ಬ್ರೇಕಿಂಗ್ ನ್ಯೂಸ್
09-01-21 11:52 am Headline Karnataka News Network ದೇಶ - ವಿದೇಶ
ಸ್ಯಾನ್ಫ್ರಾನ್ಸಿಸ್ಕೊ, ಜ.8: ಅಮೆರಿಕದ ಸಂಸತ್ ಮೇಲೆ ಟ್ರಂಪ್ ಬೆಂಬಲಿಗರು ದಾಳಿ ನಡೆಸಿದ ಹಿನ್ನೆಲೆಯಲ್ಲಿ ಟ್ರಂಪ್ ಮತ್ತಷ್ಟು ಹಿಂಸಾಚಾರಕ್ಕೆ ಕುಮ್ಮಕ್ಕು ನೀಡುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಟ್ರಂಪ್ ಟ್ವಿಟ್ಟರ್ ಖಾತೆಯನ್ನು ಶಾಶ್ವತವಾಗಿ ಆಗಿ ರದ್ದುಪಡಿಸಿರುವುದಾಗಿ ಟ್ವಿಟ್ಟರ್ ಪ್ರಕಟಿಸಿದೆ.
"@ರಿಯಲ್ಡೊನಾಲ್ಡ್ಟ್ರಂಪ್ ಖಾತೆಯ ಇತ್ತೀಚಿನ ಟ್ವೀಟ್ಗಳನ್ನು ಕೂಲಂಕುಷವಾಗಿ ಪರಿಶೀಲಿಸಿದ ಬಳಿಕ, ಮತ್ತಷ್ಟು ಹಿಂಸೆಗೆ ಕುಮ್ಮಕ್ಕು ನೀಡುವ ಸಾಧ್ಯತೆ ಕಂಡುಬಂದ ಹಿನ್ನೆಲೆಯಲ್ಲಿ ನಾವು ಶಾಶ್ವತವಾಗಿ ಈ ಖಾತೆಯನ್ನು ರದ್ದುಪಡಿಸುತ್ತಿದ್ದೇವೆ" ಎಂದು ಟ್ವಿಟ್ಟರ್ ಹೇಳಿಕೆ ನೀಡಿದೆ.

ಬುಧವಾರ ಅಮೆರಿಕ ಸಂಸತ್ತಿನ ಮೇಲೆ ಟ್ರಂಪ್ ಬೆಂಬಲಿಗರು ದಾಳಿ ನಡೆಸಿದ ಬೆನ್ನಲ್ಲೇ 12 ಗಂಟೆ ಕಾಲ ಟ್ರಂಪ್ ಅವರ ಅತ್ಯಂತ ಪ್ರಿಯವಾದ ಟ್ವಿಟ್ಟರ್ ಖಾತೆಯನ್ನು ತಾತ್ಕಾಲಿಕವಾಗಿ ರದ್ದುಪಡಿಸಲಾಗಿತ್ತು. ಜತೆಗೆ ನಿಯಮಾವಳಿಯನ್ನು ಉಲ್ಲಂಘಿಸಿದರೆ ಶಾಶ್ವತವಾಗಿ ರದ್ದುಪಡಿಸುವು ದಾಗಿ ಎಚ್ಚರಿಸಲಾಗಿತ್ತು.
ಗುರುವಾರ ಮತ್ತೆ ಸಕ್ರಿಯರಾಗಿದ್ದ ಟ್ರಂಪ್, ತಮ್ಮ ಬೆಂಬಲಿಗರಿಂದ ನಡೆದ ದಾಳಿಯ ಬಳಿಕದ ಉದ್ವಿಗ್ನ ಪರಿಸ್ಥಿತಿಯ ಕುರಿತ ವೀಡಿಯೊ ಪೋಸ್ಟ್ ಮಾಡಿದ್ದರು. ತಮ್ಮ ಅಧ್ಯಕ್ಷಾವಧಿ ಮುಕ್ತಾಯವಾಗುತ್ತಿದೆ. ಜೋ ಬೈಡನ್ ಅವರಿಗೆ ಸುಲಲಿತವಾಗಿ ಅಧಿಕಾರ ವರ್ಗಾಯಿಸುತ್ತೇನೆ ಎಂದು ಸ್ಪಷ್ಟಪಡಿಸಿದ್ದರು. ಆದರೆ ಬೈಡನ್ ಅವರನ್ನು ಅಭಿನಂದಿಸಿಲ್ಲ ಅಥವಾ ಅವರ ಉತ್ತರಾಧಿಕಾರಿಯ ಹೆಸರನ್ನೂ ಎಲ್ಲೂ ಉಲ್ಲೇಖಿಸಿಲ್ಲ.

ಮುಂದಿನ ಕ್ರಮಕ್ಕಾಗಿ ಟ್ರಂಪ್ ಅವರ ಸಾಮಾಜಿಕ ಜಾಲತಾಣ ಚಟುವಟಿಕೆಗಳ ಮೇಲೆ ನಿಗಾ ಇಡಲಾಗುವುದು ಎಂದು ಟ್ವಿಟ್ಟರ್ ಹೇಳಿಕೆ ನೀಡಿದೆ.
Twitter Inc said on Friday that it has permanently suspended US President Donald Trump’s account due to the risk of further incitement of violence following the storming of the US Capitol on Wednesday by hundreds of his supporters.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
23-08-26 06:17 pm
HK News Staffer
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
24-08-26 12:06 pm
HK News Staffer
ಡೇವಿಡ್ ಡಿಸೋಜ ಹತ್ಯೆಗೆ ಶಾರ್ಪ್ ಶೂಟರ್ಗಳನ್ನು ರವಾನ...
24-08-26 11:05 am
ಹೊಳೆನರಸೀಪುರ ; ಟ್ರ್ಯಾಕ್ಟರ್ ಕೀಯನ್ನು ತಿರುಗಿಸಿದ ಮ...
23-08-26 05:20 pm
ಹೆತ್ತವರನ್ನು ಕೊಲ್ತೇನೆಂದು ಹೇಳಿ ಒಂಬತ್ತನೇ ಕ್ಲಾಸ್...
22-08-26 12:43 pm
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm