ಬ್ರೇಕಿಂಗ್ ನ್ಯೂಸ್
29-08-26 03:36 pm HK News Staffer ದೇಶ - ವಿದೇಶ
ಬೆಂಗಳೂರು, ಆ.29: ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್ ಮುಖ್ಯಸ್ಥ ಲ್ಯಾಕ್ಸ್ ಗೋಪಿಸೆಟ್ಟಿ ಅವರು ನೇಪಾಳದಲ್ಲಿ ಸಂಭವಿಸಿದ ಭೀಕರ ಪ್ರವಾಹದ ಬಳಿಕ ಸಂಪರ್ಕಕ್ಕೆ ಸಿಗುತ್ತಿಲ್ಲ. ವೈಯಕ್ತಿಕ ಪ್ರವಾಸದ ನೆಲೆಯಲ್ಲಿ ಅವರು ನೇಪಾಳಕ್ಕೆ ತೆರಳಿದ್ದರು. ಪ್ರವಾಹದ ಬಳಿಕ ಅವರು ಎಲ್ಲಿದ್ದಾರೆಂದು ತಿಳಿದುಬಂದಿಲ್ಲ ಎಂದು ಇನ್ಫೋಸಿಸ್ ಹೇಳಿಕೆಯಲ್ಲಿ ತಿಳಿಸಿದೆ.
ಇನ್ಫೋಸಿಸ್ ಅಂಗಸಂಸ್ಥೆಯಾಗಿರುವ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್ ಮುಖ್ಯವಾಗಿ ಅಮೆರಿಕ ಮತ್ತು ಕೆನಡಾದ ಸಾರ್ವಜನಿಕ ವಲಯಕ್ಕೆ ಐಟಿ ಸೇವೆಗಳನ್ನು ಒದಗಿಸುತ್ತದೆ. ಗೋಪಿಸೆಟ್ಟಿ ಅವರು ವೈಯಕ್ತಿಕ ಪ್ರವಾಸದ ಹಿನ್ನೆಲೆಯಲ್ಲಿ ಈ ಪ್ರದೇಶಕ್ಕೆ ಭೇಟಿ ನೀಡಿದ್ದರು. ಅವರ ಸುರಕ್ಷತೆ ಮತ್ತು ಕ್ಷೇಮವನ್ನು ಖಚಿತಪಡಿಸಿಕೊಳ್ಳುವುದು ಸದ್ಯ ತಮ್ಮ ಪ್ರಮುಖ ಆದ್ಯತೆಯಾಗಿದೆ ಎಂದು ಬೆಂಗಳೂರಿನಲ್ಲಿ ಕೇಂದ್ರ ಕಚೇರಿ ಹೊಂದಿರುವ ಇನ್ಫೋಸಿಸ್ ಹೇಳಿಕೆಯಲ್ಲಿ ತಿಳಿಸಿದೆ.
ಗೋಪಿಸೆಟ್ಟಿ ಅವರೊಂದಿಗೆ ಸಂಪರ್ಕ ಸಾಧಿಸಲು ಹಾಗೂ ಹೆಚ್ಚಿನ ಮಾಹಿತಿ ಸಂಗ್ರಹಿಸಲು ಸಂಬಂಧಿತ ಸಂಸ್ಥೆಗಳೊಂದಿಗೆ ಕಂಪನಿ ಪ್ರಯತ್ನಿಸಿದೆ. ಗೋಪಿಸೆಟ್ಟಿ ಅವರ ಕುಟುಂಬದೊಂದಿಗೆ ನಿರಂತರ ಸಂಪರ್ಕದಲ್ಲಿದ್ದು, ಈ ಕಷ್ಟದ ಸಮಯದಲ್ಲಿ ಅಗತ್ಯವಿರುವ ಎಲ್ಲ ನೆರವನ್ನು ಒದಗಿಸುತ್ತಿದೆ ಎಂದು ತಿಳಿಸಿದೆ.
ನೇಪಾಳದಲ್ಲಿ ಸಂಭವಿಸಿದ ಭೀಕರ ಪ್ರವಾಹ ಮತ್ತು ಇದರಿಂದ ಉಂಟಾದ ಜೀವಹಾನಿಗೆ ತೀವ್ರ ದುಃಖ ವ್ಯಕ್ತಪಡಿಸಿರುವುದಾಗಿ ಇನ್ಫೋಸಿಸ್ ಹೇಳಿಕೆಯಲ್ಲಿ ತಿಳಿಸಿದೆ. ನೇಪಾಳ- ಟಿಬೆಟ್ ಗಡಿಯುದ್ದಕ್ಕೂ ಸಂಭವಿಸಿದ ಭೀಕರ ಹಠಾತ್ ಪ್ರವಾಹದ ಬಳಿಕ ಕನಿಷ್ಠ 320 ಭಾರತೀಯರು ನಾಪತ್ತೆಯಾಗಿದ್ದು, ಮತ್ತೂ 400 ಮಂದಿ ಚೀನಾದ ಭಾಗದಲ್ಲಿ ಸಿಲುಕಿಕೊಂಡಿದ್ದಾರೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ತಿಳಿಸಿದೆ. ಪರಿಸ್ಥಿತಿ ನಿಭಾಯಿಸಲು ಕಠ್ಮಂಡುವಿಗೆ ಸಾಧ್ಯವಿರುವ ಎಲ್ಲ ನೆರವು ನೀಡಲು ಭಾರತ ಸಿದ್ಧವಿದೆ ಎಂದು ಸಚಿವಾಲಯ ಹೇಳಿದೆ.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
29-08-26 04:05 pm
HK News Staffer
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm