ಬ್ರೇಕಿಂಗ್ ನ್ಯೂಸ್
01-08-26 05:17 pm HK News Staffer ದೇಶ - ವಿದೇಶ
ನವದೆಹಲಿ, ಆಗಸ್ಟ್ 1: ಜಾನ್ಸನ್ ಆ್ಯಂಡ್ ಜಾನ್ಸನ್ ಬೇಬಿ ಪೌಡರ್ ಕ್ಯಾನ್ಸರ್ಗೆ ಕಾರಣವಾಗುತ್ತಿದೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಅಮೆರಿಕದಲ್ಲಿ ದಾಖಲಾದ ಪ್ರಕರಣಗಳಿಗೆ ಸಂಬಂಧಿಸಿ ಕಂಪನಿಯು ಸುಮಾರು 53 ಸಾವಿರ ಕೋಟಿ ರೂ. (5.5 ಬಿಲಿಯನ್ ಡಾಲರ್) ಪರಿಹಾರ ನೀಡಲು ಒಪ್ಪಿಕೊಂಡಿದೆ. ಈ ಉತ್ಪನ್ನಗಳಿಂದಾಗಿ ಅಮೆರಿಕ ಒಂದರಲ್ಲೇ 76 ಸಾವಿರ ಮಕ್ಕಳು ಮತ್ತು ವಯಸ್ಕರು ಕ್ಯಾನ್ಸರ್ಗೆ ತುತ್ತಾಗಿದ್ದಾಗಿ ಪ್ರಕರಣ ದಾಖಲಾಗಿದ್ದು ಸುದೀರ್ಘ ವ್ಯಾಜ್ಯದ ಬಳಿಕ ಕಂಪನಿ ಸಂತ್ರಸ್ತರಿಗೆ ಪರಿಹಾರ ನೀಡಲು ಮುಂದಾಗಿದೆ.
ಜಾನ್ಸನ್ ಅಂಡ್ ಜಾನ್ಸನ್ ಕಂಪನಿಯ ಟಾಲ್ಕಂ ಪೌಡರ್ ಚಿಕ್ಕ ಮಕ್ಕಳಿಗೆ ಬಳಸುವುದಕ್ಕೆ ಇಡೀ ಜಗತ್ತಿನಲ್ಲಿ ಪ್ರಸಿದ್ಧಿ ಪಡೆದಿದೆ. ಆದರೆ ಇತ್ತೀಚಿನ ವರ್ಷಗಳಲ್ಲಿ ಈ ಕಂಪನಿಯ ಪೌಡರ್ ಬಗ್ಗೆ ಆರೋಪ ಕೇಳಿಬಂದಿದ್ದು ಕ್ಯಾನ್ಸರ್ ಗೆ ಕಾರಣವಾಗುತ್ತಿದೆ ಎನ್ನುವ ಗಂಭೀರ ಆರೋಪ ಅಮೆರಿಕದಲ್ಲಿ ಕೋರ್ಟ್ ಮೆಟ್ಟಿಲೇರಿತ್ತು. ಹಲವು ವರ್ಷಗಳ ವ್ಯಾಜ್ಯದ ಬಳಿಕ ಕಂಪನಿಯು ತನ್ನ ಮೇಲಿನ ಆರೋಪ ನಿರಾಕರಿಸುತ್ತಲೇ ಪರಿಹಾರಕ್ಕಾಗಿ ದೂರು ಸಲ್ಲಿಸಿರುವವರಿಗೆ ಪರಿಹಾರದ ಮೊತ್ತ ನೀಡಲು ಒಪ್ಪಿಗೆ ನೀಡಿರುವುದು ಮತ್ತೆ ಚರ್ಚೆಗೆ ಗ್ರಾಸವಾಗಿದೆ.
5.5 ಬಿಲಿಯನ್ ಡಾಲರ್ ಮೊತ್ತವನ್ನು 76 ಸಾವಿರ ಪ್ರಕರಣದಲ್ಲಿ ಸಂತ್ರಸ್ತರಿಗೆ ಹಂಚುವಂತೆ ಕಂಪನಿಯು ಕೋರ್ಟಿನಲ್ಲಿ ಕೇಳಿಕೊಂಡಿದೆ. ಆದಾಗ್ಯೂ ಕಂಪನಿಯ ಉಪಾಧ್ಯಕ್ಷ ಎರಿಕ್ ಹಾಸ್, ಆರೋಪಗಳೆಲ್ಲ ಆಧಾರ ರಹಿತ. ದೀರ್ಘ ಕಾಲದ ವ್ಯಾಜ್ಯವನ್ನು ಮುಗಿಸುವುದಕ್ಕಾಗಿ ಪರಿಹಾರ ಮೊತ್ತವನ್ನು ನೀಡಲು ಬಯಸಿದ್ದೇವೆ ಎಂದಿದ್ದಾರೆ. ಅಲ್ಲದೆ, ಇನ್ನೆರಡು ವರ್ಷದಲ್ಲಿ ಅಂದರೆ 2028ರ ಒಳಗೆ ಇನ್ನೂ ಮೂರು ಬಿಲಿಯನ್ ಡಾಲರ್ ನೀಡುವ ಮೂಲಕ ಎಲ್ಲ ವ್ಯಾಜ್ಯವನ್ನು ಬಗೆಹರಿಸಿಕೊಳ್ಳುತ್ತೇವೆ ಎಂದು ಹೇಳಿದ್ದಾರೆ.
ಜಾನ್ಸನ್ ಬೇಬಿ ಪೌಡರ್ ವಿರುದ್ಧ 2009ರಿಂದ ಹಲವು ಕಡೆ ದೂರುಗಳು ದಾಖಲಾಗತೊಡಗಿದ್ದು 2022ರ ವೇಳೆಗೆ ಅಮೆರಿಕ ಸೇರಿದಂತೆ ಜಾಗತಿಕವಾಗಿ ಮಾರಾಟ ಮತ್ತು ಉತ್ಪಾದನೆಯನ್ನು ಸ್ಥಗಿತಗೊಳಿಸುವುದಾಗಿ ಹೇಳಿತ್ತು. ಒವೇರಿಯನ್ ಕ್ಯಾನ್ಸರ್ ಗೆ ಕಾರಣವಾಗುತ್ತಿರುವ ಬಗ್ಗೆ ಪ್ರಬಲ ಆಕ್ಷೇಪ ಕೇಳಿಬಂದ ಹಿನ್ನೆಲೆಯಲ್ಲಿ 2022ರಲ್ಲಿ ಕಂಪನಿಯ ವಿರುದ್ಧ ಕೋರ್ಟ್ ಚಾಟಿ ಬೀಸಿತ್ತು. ಇದಾಗಿ ಎರಡು ವರ್ಷಗಳ ಬಳಿಕ ದೊಡ್ಡ ಮೊತ್ತದ ಪರಿಹಾರ ನೀಡಿ ಆರೋಪದಿಂದ ಬಚಾವಾಗಲು ಮುಂದಾಗಿದೆ.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
23-08-26 06:17 pm
HK News Staffer
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
23-08-26 05:20 pm
HK News Staffer
ಹೆತ್ತವರನ್ನು ಕೊಲ್ತೇನೆಂದು ಹೇಳಿ ಒಂಬತ್ತನೇ ಕ್ಲಾಸ್...
22-08-26 12:43 pm
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm