ಬ್ರೇಕಿಂಗ್ ನ್ಯೂಸ್
01-08-26 05:17 pm HK News Staffer ದೇಶ - ವಿದೇಶ
ನವದೆಹಲಿ, ಆಗಸ್ಟ್ 1: ಜಾನ್ಸನ್ ಆ್ಯಂಡ್ ಜಾನ್ಸನ್ ಬೇಬಿ ಪೌಡರ್ ಕ್ಯಾನ್ಸರ್ಗೆ ಕಾರಣವಾಗುತ್ತಿದೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಅಮೆರಿಕದಲ್ಲಿ ದಾಖಲಾದ ಪ್ರಕರಣಗಳಿಗೆ ಸಂಬಂಧಿಸಿ ಕಂಪನಿಯು ಸುಮಾರು 53 ಸಾವಿರ ಕೋಟಿ ರೂ. (5.5 ಬಿಲಿಯನ್ ಡಾಲರ್) ಪರಿಹಾರ ನೀಡಲು ಒಪ್ಪಿಕೊಂಡಿದೆ. ಈ ಉತ್ಪನ್ನಗಳಿಂದಾಗಿ ಅಮೆರಿಕ ಒಂದರಲ್ಲೇ 76 ಸಾವಿರ ಮಕ್ಕಳು ಮತ್ತು ವಯಸ್ಕರು ಕ್ಯಾನ್ಸರ್ಗೆ ತುತ್ತಾಗಿದ್ದಾಗಿ ಪ್ರಕರಣ ದಾಖಲಾಗಿದ್ದು ಸುದೀರ್ಘ ವ್ಯಾಜ್ಯದ ಬಳಿಕ ಕಂಪನಿ ಸಂತ್ರಸ್ತರಿಗೆ ಪರಿಹಾರ ನೀಡಲು ಮುಂದಾಗಿದೆ.
ಜಾನ್ಸನ್ ಅಂಡ್ ಜಾನ್ಸನ್ ಕಂಪನಿಯ ಟಾಲ್ಕಂ ಪೌಡರ್ ಚಿಕ್ಕ ಮಕ್ಕಳಿಗೆ ಬಳಸುವುದಕ್ಕೆ ಇಡೀ ಜಗತ್ತಿನಲ್ಲಿ ಪ್ರಸಿದ್ಧಿ ಪಡೆದಿದೆ. ಆದರೆ ಇತ್ತೀಚಿನ ವರ್ಷಗಳಲ್ಲಿ ಈ ಕಂಪನಿಯ ಪೌಡರ್ ಬಗ್ಗೆ ಆರೋಪ ಕೇಳಿಬಂದಿದ್ದು ಕ್ಯಾನ್ಸರ್ ಗೆ ಕಾರಣವಾಗುತ್ತಿದೆ ಎನ್ನುವ ಗಂಭೀರ ಆರೋಪ ಅಮೆರಿಕದಲ್ಲಿ ಕೋರ್ಟ್ ಮೆಟ್ಟಿಲೇರಿತ್ತು. ಹಲವು ವರ್ಷಗಳ ವ್ಯಾಜ್ಯದ ಬಳಿಕ ಕಂಪನಿಯು ತನ್ನ ಮೇಲಿನ ಆರೋಪ ನಿರಾಕರಿಸುತ್ತಲೇ ಪರಿಹಾರಕ್ಕಾಗಿ ದೂರು ಸಲ್ಲಿಸಿರುವವರಿಗೆ ಪರಿಹಾರದ ಮೊತ್ತ ನೀಡಲು ಒಪ್ಪಿಗೆ ನೀಡಿರುವುದು ಮತ್ತೆ ಚರ್ಚೆಗೆ ಗ್ರಾಸವಾಗಿದೆ.
5.5 ಬಿಲಿಯನ್ ಡಾಲರ್ ಮೊತ್ತವನ್ನು 76 ಸಾವಿರ ಪ್ರಕರಣದಲ್ಲಿ ಸಂತ್ರಸ್ತರಿಗೆ ಹಂಚುವಂತೆ ಕಂಪನಿಯು ಕೋರ್ಟಿನಲ್ಲಿ ಕೇಳಿಕೊಂಡಿದೆ. ಆದಾಗ್ಯೂ ಕಂಪನಿಯ ಉಪಾಧ್ಯಕ್ಷ ಎರಿಕ್ ಹಾಸ್, ಆರೋಪಗಳೆಲ್ಲ ಆಧಾರ ರಹಿತ. ದೀರ್ಘ ಕಾಲದ ವ್ಯಾಜ್ಯವನ್ನು ಮುಗಿಸುವುದಕ್ಕಾಗಿ ಪರಿಹಾರ ಮೊತ್ತವನ್ನು ನೀಡಲು ಬಯಸಿದ್ದೇವೆ ಎಂದಿದ್ದಾರೆ. ಅಲ್ಲದೆ, ಇನ್ನೆರಡು ವರ್ಷದಲ್ಲಿ ಅಂದರೆ 2028ರ ಒಳಗೆ ಇನ್ನೂ ಮೂರು ಬಿಲಿಯನ್ ಡಾಲರ್ ನೀಡುವ ಮೂಲಕ ಎಲ್ಲ ವ್ಯಾಜ್ಯವನ್ನು ಬಗೆಹರಿಸಿಕೊಳ್ಳುತ್ತೇವೆ ಎಂದು ಹೇಳಿದ್ದಾರೆ.
ಜಾನ್ಸನ್ ಬೇಬಿ ಪೌಡರ್ ವಿರುದ್ಧ 2009ರಿಂದ ಹಲವು ಕಡೆ ದೂರುಗಳು ದಾಖಲಾಗತೊಡಗಿದ್ದು 2022ರ ವೇಳೆಗೆ ಅಮೆರಿಕ ಸೇರಿದಂತೆ ಜಾಗತಿಕವಾಗಿ ಮಾರಾಟ ಮತ್ತು ಉತ್ಪಾದನೆಯನ್ನು ಸ್ಥಗಿತಗೊಳಿಸುವುದಾಗಿ ಹೇಳಿತ್ತು. ಒವೇರಿಯನ್ ಕ್ಯಾನ್ಸರ್ ಗೆ ಕಾರಣವಾಗುತ್ತಿರುವ ಬಗ್ಗೆ ಪ್ರಬಲ ಆಕ್ಷೇಪ ಕೇಳಿಬಂದ ಹಿನ್ನೆಲೆಯಲ್ಲಿ 2022ರಲ್ಲಿ ಕಂಪನಿಯ ವಿರುದ್ಧ ಕೋರ್ಟ್ ಚಾಟಿ ಬೀಸಿತ್ತು. ಇದಾಗಿ ಎರಡು ವರ್ಷಗಳ ಬಳಿಕ ದೊಡ್ಡ ಮೊತ್ತದ ಪರಿಹಾರ ನೀಡಿ ಆರೋಪದಿಂದ ಬಚಾವಾಗಲು ಮುಂದಾಗಿದೆ.
13-08-26 08:09 pm
HK News Staffer
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
ಐಷಾರಾಮಿ ಹೊಟೇಲ್ ಬಳಿಕ ಸರ್ಕಾರಿ ಕಚೇರಿಗಳ ಕ್ಯಾಂಟೀನ್...
13-08-26 02:22 pm
ಸಚಿವ ಸ್ಥಾನ ಕೈತಪ್ಪಿದ ಮಂಕಾಳ ವೈದ್ಯಗೆ ವಿಧಾನಸಭೆ ಉಪ...
13-08-26 01:00 pm
ಕೊನೆಗೂ ಖಾತೆ ಫೈನಲ್ ; ಜಮೀರ್ ಡೌನ್ ಗ್ರೇಡ್, ಖಾದರ್...
12-08-26 06:57 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
12-08-26 11:06 pm
HK News Desk
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
Mangalore Railway, Train: ಕಾಲು ಜಾರಿ ರೈಲಿನಡಿ ಬ...
11-08-26 10:23 pm
ಮೂಡುಬಿದಿರೆಯಲ್ಲಿ ಸಿಲಿಂಡರ್ ಸ್ಫೋಟ ; ಆರು ವರ್ಷದ ಬಾ...
11-08-26 10:03 pm
13-08-26 04:29 pm
HK News Staffer
ನಿರ್ಮಾಣ ಹಂತದ ಕಟ್ಟಡದಿಂದ ಕೆಳಕ್ಕೆ ಬಿದ್ದ ವಲಸೆ ಕಾರ...
13-08-26 03:22 pm
ಮದುವೆ ನಿಶ್ಚಿತಾರ್ಥ ಆಗಿದ್ದ ಎಸ್ ಬಿಐ ಬ್ಯಾಂಕ್ ಉದ್ಯ...
13-08-26 01:17 pm
Mangalore crime, Arrest: ಕೈ ಕೋಳದಲ್ಲೇ ಪೊಲೀಸರನ್...
12-08-26 11:18 pm
Panambur Robbery, Update, Mangalore: ಪಣಂಬೂರು...
12-08-26 07:47 pm