ಬ್ರೇಕಿಂಗ್ ನ್ಯೂಸ್
19-08-26 12:10 pm HK News Staffer ದೇಶ - ವಿದೇಶ
ನವದೆಹಲಿ, ಆ.19: ಭಾರತದ ರಾಷ್ಟ್ರಗೀತೆ 'ಜನ ಗಣ ಮನ' ಗೀತೆಯನ್ನು ಆ ಸ್ಥಾನಮಾನದಿಂದ ತೆಗೆದುಹಾಕಿ, ಅದರ ಜಾಗದಲ್ಲಿ ‘ವಂದೇ ಮಾತರಂ’ ಹಾಡನ್ನು ರಾಷ್ಟ್ರಗೀತೆಯನ್ನಾಗಿ ಮಾಡಬೇಕು ಎಂದು ಶಕ್ತಿಮಾನ್ ಖ್ಯಾತಿಯ ನಟ ಮುಖೇಶ್ ಖನ್ನಾ ಆಗ್ರಹ ಮಾಡಿದ್ದಾರೆ.
ವಂದೇಮಾತರಂ ಗೀತೆಯ ಪೂರ್ತಿ ಹಾಡಿನ ಕಡ್ಡಾಯದ ಬಗ್ಗೆ ಪರ- ವಿರೋಧ ಚರ್ಚೆ ಇರುವಾಗಲೇ ಖ್ಯಾತ ನಟ ಮುಖೇಶ್ ಖನ್ನಾ ಈ ಆಗ್ರಹ ಮಾಡಿರುವುದು ಮತ್ತೆ ಚರ್ಚೆಗೀಡಾಗಿದೆ. ಇತ್ತೀಚೆಗೆ ಸ್ವಾತಂತ್ರ್ಯ ಹೋರಾಟಗಾರರ ಸ್ಮರಣಾರ್ಥ ಆವೋ ಬಚ್ಚೋಂ ಎಂಬ ನೂತನ ದೇಶಭಕ್ತಿ ಗೀತೆಯನ್ನು ಬಿಡುಗಡೆ ಮಾಡಿದ ಸಂದರ್ಭದಲ್ಲಿ ನೀಡಿದ ಸಂದರ್ಶನದಲ್ಲಿ ಮುಖೇಶ್ ಖನ್ನಾ ಅವರು ರಾಷ್ಟ್ರಗೀತೆಯ ವಿಚಾರದಲ್ಲಿ ತಮ್ಮ ಅನಿಸಿಕೆ ತಿಳಿಸಿದ್ದಾರೆ.
‘ಜನ ಗಣ ಮನ ನಮ್ಮ ದೇಶದ ನಿಜವಾದ ರಾಷ್ಟ್ರಗೀತೆಯಲ್ಲ. ಅದನ್ನು ಬ್ರಿಟನ್ನಿನ ರಾಣಿ ಎಲಿಜಬೆತ್ ಅವರನ್ನು ಹೊಗಳಲು ರವೀಂದ್ರನಾಥ ಠಾಗೋರ್ ಅವರು ಬರೆದಿದ್ದರು. ಅದನ್ನೇ ನಾವು ರಾಷ್ಟ್ರಗೀತೆಯಾಗಿ ಸ್ವೀಕರಿಸಿ ಗೌರವಿಸುತ್ತ ಬಂದಿದ್ದೇವೆ. ಆದರೆ ಅದು ನಮ್ಮದಲ್ಲ. ವಂದೇ ಮಾತರಂ ಮಾತ್ರವೇ ನಮ್ಮ ನಿಜವಾದ ರಾಷ್ಟ್ರಗೀತೆ ಆಗಬೇಕು. ಲತಾ ಮಂಗೇಷ್ಕರ್ ಅವರು ಅದನ್ನು ಅತ್ಯಂತ ಸುಂದರವಾಗಿ ಹಾಡಿದ್ದಾರೆ ಎಂದು ಪ್ರತಿಪಾದಿಸಿದ್ದಾರೆ.
‘ಜನ ಗಣ ಮನ ಗೀತೆಯನ್ನು ಆದಷ್ಟು ಬೇಗ ನಮ್ಮ ರಾಷ್ಟ್ರಗೀತೆಯ ಸ್ಥಾನದಿಂದ ತೆಗೆದುಹಾಕಬೇಕು ಮತ್ತು ವಂದೇ ಮಾತರಂ ಅನ್ನು ಅಧಿಕೃತವಾಗಿ ಜಾರಿಗೆ ತರಬೇಕು. ಪ್ರಧಾನಿ ನರೇಂದ್ರ ಮೋದಿ ಅವರು ಈಗಾಗಲೇ ಈ ನಿಟ್ಟಿನಲ್ಲಿ ಕೆಲಸ ಮಾಡುತ್ತಿದ್ದಾರೆ. ಈಗ ಪ್ರತಿಯೊಂದು ಶಾಲೆಯಲ್ಲಿ ಮತ್ತು ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯನ್ನು ಕಡ್ಡಾಯವಾಗಿ ಹಾಡಲಾಗುತ್ತಿದೆ’ ಎಂದು ಹೇಳಿದ್ದಾರೆ. ತಾವು ಕೂಡ ಸುಮಾರು 7 ನಿಮಿಷಗಳ ಸುದೀರ್ಘ ‘ವಂದೇ ಮಾತರಂ’ ಗೀತೆಯನ್ನು ರೆಕಾರ್ಡ್ ಮಾಡಿದ್ದು, ಅದನ್ನು ಶೀಘ್ರದಲ್ಲೇ ಬಿಡುಗಡೆ ಮಾಡುವುದಾಗಿ ಮುಖೇಶ್ ಖನ್ನಾ ತಿಳಿಸಿದ್ದಾರೆ.
09-09-26 10:52 am
HK News Staffer
ಕಳಸದಲ್ಲಿ ರಸ್ತೆ ಅವ್ಯವಸ್ಥೆಯ ಎಫೆಕ್ಟ್: ‘ಹುಡುಗ-ಹು...
08-09-26 02:24 pm
ಐಪಿಎಸ್ ಅಧಿಕಾರಿಗಳ ಭರ್ಜರಿ ವರ್ಗಾವಣೆ: ಮಂಗಳೂರು ಡಿಸ...
07-09-26 01:33 pm
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
10-09-26 10:27 am
HK News Staffer
ತುಳು ಮಂಗಳೂರಿಗರ ‘ರಾಷ್ಟ್ರಭಾಷೆ’ ; ಕರಾವಳಿಯ ಮೊದಲ ಸ...
09-09-26 09:04 pm
ಬಾರ್ಕೂರಿನಲ್ಲಿ ಅಪರೂಪದ ಸಿಡಿತಲೆ ವೀರಗಲ್ಲು ಪತ್ತೆ ;...
09-09-26 03:29 pm
ಮಂಗಳೂರಿನಲ್ಲಿ ಸಂಪುಟ ಸಭೆ ; ಪುತ್ತೂರಿನಲ್ಲಿ ಆಯುರ್ವ...
09-09-26 02:03 pm
ಮಂಗಳೂರು ರೈಲ್ವೇ ಆಡಳಿತಾತ್ಮಕ ವರ್ಗಾವಣೆ ಪ್ರಕ್ರಿಯೆ...
08-09-26 05:20 pm
09-09-26 08:16 pm
HK News Staffer
ಬೆಳ್ಳಾರೆ ಸರ್ಕಾರಿ ಬಾಲಕಿಯರ ಹಾಸ್ಟೆಲ್ನಲ್ಲಿ ಬಟ್ಟೆ...
09-09-26 07:45 pm
ಮನದಲ್ಲೂ ಹುಲಿ, ಡಿಪಿಯಲ್ಲೂ ಹುಲಿ ; ಕೊನೆಗೆ ಅದೇ ಹುಲ...
09-09-26 07:44 pm
ಹೆಂಡತಿ ಅಡುಗೆ ಮಾಡಲ್ಲ, ಅತಿಯಾಗಿ ಮೊಬೈಲ್ ಫೋನ್ ಬಳಸು...
09-09-26 06:20 pm
8 ತಿಂಗಳ ಬಳಿಕ ನಾಪತ್ತೆಯಾಗಿದ್ದ ಬೆಂಗಳೂರು ಪಿಯು ವಿದ...
09-09-26 12:16 pm