ ಹಾವನ್ನು ಸುರಕ್ಷಿತವಾಗಿ ಹಿಡಿದು ರಕ್ಷಿಸಿದ್ದರು. ಬಳಿಕ ಅದನ್ನು 6 ಆರ್ಡಿ ಪ್ರದೇಶಕ್ಕೆ ಕೊಂಡೊಯ್ದು, ಕುತ್ತಿಗೆಯ ಸುತ್ತ ಕಿಂಗ್ ಕೋಬ್ರಾವನ್ನು ಸುತ್ತಿಕೊಂಡು ಛಾಯಾಚಿತ್ರಗಳಿಗೆ ಪೋಸ್ ನೀಡಿದ್ದು ಈ ವೇಳೆ, ಏಕಾಏಕಿ ಹಾವು ಅವರ ಕೈಗೆ ಕಚ್ಚಿದೆ. ತಕ್ಷಣವೇ ಅವರನ್ನು ನೇಪಾಳದ ನವಲ್ಪರಾಸಿ ಜಿಲ್ಲೆಯ ತ್ರಿವೇಣಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.
12ನೇ ವಯಸ್ಸಿನಿಂದಲೇ ಹಾವು ಹಿಡಿಯುತ್ತಿದ್ದ ಜಾನಕಿ ದೇವಿ
ಅಂದಹಾಗೆ ಜಾನಕಿ ದೇವಿ ಬಿಹಾರದಲ್ಲಿ ಸ್ನೇಕ್ ಲೇಡಿ ಎಂದೇ ಹೆಸರು ಗಳಿಸಿದ್ದಾರೆ. ಸ್ಥಳೀಯರ ಪ್ರಕಾರ, ಜಾನಕಿ ದೇವಿ 12ನೇ ವಯಸ್ಸಿನಿಂದಲೇ ಹಾವುಗಳನ್ನು ರಕ್ಷಿಸುವ ಕಾರ್ಯದಲ್ಲಿ ತೊಡಗಿಸಿದ್ದಾರೆ. ಕಳೆದ ನಾಲ್ಕು ದಶಕಗಳಿಗೂ ಹೆಚ್ಚು ಅವಧಿಯಲ್ಲಿ ಸಾವಿರಾರು ವಿಷಕಾರಿ ಹಾವುಗಳನ್ನು ಸುರಕ್ಷಿತವಾಗಿ ಹಿಡಿದು ಕಾಡಿಗೆ ಬಿಡುವ ಮೂಲಕ ಜನರ ಮೆಚ್ಚುಗೆ ಗಳಿಸಿದ್ದಾರೆ. ಅಚ್ಚರಿ ಸಂಗತಿಯೆಂದರೆ, ಇದುವರೆಗೆ 50ಕ್ಕೂ ಹೆಚ್ಚು ಬಾರಿ ವಿಷಕಾರಿ ಹಾವುಗಳಿಂದ ಕಚ್ಚಿಸಿಕೊಂಡರೂ ಪ್ರತೀ ಬಾರಿಯೂ ಸಾವಿನಿಂದ ಪಾರಾಗಿ ಮತ್ತೆ ಹಾವು ರಕ್ಷಣೆಯಲ್ಲಿ ತೊಡಗಿಸಿದ್ದಾರೆ.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
23-08-26 06:17 pm
HK News Staffer
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
24-08-26 11:05 am
HK News Staffer
ಹೊಳೆನರಸೀಪುರ ; ಟ್ರ್ಯಾಕ್ಟರ್ ಕೀಯನ್ನು ತಿರುಗಿಸಿದ ಮ...
23-08-26 05:20 pm
ಹೆತ್ತವರನ್ನು ಕೊಲ್ತೇನೆಂದು ಹೇಳಿ ಒಂಬತ್ತನೇ ಕ್ಲಾಸ್...
22-08-26 12:43 pm
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am