ಬ್ರೇಕಿಂಗ್ ನ್ಯೂಸ್
05-08-26 08:36 pm HK News Staffer ದೇಶ - ವಿದೇಶ
ನವದೆಹಲಿ, ಆಗಸ್ಟ್ 5: ವಿದ್ಯಾರ್ಥಿಗಳ ಪ್ರತಿಭಟನೆ ಮತ್ತು ನೀಟ್ ಪರೀಕ್ಷೆ ವಿಚಾರದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಫೇಸ್ಬುಕ್ ನಲ್ಲಿ ಹಾಕಿದ್ದ ಲೈವ್ ವಿಡಿಯೋವನ್ನು ಫೇಸ್ಬುಕ್ ಸ್ವತಃ ಕೆಲವು ಗಂಟೆಗಳ ಕಾಲ ತೆಗೆದುಹಾಕಿದ ಪ್ರಕರಣ ದೊಡ್ಡ ವಿವಾದಕ್ಕೆ ಕಾರಣವಾಗಿದ್ದು, ಫೇಸ್ ಬುಕ್ ಮಾತೃಸಂಸ್ಥೆ ಮೆಟಾ ಕ್ಷಮೆಗೆ ಒತ್ತಾಯಿಸಲಾಗಿದೆ.
ವಿಡಿಯೋಗೆ ಅತಿ ಹೆಚ್ಚು ಸ್ಪಂದನೆ ವ್ಯಕ್ತವಾಗಿದ್ದರಿಂದ ಅದನ್ನು ತೆಗೆದು ಹಾಕಿದ ಕ್ರಮವನ್ನು ಗಂಭೀರ ಪರಿಗಣಿಸಿರುವ ಕೇಂದ್ರ ಸಂಸದೀಯ ಸಮಿತಿ, ಮೆಟಾ ಮುಖ್ಯಸ್ಥ ಮಾರ್ಕ್ ಜುಕರ್ಬರ್ಗ್ ಇದಕ್ಕಾಗಿ ಕ್ಷಮೆ ಯಾಚಿಸಬೇಕು ಎಂದು ಒತ್ತಾಯಿಸಿದೆ. ಮೂರು ದಿನಗಳ ಒಳಗೆ ಸ್ಪಷ್ಟನೆ ನೀಡದಿದ್ದರೆ ಅವರಿಗೆ ಲಭ್ಯವಿರುವ ಕಾನೂನು ರಕ್ಷಣೆ ಮತ್ತು ವಿನಾಯಿತಿಯನ್ನು ದೇಶದಲ್ಲಿ ಹಿಂಪಡೆಯುವ ಎಚ್ಚರಿಕೆ ನೀಡಿದೆ.
ಈ ಕುರಿತು ಸಂಸದೀಯ ಸಮಿತಿ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯಕ್ಕೆ (MeitY) ಪತ್ರ ಬರೆದಿದ್ದು, ಫೇಸ್ಬುಕ್ನಲ್ಲಿ ಪ್ರಧಾನಿ ಮೋದಿ ವಿದ್ಯಾರ್ಥಿಗಳು ಮತ್ತು ಜೆನ್ ಝೀ ಯುವಕರನ್ನು ಉದ್ದೇಶಿಸಿ ಮಾತನಾಡಿದ್ದ ವಿಡಿಯೋವನ್ನು ತೆಗೆದುಹಾಕಿರುವ ಕ್ರಮವನ್ನು ಸಮಿತಿ ಗಂಭೀರವಾಗಿ ಪರಿಗಣಿಸಿದೆ ಎಂದು ತಿಳಿಸಿದೆ.
ಪರೀಕ್ಷಾ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಅದರ ವಿರುದ್ಧ ಕೈಗೊಳ್ಳುತ್ತಿರುವ ಕಠಿಣ ಕ್ರಮಗಳ ಕುರಿತು ಪ್ರಧಾನಿ ಮೋದಿ ಮಾತನಾಡಿದ್ದ ವಿಡಿಯೋವನ್ನು ಫೇಸ್ಬುಕ್ನಿಂದ ಸುಮಾರು 5 ರಿಂದ 6 ಗಂಟೆಗಳ ಕಾಲ ತೆರವು ಮಾಡಲಾಗಿತ್ತು. ಆಕ್ಷೇಪದ ಬಳಿಕ ಅದನ್ನು ಮತ್ತೆ ಮರು ಸ್ಥಾಪಿಸಲಾಗಿತ್ತು.
ಇದೇ ವೇಳೆ, ಸೈಬರ್ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗೂಗಲ್ ಇಂಡಿಯಾ ವಿರುದ್ಧವೂ ಕ್ರಮ ಕೈಗೊಳ್ಳುವಂತೆ ಸಂಸದೀಯ ಸಮಿತಿ ಸರ್ಕಾರಕ್ಕೆ ಶಿಫಾರಸು ಮಾಡಿದೆ. ವಂಚಕ ಆ್ಯಪ್ಗಳ ಮೂಲಕ ಹೂಡಿಕೆ ಮಾಡಿ 48 ಲಕ್ಷ ರೂ.ಗಿಂತ ಹೆಚ್ಚು ಹಣ ಕಳೆದುಕೊಂಡಿರುವುದಾಗಿ ದೂರುದಾರರು ಆರೋಪಿಸಿರುವ ಪ್ರಕರಣದ ಕುರಿತು ಚರ್ಚೆ ನಡೆಸಿದ ಬಳಿಕ ಈ ಸೂಚನೆ ನೀಡಲಾಗಿದೆ.
ಹೈದರಾಬಾದ್ ಸೈಬರ್ ಪೊಲೀಸರು ಸೈಬರ್ ವಂಚಕರೊಂದಿಗೆ ಗೂಗಲ್ ಇಂಡಿಯಾ ಮುಖ್ಯಸ್ಥರನ್ನು ಸಹ ಆರೋಪಿಯನ್ನಾಗಿ ಪರಿಗಣಿಸಿ ನಡೆಸಿದ ಕ್ರಮದ ಕುರಿತು ಸಮಿತಿ ಚರ್ಚಿಸಿದ್ದು, ಇದೇ ರೀತಿಯ ಕ್ರಮವನ್ನು ಭಾರತ ಸರ್ಕಾರವು ಗೂಗಲ್ ಇಂಡಿಯಾ ವಿರುದ್ಧವೂ ಕೈಗೊಳ್ಳಬೇಕು ಎಂದು ಅಭಿಪ್ರಾಯಪಟ್ಟಿದೆ.
13-08-26 08:09 pm
HK News Staffer
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
ಐಷಾರಾಮಿ ಹೊಟೇಲ್ ಬಳಿಕ ಸರ್ಕಾರಿ ಕಚೇರಿಗಳ ಕ್ಯಾಂಟೀನ್...
13-08-26 02:22 pm
ಸಚಿವ ಸ್ಥಾನ ಕೈತಪ್ಪಿದ ಮಂಕಾಳ ವೈದ್ಯಗೆ ವಿಧಾನಸಭೆ ಉಪ...
13-08-26 01:00 pm
ಕೊನೆಗೂ ಖಾತೆ ಫೈನಲ್ ; ಜಮೀರ್ ಡೌನ್ ಗ್ರೇಡ್, ಖಾದರ್...
12-08-26 06:57 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
12-08-26 11:06 pm
HK News Desk
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
Mangalore Railway, Train: ಕಾಲು ಜಾರಿ ರೈಲಿನಡಿ ಬ...
11-08-26 10:23 pm
ಮೂಡುಬಿದಿರೆಯಲ್ಲಿ ಸಿಲಿಂಡರ್ ಸ್ಫೋಟ ; ಆರು ವರ್ಷದ ಬಾ...
11-08-26 10:03 pm
13-08-26 04:29 pm
HK News Staffer
ನಿರ್ಮಾಣ ಹಂತದ ಕಟ್ಟಡದಿಂದ ಕೆಳಕ್ಕೆ ಬಿದ್ದ ವಲಸೆ ಕಾರ...
13-08-26 03:22 pm
ಮದುವೆ ನಿಶ್ಚಿತಾರ್ಥ ಆಗಿದ್ದ ಎಸ್ ಬಿಐ ಬ್ಯಾಂಕ್ ಉದ್ಯ...
13-08-26 01:17 pm
Mangalore crime, Arrest: ಕೈ ಕೋಳದಲ್ಲೇ ಪೊಲೀಸರನ್...
12-08-26 11:18 pm
Panambur Robbery, Update, Mangalore: ಪಣಂಬೂರು...
12-08-26 07:47 pm