ಬ್ರೇಕಿಂಗ್ ನ್ಯೂಸ್
19-08-26 12:10 pm HK News Staffer ದೇಶ - ವಿದೇಶ
ನವದೆಹಲಿ, ಆ.19: ಭಾರತದ ರಾಷ್ಟ್ರಗೀತೆ 'ಜನ ಗಣ ಮನ' ಗೀತೆಯನ್ನು ಆ ಸ್ಥಾನಮಾನದಿಂದ ತೆಗೆದುಹಾಕಿ, ಅದರ ಜಾಗದಲ್ಲಿ ‘ವಂದೇ ಮಾತರಂ’ ಹಾಡನ್ನು ರಾಷ್ಟ್ರಗೀತೆಯನ್ನಾಗಿ ಮಾಡಬೇಕು ಎಂದು ಶಕ್ತಿಮಾನ್ ಖ್ಯಾತಿಯ ನಟ ಮುಖೇಶ್ ಖನ್ನಾ ಆಗ್ರಹ ಮಾಡಿದ್ದಾರೆ.
ವಂದೇಮಾತರಂ ಗೀತೆಯ ಪೂರ್ತಿ ಹಾಡಿನ ಕಡ್ಡಾಯದ ಬಗ್ಗೆ ಪರ- ವಿರೋಧ ಚರ್ಚೆ ಇರುವಾಗಲೇ ಖ್ಯಾತ ನಟ ಮುಖೇಶ್ ಖನ್ನಾ ಈ ಆಗ್ರಹ ಮಾಡಿರುವುದು ಮತ್ತೆ ಚರ್ಚೆಗೀಡಾಗಿದೆ. ಇತ್ತೀಚೆಗೆ ಸ್ವಾತಂತ್ರ್ಯ ಹೋರಾಟಗಾರರ ಸ್ಮರಣಾರ್ಥ ಆವೋ ಬಚ್ಚೋಂ ಎಂಬ ನೂತನ ದೇಶಭಕ್ತಿ ಗೀತೆಯನ್ನು ಬಿಡುಗಡೆ ಮಾಡಿದ ಸಂದರ್ಭದಲ್ಲಿ ನೀಡಿದ ಸಂದರ್ಶನದಲ್ಲಿ ಮುಖೇಶ್ ಖನ್ನಾ ಅವರು ರಾಷ್ಟ್ರಗೀತೆಯ ವಿಚಾರದಲ್ಲಿ ತಮ್ಮ ಅನಿಸಿಕೆ ತಿಳಿಸಿದ್ದಾರೆ.
‘ಜನ ಗಣ ಮನ ನಮ್ಮ ದೇಶದ ನಿಜವಾದ ರಾಷ್ಟ್ರಗೀತೆಯಲ್ಲ. ಅದನ್ನು ಬ್ರಿಟನ್ನಿನ ರಾಣಿ ಎಲಿಜಬೆತ್ ಅವರನ್ನು ಹೊಗಳಲು ರವೀಂದ್ರನಾಥ ಠಾಗೋರ್ ಅವರು ಬರೆದಿದ್ದರು. ಅದನ್ನೇ ನಾವು ರಾಷ್ಟ್ರಗೀತೆಯಾಗಿ ಸ್ವೀಕರಿಸಿ ಗೌರವಿಸುತ್ತ ಬಂದಿದ್ದೇವೆ. ಆದರೆ ಅದು ನಮ್ಮದಲ್ಲ. ವಂದೇ ಮಾತರಂ ಮಾತ್ರವೇ ನಮ್ಮ ನಿಜವಾದ ರಾಷ್ಟ್ರಗೀತೆ ಆಗಬೇಕು. ಲತಾ ಮಂಗೇಷ್ಕರ್ ಅವರು ಅದನ್ನು ಅತ್ಯಂತ ಸುಂದರವಾಗಿ ಹಾಡಿದ್ದಾರೆ ಎಂದು ಪ್ರತಿಪಾದಿಸಿದ್ದಾರೆ.
‘ಜನ ಗಣ ಮನ ಗೀತೆಯನ್ನು ಆದಷ್ಟು ಬೇಗ ನಮ್ಮ ರಾಷ್ಟ್ರಗೀತೆಯ ಸ್ಥಾನದಿಂದ ತೆಗೆದುಹಾಕಬೇಕು ಮತ್ತು ವಂದೇ ಮಾತರಂ ಅನ್ನು ಅಧಿಕೃತವಾಗಿ ಜಾರಿಗೆ ತರಬೇಕು. ಪ್ರಧಾನಿ ನರೇಂದ್ರ ಮೋದಿ ಅವರು ಈಗಾಗಲೇ ಈ ನಿಟ್ಟಿನಲ್ಲಿ ಕೆಲಸ ಮಾಡುತ್ತಿದ್ದಾರೆ. ಈಗ ಪ್ರತಿಯೊಂದು ಶಾಲೆಯಲ್ಲಿ ಮತ್ತು ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯನ್ನು ಕಡ್ಡಾಯವಾಗಿ ಹಾಡಲಾಗುತ್ತಿದೆ’ ಎಂದು ಹೇಳಿದ್ದಾರೆ. ತಾವು ಕೂಡ ಸುಮಾರು 7 ನಿಮಿಷಗಳ ಸುದೀರ್ಘ ‘ವಂದೇ ಮಾತರಂ’ ಗೀತೆಯನ್ನು ರೆಕಾರ್ಡ್ ಮಾಡಿದ್ದು, ಅದನ್ನು ಶೀಘ್ರದಲ್ಲೇ ಬಿಡುಗಡೆ ಮಾಡುವುದಾಗಿ ಮುಖೇಶ್ ಖನ್ನಾ ತಿಳಿಸಿದ್ದಾರೆ.
19-08-26 09:55 pm
HK News Staffer
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
ಹನೂರು ಎನ್ಕೌಂಟರ್; ತಮಿಳುನಾಡು ಕ್ಯಾತೆ ಬೆನ್ನಲ್ಲೇ...
19-08-26 05:38 pm
ವಂದೇ ಮಾತರಂ ವಿವಾದ ; ಜೈಲಿಗೆ ಹಾಕಿದ್ರೂ ನಾನು ವಂದೇ...
19-08-26 02:15 pm
ಆಹಾರ ಸುರಕ್ಷತೆಗೆ ಖಾದರ್ ಹೊಸ ಪ್ಲ್ಯಾನ್; ಹೋಟೆಲ್ ಆ...
17-08-26 02:26 pm
19-08-26 02:13 pm
HK News Staffer
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
ನಿತಿನ್ ನಬಿನ್ ಸಾರಥ್ಯದಲ್ಲಿ ಬಿಜೆಪಿಗೆ ಹೊಸ ಟೀಮ್ ;...
17-08-26 09:45 pm
19-08-26 08:40 pm
HK News Staffer
ಜೈಲಿನ ಜಾಮರ್ ಸಮಸ್ಯೆ ಇತ್ಯರ್ಥಕ್ಕೆ ಕಾಲಮಿತಿ ನಿಗದಿಪ...
19-08-26 04:19 pm
ಕರಾವಳಿಯಲ್ಲಿ ನಾಗರ ಪಂಚಮಿ ಸಂಭ್ರಮ ; ನಾಗಬನ, ನಾಗ ಸ...
17-08-26 05:07 pm
ನಾಗರಪಂಚಮಿ ; ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ಸ...
16-08-26 09:33 pm
After Rotten Chicken Scare at KFC, McDonald’s...
16-08-26 08:29 pm
19-08-26 07:25 pm
HK News Staffer
ಆಸ್ತಿ ವಿವಾದ ; ಪ್ರಿಯಕರನ ಜೊತೆ ಸೇರಿ ಅಪ್ಪನನ್ನ ಕಲಿ...
18-08-26 10:06 pm
ಮೊಬೈಲ್ ಗೀಳು ಬೇಡ ಎಂದಿದ್ದ ಅಜ್ಜನನ್ನೇ ಕೊಲ್ಲಿಸಿದ 1...
18-08-26 06:02 pm
ಚಿಕ್ಕಬಾಣಾವರ ತಂದೆ, ಮಗು ಸಾವಿಗೆ ರೋಚಕ ಟ್ವಿಸ್ಟ್ ;...
18-08-26 03:00 pm
ಬೆಳಗಾವಿಯಲ್ಲಿ ಬೀದಿ ನಾಯಿಗಳ ಅಟ್ಟಹಾಸ ; ವೃದ್ಧನ ಮೇಲ...
17-08-26 10:04 pm