ಬ್ರೇಕಿಂಗ್ ನ್ಯೂಸ್
28-07-26 11:56 am HK News Staffer ದೇಶ - ವಿದೇಶ
ನವದೆಹಲಿ, ಜುಲೈ 28: ನೀಟ್ ಅಕ್ರಮ ಖಂಡಿಸಿ ಶಾಂತಿಯುತವಾಗಿ ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳಿಗೆ ಕಾನೂನು ಬೆಂಬಲ ನೀಡುತ್ತೇನೆ ಮತ್ತು ಕಾನೂನು ಹೋರಾಟಕ್ಕಾಗಿ 1 ಕೋಟಿ ರೂ. ದೇಣಿಗೆ ನೀಡುವುದಾಗಿ ಸುಪ್ರೀಂ ಕೋರ್ಟ್ ಹಿರಿಯ ವಕೀಲ ಹಾಗೂ ರಾಜ್ಯಸಭಾ ಸದಸ್ಯ ಕಪಿಲ್ ಸಿಬಲ್ ಘೋಷಿಸಿದ್ದಾರೆ. ಅಲ್ಲದೆ ದೇಶಾದ್ಯಂತ ಇತರ ವಕೀಲರು ಈ ಸಿಜೆಪಿಗೆ ಕಾನೂನು ನೆರವು ನೀಡಬೇಕೆಂದು ಒತ್ತಾಯಿಸಿದ್ದಾರೆ.
ಪ್ರತಿಭಟನಾಕಾರರ ವಿರುದ್ಧ ತೆಗೆದುಕೊಂಡ ಕಾನೂನು ಕ್ರಮಗಳನ್ನು ಪತ್ತೆಹಚ್ಚಲು ಮತ್ತು ವಕೀಲರೊಂದಿಗೆ ಸಂಪರ್ಕಿಸುವ ವೆಬ್ಸೈಟ್ ಅನ್ನು ಕಾಕ್ರೋಚ್ ಜನತಾ ಪಕ್ಷ(ಸಿಜೆಪಿ) ಪ್ರಾರಂಭಿಸಲಿದೆ ಎಂದು ಕಬಿಲ್ ಸಿಬಲ್ ತಿಳಿಸಿದ್ದಾರೆ.
ಸಿಜೆಪಿ ವಕ್ತಾರ ಸೌರವ್ ದಾಸ್ ಅವರೊಂದಿಗೆ ನಡೆಸಿದ ಜಂಟಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಕಪಿಲ್ ಸಿಬಲ್ ಅವರು, ಶಾಂತಿಯುತವಾಗಿ ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳು ಹಾಗೂ ಪ್ರತಿಭಟನಾಕಾರರ ಮೇಲೆ ಸುಳ್ಳು ಪ್ರಕರಣಗಳನ್ನು ದಾಖಲಿಸಿ ಕಿರುಕುಳ ನೀಡುವುದನ್ನು ತಡೆಯಲು ಮತ್ತು ಅವರಿಗೆ ಅಗತ್ಯ ಕಾನೂನು ನೆರವು ನೀಡುವುದಾಗಿ ಹೇಳಿದ್ದಾರೆ.
ಪ್ರತಿಭಟನಾಕಾರರ ಮೇಲೆ ಎಲ್ಲಿ, ಏನು ಕ್ರಮ ಜರುಗಿಸಲಾಗಿದೆ ಎಂಬುದನ್ನು ಟ್ರ್ಯಾಕ್ ಮಾಡಲು ಸಿಜೆಪಿ ಒಂದು ಬಲವಾದ ಚೌಕಟ್ಟನ್ನು ರೂಪಿಸಲಿದೆ. ಉಚಿತವಾಗಿ ಕಾನೂನು ನೆರವು ನೀಡಲು ಬಯಸುವ ವಕೀಲರು ತಮ್ಮ ಹೆಸರು, ಸ್ಥಳ ಹಾಗೂ ಸಹಾಯದ ವಿವರಗಳನ್ನು ನೋಂದಾಯಿಸಿಕೊಳ್ಳಲು ಪ್ರತ್ಯೇಕ ವೆಬ್ಸೈಟ್ ತೆರೆಯಲಾಗುವುದು ಎಂದು ತಿಳಿಸಿದರು.
ಎಲ್ಲೆಲ್ಲಿ ಕಾನೂನನ್ನು ದುರುಪಯೋಗಪಡಿಸಿಕೊಂಡು ಶಾಂತಿಯುತ ಪ್ರತಿಭಟನಾಕಾರರ ವಿರುದ್ಧ ಸುಳ್ಳು ಕೇಸುಗಳನ್ನು ಹಾಕಲಾಗುತ್ತದೆಯೋ, ಅಲ್ಲೆಲ್ಲಾ ನಾವು ಅವರ ಪರವಾಗಿ ನಿಲ್ಲುತ್ತೇವೆ. ದೇಶಾದ್ಯಂತ ನಮ್ಮ ವಕೀಲರು ಅವರಿಗೆ ಬೆಂಬಲ ನೀಡಲಿದ್ದಾರೆ. ನಾನು ಈ ನಿಧಿಗೆ 1 ಕೋಟಿ ರೂಪಾಯಿ ನೀಡುತ್ತಿದ್ದು, ದೇಶದ ಇತರ ವಕೀಲರು ಹಾಗೂ ಸಾರ್ವಜನಿಕರು ಸಹ ದೇಣಿಗೆ ನೀಡಬೇಕಾಗಿ ವಿನಂತಿಸುತ್ತೇನೆ ಎಂದು ಕಪಿಲ್ ಸಿಬಲ್ ಮನವಿ ಮಾಡಿದರು.
13-08-26 08:09 pm
HK News Staffer
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
ಐಷಾರಾಮಿ ಹೊಟೇಲ್ ಬಳಿಕ ಸರ್ಕಾರಿ ಕಚೇರಿಗಳ ಕ್ಯಾಂಟೀನ್...
13-08-26 02:22 pm
ಸಚಿವ ಸ್ಥಾನ ಕೈತಪ್ಪಿದ ಮಂಕಾಳ ವೈದ್ಯಗೆ ವಿಧಾನಸಭೆ ಉಪ...
13-08-26 01:00 pm
ಕೊನೆಗೂ ಖಾತೆ ಫೈನಲ್ ; ಜಮೀರ್ ಡೌನ್ ಗ್ರೇಡ್, ಖಾದರ್...
12-08-26 06:57 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
12-08-26 11:06 pm
HK News Desk
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
Mangalore Railway, Train: ಕಾಲು ಜಾರಿ ರೈಲಿನಡಿ ಬ...
11-08-26 10:23 pm
ಮೂಡುಬಿದಿರೆಯಲ್ಲಿ ಸಿಲಿಂಡರ್ ಸ್ಫೋಟ ; ಆರು ವರ್ಷದ ಬಾ...
11-08-26 10:03 pm
13-08-26 04:29 pm
HK News Staffer
ನಿರ್ಮಾಣ ಹಂತದ ಕಟ್ಟಡದಿಂದ ಕೆಳಕ್ಕೆ ಬಿದ್ದ ವಲಸೆ ಕಾರ...
13-08-26 03:22 pm
ಮದುವೆ ನಿಶ್ಚಿತಾರ್ಥ ಆಗಿದ್ದ ಎಸ್ ಬಿಐ ಬ್ಯಾಂಕ್ ಉದ್ಯ...
13-08-26 01:17 pm
Mangalore crime, Arrest: ಕೈ ಕೋಳದಲ್ಲೇ ಪೊಲೀಸರನ್...
12-08-26 11:18 pm
Panambur Robbery, Update, Mangalore: ಪಣಂಬೂರು...
12-08-26 07:47 pm