ಬ್ರೇಕಿಂಗ್ ನ್ಯೂಸ್
19-07-26 09:37 pm HK News Staffer ದೇಶ - ವಿದೇಶ
ತಿರುವನಂತಪುರಂ, ಜುಲೈ 19: ಫಿಫಾ ಫುಟ್ಬಾಲ್ ವಿಶ್ವಕಪ್ ಫೈನಲ್ ಕ್ರೇಜ್ ಕೇರಳದಲ್ಲಿ ಉತ್ತುಂಗಕ್ಕೇರಿದೆ. ಮಧ್ಯರಾತ್ರಿ 12.30ಕ್ಕೆ ಸ್ಪೇನ್ - ಅರ್ಜೆಂಟೀನಾ ಫೈನಲ್ ಪಂದ್ಯ ನಡೆಯುವುದರಿಂದ ವಿದ್ಯಾರ್ಥಿಗಳ ಮನವಿಗೆ ಸ್ಪಂದಿಸಿದ ಕೇರಳ ಸರ್ಕಾರ ಸೋಮವಾರ ಎಲ್ಲಾ ಶಾಲೆ, ಕಾಲೇಜುಗಳಿಗೆ ರಜೆ ಘೋಷಿಸಿದೆ. ಮಧ್ಯರಾತ್ರಿ ಫುಟ್ಬಾಲ್ ಸಂಭ್ರಮಾಚರಣೆಗೆ ಅನುವಾಗುವಂತೆ ಸಿಎಂ ವಿಡಿ ಸತೀಶನ್ ಶಾಲೆ, ಕಾಲೇಜುಗಳಿಗೆ ರಜೆ ನೀಡಿದ್ದಾರೆ.
2026ರ ಫಿಫಾ ವಿಶ್ವಕಪ್ ಫೈನಲ್ ಪಂದ್ಯಕ್ಕೆ ಭಾರೀ ಸಿದ್ಧತೆ ನಡೆದಿದ್ದು ಹಲವು ಕಡೆಗಳಲ್ಲಿ ದೊಡ್ಡ ಸ್ಕ್ರೀನ್ ಹಾಕಲಾಗಿದೆ. ಅರ್ಜೆಂಟೀನಾ ಮತ್ತು ಸ್ಪೇನ್ ನಡುವಿನ ಮಧ್ಯರಾತ್ರಿಯ ಫೈನಲ್ ಪಂದ್ಯವನ್ನು ವಿದ್ಯಾರ್ಥಿಗಳು ನೆಮ್ಮದಿಯಿಂದ ವೀಕ್ಷಿಸಲು ಸೋಮವಾರ ಎಲ್ಲಾ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.
ಭಾರತೀಯ ಕಾಲಮಾನ ನಡುರಾತ್ರಿ 12:30ಕ್ಕೆ ಪಂದ್ಯ ಆರಂಭವಾಗಲಿದ್ದು, ರಾತ್ರಿ ತಡವಾಗಿ ಪಂದ್ಯ ವೀಕ್ಷಿಸಿದ ಬಳಿಕ ಬೆಳಗ್ಗೆ ಶಾಲೆಗೆ ಹಾಜರಾಗುವುದು ಕಷ್ಟವಾಗುತ್ತದೆ ಎಂದು ವಿದ್ಯಾರ್ಥಿಗಳು ಸರ್ಕಾರಕ್ಕೆ ರಜೆ ನೀಡುವಂತೆ ಜಾಲತಾಣದಲ್ಲಿ ಮನವಿ ಮಾಡಿದ್ದರು. ಈ ಬೇಡಿಕೆಗೆ ಸ್ಪಂದಿಸಿದ ರಾಜ್ಯ ಶಿಕ್ಷಣ ಸಚಿವ ಎನ್. ಶಂಸುದ್ದೀನ್ ಸೋಷಿಯಲ್ ಮೀಡಿಯಾದಲ್ಲಿ ಈ ಮಾಹಿತಿಯನ್ನು ಹಂಚಿಕೊಂಡಿದ್ದಾರೆ.
ರಜೆ ನೀಡುವ ನಿರ್ಧಾರಕ್ಕೆ ರಾಜಕೀಯ ವಲಯದಿಂದಲೂ ಬೆಂಬಲ ವ್ಯಕ್ತವಾಗಿದೆ. ಮಾಜಿ ಶಿಕ್ಷಣ ಸಚಿವ ವಿ. ಶಿವನ್ಕುಟ್ಟಿ ಕೂಡ ವಿದ್ಯಾರ್ಥಿಗಳ ಮನವಿಗೆ ಬೆಂಬಲ ಸೂಚಿಸಿ, ಕಳೆದುಹೋಗುವ ಶೈಕ್ಷಣಿಕ ದಿನವನ್ನು ಮತ್ತೊಂದು ದಿನ ಕೆಲಸದ ದಿನವನ್ನಾಗಿ ಮಾಡಿ ಸರಿದೂಗಿಸಬಹುದು ಎಂದು ಸಲಹೆ ನೀಡಿದ್ದಾರೆ. ವಿರೋಧ ಪಕ್ಷದ ಎಲ್ ಡಿಎಫ್ ನಾಯಕರು ಕೂಡ ರಜೆ ಘೋಷಣೆಯನ್ನು ಬೆಂಬಲಿಸಿದ್ದಾರೆ.
ಕೇರಳ ರಾಜ್ಯವಷ್ಟೇ ಅಲ್ಲದೆ ಮೇಘಾಲಯ ಸರ್ಕಾರ ಕೂಡ ಫಿಫಾ ವಿಶ್ವಕಪ್ ಫೈನಲ್ಗಾಗಿ ವಿದ್ಯಾರ್ಥಿಗಳಿಗೆ ಗುಡ್ನ್ಯೂಸ್ ನೀಡಿದೆ. ಮುಖ್ಯಮಂತ್ರಿ ಕಾನ್ರಾಡ್ ಕೆ. ಸಂಗ್ಮಾ ಅವರು ಜುಲೈ 20ರಂದು ರಾಜ್ಯದ ಎಲ್ಲಾ ಶಾಲೆ ಹಾಗೂ ಕಾಲೇಜುಗಳಿಗೆ ರಜೆ ಘೋಷಿಸಿದ್ದಾರೆ. ಮಧ್ಯರಾತ್ರಿ ನಡೆಯಲಿರುವ ಫೈನಲ್ ಪಂದ್ಯವನ್ನು ವಿದ್ಯಾರ್ಥಿಗಳು ಯಾವುದೇ ಒತ್ತಡವಿಲ್ಲದೆ ವೀಕ್ಷಿಸಲು ಈ ನಿರ್ಧಾರ ಕೈಗೊಳ್ಳಲಾಗಿದೆ.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
23-08-26 06:17 pm
HK News Staffer
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
24-08-26 11:05 am
HK News Staffer
ಹೊಳೆನರಸೀಪುರ ; ಟ್ರ್ಯಾಕ್ಟರ್ ಕೀಯನ್ನು ತಿರುಗಿಸಿದ ಮ...
23-08-26 05:20 pm
ಹೆತ್ತವರನ್ನು ಕೊಲ್ತೇನೆಂದು ಹೇಳಿ ಒಂಬತ್ತನೇ ಕ್ಲಾಸ್...
22-08-26 12:43 pm
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am